ಜ.12ರಂದು ಉಡುಪಿಯಲ್ಲಿ ಯುವ ಸಂಗಮ ಸಮಾವೇಶ ; 2 ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆ, ಸಿಎಂ ಯೋಗಿ ಆದಿತ್ಯನಾಥ್ ಭಾಗಿ 

09-12-22 02:05 pm       Udupi Correspondent   ಕರಾವಳಿ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜ.12ರಂದು ಉಡುಪಿಗೆ ಆಗಮಿಸಲಿದ್ದಾರೆ. ವಿವೇಕಾನಂದ ಜಯಂತಿ ದಿನದಂದು ರಾಜ್ಯ ಮಟ್ಟದ ಯುವ ಸಂಗಮ ಕಾರ್ಯಕ್ರಮ ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ. 

ಉಡುಪಿ, ಡಿ.9 : ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜ.12ರಂದು ಉಡುಪಿಗೆ ಆಗಮಿಸಲಿದ್ದಾರೆ. ವಿವೇಕಾನಂದ ಜಯಂತಿ ದಿನದಂದು ರಾಜ್ಯ ಮಟ್ಟದ ಯುವ ಸಂಗಮ ಕಾರ್ಯಕ್ರಮ ನಡೆಸಲು ಬಿಜೆಪಿ ಸಿದ್ಧತೆ ನಡೆಸಿದೆ. 

ವಿಶ್ವ ಕಂಡ ಶ್ರೇಷ್ಠ ದಾರ್ಶನಿಕ, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಜಾಗೃತಿಯ ಪ್ರತೀಕವಾದ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಜ.12ರಂದು 'ರಾಷ್ಟ್ರೀಯ ಯುವ ದಿನಾಚರಣೆ'ಯಾಗಿ ಆಚರಿಸಲಾಗುತ್ತದೆ. ಅದೇ ದಿನ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಮಟ್ಟದ 'ಯುವ ಸಂಗಮ' ಸಮಾವೇಶ ಏರ್ಪಡಿಸಿದ್ದು ಅದರಲ್ಲಿ  ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ. 

ಈ ಬಗ್ಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ಸಮ್ಮಿಲನ ಮತ್ತು ಸಮಾವೇಶದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು 2 ಲಕ್ಷಕ್ಕೂ ಮಿಕ್ಕಿ ಯುವ ಮೋರ್ಚಾ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದವರು ತಿಳಿಸಿದ್ದಾರೆ.

Yuva Sangama to be held in Udupi on Jan 12th.