ಬ್ರೇಕಿಂಗ್ ನ್ಯೂಸ್
10-12-22 10:38 pm Mangalore Correspondent ಕರಾವಳಿ
ಮಂಗಳೂರು, ಡಿ.10: ಹಿಮಾಚಲ ಪ್ರದೇಶ ಮತ್ತು ದೆಹಲಿ ಪಾಲಿಕೆಯ ಚುನಾವಣೆಯಲ್ಲಿ ಸೋಲಾದ ಬಳಿಕ ಬಿಜೆಪಿಗೆ ಚುನಾವಣೆ ಭಯ ಕಾಡತೊಡಗಿದೆ. ಹಾಗಾಗಿ ಗುಜರಾತ್ ಮಂತ್ರ ಪಠಿಸುತ್ತಿದ್ದಾರೆ. ಗುಜರಾತ್ ರೀತಿಯಲ್ಲೇ ಕರ್ನಾಟಕದಲ್ಲಿಯೂ ಫಲಿತಾಂಶ ಬರಲಿದೆ ಎನ್ನುತ್ತಿದ್ದಾರೆ. ಆದರೆ ಹಿಮಾಚಲದಲ್ಲಿ ಕಾಂಗ್ರೆಸ್, ಬಿಜೆಪಿಯನ್ನು ಸೋಲಿಸಿರುವುದರಿಂದ ಅದನ್ನು ಅರಗಿಸಿಕೊಳ್ಳಲಾಗದೆ ಗುಜರಾತ್ ಮಾದರಿ ಅನ್ನುತ್ತಿದ್ದಾರೆ. ಹಿಮಾಚಲದ ಸೋಲಿನ ಇಲ್ಲಿಯೂ ಮರುಕಳಿಕೆ ಆಗಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಬಿಜೆಪಿಯವರು ಚುನಾವಣೆಯಲ್ಲಿ ಸೋಲುವ ಭಯದಲ್ಲಿ ಇಲ್ಲದ ವಿಚಾರಗಳನ್ನು ಮುಂದಿಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ್ ಎಂದು ಹೇಳಿ ಮುಸ್ಲಿಮರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಇವರಿಗೆ ಖಡಕ್ಕಾಗಿ ಪ್ರತ್ಯುತ್ತರ ನೀಡುತ್ತಿರುವುದರಿಂದ ಅವರನ್ನು ಟಾರ್ಗೆಟ್ ಮಾಡಿದ್ದಾರೆ. ಬಿಜೆಪಿಯವರಿಗೆ ಹಿಂದು- ಮುಸ್ಲಿಂ ನಡುವೆ ಕಂದಕ ಏರ್ಪಡಿಸುವುದೇ ಕೆಲಸವಾಗಿದೆ. ಮುಸ್ಲಿಮರು ಇಲ್ಲದೆ ಬಿಜೆಪಿ ಪಕ್ಷವೇ ಇರುವುದಿಲ್ಲ. ಬಿಜೆಪಿಯವರು ತಮ್ಮ ಬಿ ಟೀಮ್ ಆಗಿ ಎಸ್ಡಿಪಿಐ, ಆಪ್, ಎಐಎಂಐಎಂ ಸೃಷ್ಟಿಸಿದ್ದಾರೆ. ಅವುಗಳಿಗೆ ಫಂಡಿಂಗ್ ಮಾಡಿ, ಕಾಂಗ್ರೆಸ್ ವಿರುದ್ಧ ಛೂಬಿಡುತ್ತಿದ್ದಾರೆ ಎಂದು ಹೇಳಿದರು.
ಒವೈಸಿ ದೇಶ ವಿರೋಧಿ, ಹಿಂದು ವಿರೋಧಿ ಹೇಳಿಕೆ ನೀಡಿದರೂ ಬಿಜೆಪಿಯವರು ಏನೂ ಕ್ರಮ ಕೈಗೊಳ್ಳುವುದಿಲ್ಲ. ಯಾರಾದ್ರೂ ಪ್ರಧಾನಿ ಮೋದಿ ವಿರುದ್ಧ ಮಾತನಾಡಿದರೆ ಜೈಲಿಗೆ ಹಾಕುತ್ತಾರೆ. ಓವೈಸಿ, ಮೋದಿಗೆ ಬೈದರೂ, ಹಿಂದುಗಳಿಗೆ ನೇರಾನೇರ ಬೈದರೂ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಕೇಳದಂತೇ ಇರುತ್ತಾರೆ. ಇದು ಬಿಜೆಪಿಯ ರಾಜಕೀಯ ಎಂದು ಹರೀಶ್ ಕುಮಾರ್ ಹೇಳಿದರು. ಕರಾವಳಿಯಲ್ಲಿ ಮರಳು ಮಾಫಿಯಾ ಮಿತಿ ಮೀರಿದೆ. ಈಗ ಲೋಕಾಯುಕ್ತ ಅಧಿಕಾರಿಗಳು ಮರಳು ಮಾಫಿಯಾ ವಿರುದ್ಧ ದಾಳಿ ನಡೆಸುವಂತಾಗಿದೆ. ಆದರೆ ಸಂಬಂಧಪಟ್ಟ ಅಧಿಕಾರಿಗಳು, ಇದನ್ನು ನಿಯಂತ್ರಣ ಮಾಡಬೇಕಿರುವ ಸಂಸದ, ಶಾಸಕರು ಮೌನವಾಗಿದ್ದಾರೆ ಎಂದು ಹೇಳಿದರು.
ಪ್ರತಿ ಕ್ಷೇತ್ರದಲ್ಲಿ ಎಂಟತ್ತು ಜನ ಆಕಾಂಕ್ಷಿಗಳು ಶಾಸಕ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ, ಯಾವ ರೀತಿ ಆಯ್ಕೆ ಮಾಡುತ್ತೀರಿ ಎಂಬ ಪ್ರಶ್ನೆಗೆ, ಅದು ನಮ್ಮ ಚುನಾವಣೆಗೆ ಆಯ್ಕೆ ಪ್ರಕ್ರಿಯೆ. ಪಕ್ಷದ ನಾಯಕರು ಯಾರು ಅಭ್ಯರ್ಥಿಯಾಗಬೇಕೆಂದು ಆಯ್ಕೆ ಮಾಡುತ್ತಾರೆ. ಹೈಕಮಾಂಡ್ ಅದನ್ನು ನಿರ್ಧರಿಸುತ್ತದೆ. ಈ ಬಾರಿ ರಾಜ್ಯದಲ್ಲಿ 50 ಶೇಕಡಾ ಹೊಸಬರಿಗೆ ಟಿಕೆಟ್ ದೊರೆಯಲಿದೆ ಎಂದು ಹೇಳಿದ್ದಾರೆ.
District Congress MLA Harish Kumar said, “Election fear has started for BJP after results in Himachal Pradesh assembly polls, MCD polls in Delhi and bye-elections. The BJP claim that Karnataka will go the Gujarat way after the recent election results just because they have won in Gujarat. Karnataka will go the Himachal Pradesh way where Congress defeated the BJP.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm