ಬ್ರೇಕಿಂಗ್ ನ್ಯೂಸ್
10-12-22 01:01 pm Mangaluru Correspondent ಕರಾವಳಿ
ಉಳ್ಳಾಲ, ಡಿ.10: ನಟಿ ರಕ್ಷಿತಾ ಪ್ರೇಮ್ ಸಲಹೆ ಮೇರೆಗೆ ಕರಾವಳಿಯ ಕಾರಣಿಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರಿನ ಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದ್ದು ದೈವದ ಆಶೀರ್ವಾದ ಕೋರಿದ್ದಾರೆ.
ತಾನು ನಟಿಸಿರುವ ವೇದ ಸಿನಿಮಾದ ಪ್ರಚಾರಕ್ಕಾಗಿ ಮಂಗಳೂರಿಗೆ ಆಗಮಿಸಿರುವ ಶಿವರಾಜ್ ಕುಮಾರ್ ಇಂದು ಮೊದಲ ಬಾರಿಗೆ ಪತ್ನಿ ಗೀತಾ ಹಾಗೂ ಕುಟುಂಬಸ್ಥರೊಂದಿಗೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇಂದು ಸಂಜೆ ಪಣಂಬೂರು ಬೀಚ್ ನಲ್ಲಿ ನಡೆಯಲಿರುವ ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್ ಗೆ ಶಿವರಾಜ್ ಆಗಮಿಸಿದ್ದು ನಟಿ ರಕ್ಷಿತಾ ಪ್ರೇಮ್ ಸಲಹೆಯ ಮೇರೆಗೆ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿರುವುದಾಗಿ ಅವರು ಹೇಳಿದರು.



ಇವತ್ತು ವೇದಾ ಈವೆಂಟ್ ಇರೋ ಕಾರಣ ಮಂಗಳೂರಿಗೆ ಬಂದಿದ್ದೇನೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಕೊರಗಜ್ಜ ಕ್ಷೇತ್ರಕ್ಕೆ ಬಂದಿದ್ದೇನೆ. ಕೊರಗಜ್ಜನ ಕ್ಷೇತ್ರದ ಕಾರಣಿಕದ ಬಗ್ಗೆ ನನಗೆ ರಕ್ಷಿತಾ ಅನೇಕ ಬಾರಿ ಹೇಳಿದ್ದರು. ಮನುಷ್ಯನ ಸಮಸ್ಯೆಯನ್ನ ಬಹಳ ಸರಳವಾಗಿ ಹೇಳುವ ರೀತಿ ಈ ಕ್ಷೇತ್ರದ್ದಾಗಿದೆ. ಯಾವುದೇ ಆಡಂಬರ ಇಲ್ಲದೇ ಜನರು ಪ್ರಾರ್ಥನೆ ಮಾಡಲು ಇಲ್ಲಿ ಅವಕಾಶ ಇದೆ. ಕೊರಗಜ್ಜನಿಗೆ ವೀಳ್ಯದೆಲೆ ಮತ್ತು ಶರಾಬು ಕೊಟ್ಟು ಪ್ರಾರ್ಥನೆ ಮಾಡುವ ಸರಳ ವಿಧಾನ ಖುಷಿ ಕೊಟ್ಟಿತು. ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ, ಆಗೋದು ಬಿಡೋದು ದೈವದ ಇಚ್ಛೆ, ದೈವದೆದುರು ಶ್ರದ್ಧೆಯಿಂದ ಬೇಡುವುದು ನಮ್ಮ ಕಾರ್ಯ ಎಂದರು.
ರಕ್ಷಿತಾ ಪ್ರೇಮ್ ಅವರು ಈ ಹಿಂದೆ ಕುತ್ತಾರಿಗೆ ಆಗಮಿಸಿ ಕೊರಗಜ್ಜನಿಗೆ ಹರಕೆ ಸಲ್ಲಿಸಿದ್ದರು.
Mangalore actor Shivarajkumar visits kuttar Koragajja Temple offer prayer. As per advice of actress Rakshitha prem Shivarajkumar agreed to visit temple.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm