ಬ್ರೇಕಿಂಗ್ ನ್ಯೂಸ್
14-10-20 09:04 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 14: ಶಿಕ್ಷಕ ವೃತ್ತಿಯಲ್ಲಿದ್ದ ತನ್ನ ತಂದೆ, ತಾಯಿ ಕೊರೊನಾ ಸೋಂಕಿಗೆ ಒಳಗಾಗಿರುವುದಕ್ಕೆ ಶಿಕ್ಷಣ ಇಲಾಖೆಯ ವಿದ್ಯಾಗಮ ಯೋಜನೆಯೇ ಕಾರಣ ಎಂದು ಆರೋಪಿಸಿ ಪುತ್ರಿ ಜಾಲತಾಣದಲ್ಲಿ ಬರೆದ ಪತ್ರಕ್ಕೆ ಸಿಎಂ ಯಡಿಯೂರಪ್ಪ ತುರ್ತಾಗಿ ಸ್ಪಂದಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾಯಿಯ ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸಲು ಸಿಎಂ ಯಡಿಯೂರಪ್ಪ ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಮೂಡುಬಿದ್ರೆ ತಾಲೂಕಿನ ಶಿರ್ತಾಡಿ ಗ್ರಾಮದ ನಿವಾಸಿಗಳಾದ ಶಿಕ್ಷಕ ದಂಪತಿ ಶಶಿಕಾಂತ್ ವೈ ಮತ್ತು ಪದ್ಮಾಕ್ಷಿ ಎನ್. ಸೆ.29ರಂದು ಕೊರೊನಾ ಸೋಂಕಿಗೆ ಒಳಗಾಗಿದ್ದರು. ತಾಯಿ ಪದ್ಮಾಕ್ಷಿ ಸ್ಥಿತಿ ಗಂಭೀರವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಪೋರ್ಟ್ ನಲ್ಲಿದ್ದಾರೆ. ಇಬ್ಬರೂ ಶಿಕ್ಷಕ ವೃತ್ತಿಯಲ್ಲಿರುವ ಕಾರಣ ಸರಕಾರ ನಮ್ಮ ಬೆಂಬಲಕ್ಕೆ ಬರಬೇಕು. ಆಸ್ಪತ್ರೆಯ ವೆಚ್ಚ ಭರಿಸಲು ನಮ್ಮಿಂದ ಸಾಧ್ಯವಾಗದು. ಸರಕಾರದಿಂದ ಚಿಕಿತ್ಸೆಯ ಭರಿಸುವಂತೆ ಕೇಳಿಕೊಳ್ಳುತ್ತೇನೆ ಎಂದು ಪುತ್ರಿ ಐಶ್ವರ್ಯ ಜೈನ್ ಫೇಸ್ಬುಕ್ ನಲ್ಲಿ ಶಿಕ್ಷಣ ಸಚಿವರಿಗೆ ಬರೆದ ಪತ್ರ ವೈರಲ್ ಆಗಿದೆ. ಸರಕಾರ ನೆರವು ಬಯಸಿ ಬರೆದ ಪತ್ರಕ್ಕೆ ಈಗ ಸಿಎಂ ಯಡಿಯೂರಪ್ಪ ಸ್ಪಂದಿಸಿದ್ದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಕರೆ ಮಾಡಿ, ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರದಿಂದ ಭರಿಸುವುದಾಗಿ ಹೇಳಿದ್ದಾರೆ. ಅಲ್ಲದೆ, ಹೆಚ್ಚುವರಿ ಚಿಕಿತ್ಸೆ ನೀಡಲು ಏರ್ಪಾಡು ಮಾಡುವಂತೆ ತಿಳಿಸಿದ್ದಾರೆ. ರೋಗಿಯ ಮನೆಯವರಿಂದ ಯಾವುದೇ ಹಣ ಪಡೆಯದಂತೆ ಸೂಚಿಸಿದ್ದಾರೆ.


ಸಿಎಂ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ., ಪದ್ಮಾಕ್ಷಿಯವರ ಪುತ್ರಿ ಐಶ್ವರ್ಯಾಳನ್ನು ಕರೆ ಮಾಡಿ ಸಂಪರ್ಕಿಸಿದ್ದು , ತಾಯಿಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಜಿಲ್ಲಾಡಳಿತ ನೋಡಿಕೊಳ್ಳಲಿದೆ. ಅ.13ರಂದು ಪದ್ಮಾಕ್ಷಿಯವರ ಕೋವಿಡ್ ವರದಿ ನೆಗೆಟಿವ್ ಬಂದಿದ್ದಾಗಿ ಸಾಂತ್ವನ ಹೇಳಿದ್ದಾಗಿ ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm