ಬ್ರೇಕಿಂಗ್ ನ್ಯೂಸ್
07-12-22 10:15 pm Mangalore Correspondent ಕರಾವಳಿ
ಮಂಗಳೂರು, ಡಿ.7: ರಾಜಧಾನಿ ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಜಯಭೇರಿ ಗಳಿಸಿದ್ದಲ್ಲದೆ, 15 ವರ್ಷಗಳಿಂದ ಅಧಿಕಾರದಲ್ಲಿದ್ದ ಬಿಜೆಪಿಯನ್ನು ಸೋಲಿಸಿ ಅಧಿಕಾರದ ಗದ್ದುಗೆಯೇರಿದ್ದು ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ. ಮಂಗಳೂರಿನಲ್ಲಿ ಆಪ್ ಕಾರ್ಯಕರ್ತರು ಪಕ್ಷದ ಕಚೇರಿಯಲ್ಲಿ ಸಿಹಿ ಹಂಚಿಕೊಂಡು ಸಂಭ್ರಮ ಆಚರಿಸಿದ್ದಾರೆ.
ಬಲ್ಮಠದಲ್ಲಿರುವ ಪಕ್ಷದ ಕಚೇರಿಯ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಪಟ್ಟಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿದ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ದೆಹಲಿಯಲ್ಲಿ ಕಳೆದ ಹತ್ತು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷಕ್ಕೆ ರಾಜಧಾನಿಯ ಜನರು ಬಹುಮತ ನೀಡಿದ್ದಾರೆ. ಆಮೂಲಕ ಪಕ್ಷದ ಆಡಳಿತಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಕೇಜ್ರಿವಾಲರ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಜನರು ಮತ ನೀಡಿದ್ದು, ದೆಹಲಿ ಪಾಲಿಕೆಯಲ್ಲಿ 15 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿಯನ್ನು ಜನರು ಸೋಲಿಸಿದ್ದಾರೆ. ಇದು ಗುಜರಾತ್ ಫಲಿತಾಂಶದಲ್ಲೂ ಪ್ರತಿಫಲಿಸಲಿದೆ ಎಂದು ಹೇಳಿದ್ದಾರೆ.


250 ಸದಸ್ಯಬಲದ ದೆಹಲಿ ಪಾಲಿಕೆಯಲ್ಲಿ ಆಪ್ 134 ಸ್ಥಾನಗಳನ್ನು ಗೆದ್ದಿದ್ದು, ಪೂರ್ಣ ಬಹುಮತ ಗಿಟ್ಟಿಸಿದೆ. ಗುಜರಾತ್ ಫಲಿತಾಂಶ ಡಿ.8ರಂದು ಪ್ರಕಟವಾಗಲಿದ್ದು, ಅದಕ್ಕೂ ಒಂದು ದಿನ ಮೊದಲೇ ದೆಹಲಿ ಜನರ ಫಲಿತಾಂಶ ಹೊರಬಿದ್ದಿರುವುದು ಪಕ್ಷಕ್ಕೆ ಬೂಸ್ಟರ್ ಸಿಕ್ಕಂತಾಗಿದೆ. ಪಕ್ಷದ ಪ್ರಮುಖರು ಗುಜರಾತಿನಲ್ಲೂ ಇದೇ ರೀತಿಯ ಫಲಿತಾಂಶ ಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
AAP ends Bjp 15 year hold on Delhi civic body, celebration in Mangalore by Santosh Kamath and other leaders. The Aam Aadmi Party (AAP) has won the Municipal Corporation of Delhi (MCD) election as it pulled ahead of the BJP, which has ruled the civic body for the past 15 years, after over five hours of vote counting.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am