ಬ್ರೇಕಿಂಗ್ ನ್ಯೂಸ್
10-12-22 10:38 pm Mangalore Correspondent ಕರಾವಳಿ
ಮಂಗಳೂರು, ಡಿ.10: ಹಿಮಾಚಲ ಪ್ರದೇಶ ಮತ್ತು ದೆಹಲಿ ಪಾಲಿಕೆಯ ಚುನಾವಣೆಯಲ್ಲಿ ಸೋಲಾದ ಬಳಿಕ ಬಿಜೆಪಿಗೆ ಚುನಾವಣೆ ಭಯ ಕಾಡತೊಡಗಿದೆ. ಹಾಗಾಗಿ ಗುಜರಾತ್ ಮಂತ್ರ ಪಠಿಸುತ್ತಿದ್ದಾರೆ. ಗುಜರಾತ್ ರೀತಿಯಲ್ಲೇ ಕರ್ನಾಟಕದಲ್ಲಿಯೂ ಫಲಿತಾಂಶ ಬರಲಿದೆ ಎನ್ನುತ್ತಿದ್ದಾರೆ. ಆದರೆ ಹಿಮಾಚಲದಲ್ಲಿ ಕಾಂಗ್ರೆಸ್, ಬಿಜೆಪಿಯನ್ನು ಸೋಲಿಸಿರುವುದರಿಂದ ಅದನ್ನು ಅರಗಿಸಿಕೊಳ್ಳಲಾಗದೆ ಗುಜರಾತ್ ಮಾದರಿ ಅನ್ನುತ್ತಿದ್ದಾರೆ. ಹಿಮಾಚಲದ ಸೋಲಿನ ಇಲ್ಲಿಯೂ ಮರುಕಳಿಕೆ ಆಗಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಬಿಜೆಪಿಯವರು ಚುನಾವಣೆಯಲ್ಲಿ ಸೋಲುವ ಭಯದಲ್ಲಿ ಇಲ್ಲದ ವಿಚಾರಗಳನ್ನು ಮುಂದಿಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ್ ಎಂದು ಹೇಳಿ ಮುಸ್ಲಿಮರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಇವರಿಗೆ ಖಡಕ್ಕಾಗಿ ಪ್ರತ್ಯುತ್ತರ ನೀಡುತ್ತಿರುವುದರಿಂದ ಅವರನ್ನು ಟಾರ್ಗೆಟ್ ಮಾಡಿದ್ದಾರೆ. ಬಿಜೆಪಿಯವರಿಗೆ ಹಿಂದು- ಮುಸ್ಲಿಂ ನಡುವೆ ಕಂದಕ ಏರ್ಪಡಿಸುವುದೇ ಕೆಲಸವಾಗಿದೆ. ಮುಸ್ಲಿಮರು ಇಲ್ಲದೆ ಬಿಜೆಪಿ ಪಕ್ಷವೇ ಇರುವುದಿಲ್ಲ. ಬಿಜೆಪಿಯವರು ತಮ್ಮ ಬಿ ಟೀಮ್ ಆಗಿ ಎಸ್ಡಿಪಿಐ, ಆಪ್, ಎಐಎಂಐಎಂ ಸೃಷ್ಟಿಸಿದ್ದಾರೆ. ಅವುಗಳಿಗೆ ಫಂಡಿಂಗ್ ಮಾಡಿ, ಕಾಂಗ್ರೆಸ್ ವಿರುದ್ಧ ಛೂಬಿಡುತ್ತಿದ್ದಾರೆ ಎಂದು ಹೇಳಿದರು.


ಒವೈಸಿ ದೇಶ ವಿರೋಧಿ, ಹಿಂದು ವಿರೋಧಿ ಹೇಳಿಕೆ ನೀಡಿದರೂ ಬಿಜೆಪಿಯವರು ಏನೂ ಕ್ರಮ ಕೈಗೊಳ್ಳುವುದಿಲ್ಲ. ಯಾರಾದ್ರೂ ಪ್ರಧಾನಿ ಮೋದಿ ವಿರುದ್ಧ ಮಾತನಾಡಿದರೆ ಜೈಲಿಗೆ ಹಾಕುತ್ತಾರೆ. ಓವೈಸಿ, ಮೋದಿಗೆ ಬೈದರೂ, ಹಿಂದುಗಳಿಗೆ ನೇರಾನೇರ ಬೈದರೂ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಕೇಳದಂತೇ ಇರುತ್ತಾರೆ. ಇದು ಬಿಜೆಪಿಯ ರಾಜಕೀಯ ಎಂದು ಹರೀಶ್ ಕುಮಾರ್ ಹೇಳಿದರು. ಕರಾವಳಿಯಲ್ಲಿ ಮರಳು ಮಾಫಿಯಾ ಮಿತಿ ಮೀರಿದೆ. ಈಗ ಲೋಕಾಯುಕ್ತ ಅಧಿಕಾರಿಗಳು ಮರಳು ಮಾಫಿಯಾ ವಿರುದ್ಧ ದಾಳಿ ನಡೆಸುವಂತಾಗಿದೆ. ಆದರೆ ಸಂಬಂಧಪಟ್ಟ ಅಧಿಕಾರಿಗಳು, ಇದನ್ನು ನಿಯಂತ್ರಣ ಮಾಡಬೇಕಿರುವ ಸಂಸದ, ಶಾಸಕರು ಮೌನವಾಗಿದ್ದಾರೆ ಎಂದು ಹೇಳಿದರು.

ಪ್ರತಿ ಕ್ಷೇತ್ರದಲ್ಲಿ ಎಂಟತ್ತು ಜನ ಆಕಾಂಕ್ಷಿಗಳು ಶಾಸಕ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ, ಯಾವ ರೀತಿ ಆಯ್ಕೆ ಮಾಡುತ್ತೀರಿ ಎಂಬ ಪ್ರಶ್ನೆಗೆ, ಅದು ನಮ್ಮ ಚುನಾವಣೆಗೆ ಆಯ್ಕೆ ಪ್ರಕ್ರಿಯೆ. ಪಕ್ಷದ ನಾಯಕರು ಯಾರು ಅಭ್ಯರ್ಥಿಯಾಗಬೇಕೆಂದು ಆಯ್ಕೆ ಮಾಡುತ್ತಾರೆ. ಹೈಕಮಾಂಡ್ ಅದನ್ನು ನಿರ್ಧರಿಸುತ್ತದೆ. ಈ ಬಾರಿ ರಾಜ್ಯದಲ್ಲಿ 50 ಶೇಕಡಾ ಹೊಸಬರಿಗೆ ಟಿಕೆಟ್ ದೊರೆಯಲಿದೆ ಎಂದು ಹೇಳಿದ್ದಾರೆ.
District Congress MLA Harish Kumar said, “Election fear has started for BJP after results in Himachal Pradesh assembly polls, MCD polls in Delhi and bye-elections. The BJP claim that Karnataka will go the Gujarat way after the recent election results just because they have won in Gujarat. Karnataka will go the Himachal Pradesh way where Congress defeated the BJP.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm