ಬ್ರೇಕಿಂಗ್ ನ್ಯೂಸ್
10-12-22 01:01 pm Mangaluru Correspondent ಕರಾವಳಿ
ಉಳ್ಳಾಲ, ಡಿ.10: ನಟಿ ರಕ್ಷಿತಾ ಪ್ರೇಮ್ ಸಲಹೆ ಮೇರೆಗೆ ಕರಾವಳಿಯ ಕಾರಣಿಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರಿನ ಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದ್ದು ದೈವದ ಆಶೀರ್ವಾದ ಕೋರಿದ್ದಾರೆ.
ತಾನು ನಟಿಸಿರುವ ವೇದ ಸಿನಿಮಾದ ಪ್ರಚಾರಕ್ಕಾಗಿ ಮಂಗಳೂರಿಗೆ ಆಗಮಿಸಿರುವ ಶಿವರಾಜ್ ಕುಮಾರ್ ಇಂದು ಮೊದಲ ಬಾರಿಗೆ ಪತ್ನಿ ಗೀತಾ ಹಾಗೂ ಕುಟುಂಬಸ್ಥರೊಂದಿಗೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇಂದು ಸಂಜೆ ಪಣಂಬೂರು ಬೀಚ್ ನಲ್ಲಿ ನಡೆಯಲಿರುವ ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್ ಗೆ ಶಿವರಾಜ್ ಆಗಮಿಸಿದ್ದು ನಟಿ ರಕ್ಷಿತಾ ಪ್ರೇಮ್ ಸಲಹೆಯ ಮೇರೆಗೆ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿರುವುದಾಗಿ ಅವರು ಹೇಳಿದರು.



ಇವತ್ತು ವೇದಾ ಈವೆಂಟ್ ಇರೋ ಕಾರಣ ಮಂಗಳೂರಿಗೆ ಬಂದಿದ್ದೇನೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಕೊರಗಜ್ಜ ಕ್ಷೇತ್ರಕ್ಕೆ ಬಂದಿದ್ದೇನೆ. ಕೊರಗಜ್ಜನ ಕ್ಷೇತ್ರದ ಕಾರಣಿಕದ ಬಗ್ಗೆ ನನಗೆ ರಕ್ಷಿತಾ ಅನೇಕ ಬಾರಿ ಹೇಳಿದ್ದರು. ಮನುಷ್ಯನ ಸಮಸ್ಯೆಯನ್ನ ಬಹಳ ಸರಳವಾಗಿ ಹೇಳುವ ರೀತಿ ಈ ಕ್ಷೇತ್ರದ್ದಾಗಿದೆ. ಯಾವುದೇ ಆಡಂಬರ ಇಲ್ಲದೇ ಜನರು ಪ್ರಾರ್ಥನೆ ಮಾಡಲು ಇಲ್ಲಿ ಅವಕಾಶ ಇದೆ. ಕೊರಗಜ್ಜನಿಗೆ ವೀಳ್ಯದೆಲೆ ಮತ್ತು ಶರಾಬು ಕೊಟ್ಟು ಪ್ರಾರ್ಥನೆ ಮಾಡುವ ಸರಳ ವಿಧಾನ ಖುಷಿ ಕೊಟ್ಟಿತು. ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ, ಆಗೋದು ಬಿಡೋದು ದೈವದ ಇಚ್ಛೆ, ದೈವದೆದುರು ಶ್ರದ್ಧೆಯಿಂದ ಬೇಡುವುದು ನಮ್ಮ ಕಾರ್ಯ ಎಂದರು.
ರಕ್ಷಿತಾ ಪ್ರೇಮ್ ಅವರು ಈ ಹಿಂದೆ ಕುತ್ತಾರಿಗೆ ಆಗಮಿಸಿ ಕೊರಗಜ್ಜನಿಗೆ ಹರಕೆ ಸಲ್ಲಿಸಿದ್ದರು.
Mangalore actor Shivarajkumar visits kuttar Koragajja Temple offer prayer. As per advice of actress Rakshitha prem Shivarajkumar agreed to visit temple.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm