ಬ್ರೇಕಿಂಗ್ ನ್ಯೂಸ್
11-12-22 02:13 pm Mangalore Correspondent ಕರಾವಳಿ
ಮಂಗಳೂರು, ಡಿ.11 : ನಗರದ ಕಂಕನಾಡಿಯ ಸುಲ್ತಾನ್ ಗೋಲ್ಡ್ ಜುವೆಲ್ಲರಿಗೆ ನುಗ್ಗಿ ಯುವ ಜೋಡಿಗೆ ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣದಲ್ಲಿ ನಾಲ್ವರು ಬಜರಂಗದಳ ಕಾರ್ಯಕರ್ತರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಚೇತನ್, ಪ್ರಕಾಶ್, ಗಣೇಶ್ ಮತ್ತು ಸಿಬಿಲ್ ಎಂಬವರು ಬಂಧಿತರು. ವಾರದ ಹಿಂದೆ ಕಂಕನಾಡಿಯ ಸುಲ್ತಾನ್ ಗೋಲ್ಡ್ ಜುವೆಲ್ಲರಿಗೆ ದಾಳಿ ನಡೆಸಿದ್ದ ಬಜರಂಗದಳ ಕಾರ್ಯಕರ್ತರು ಅಲ್ಲಿದ್ದ ಯುವ ಜೋಡಿಗೆ ಹಲ್ಲೆ ನಡೆಸಿದ್ದರು. ಅಲ್ಲಿ ಕೆಲಸಕ್ಕಿದ್ದ ಹಿಂದು ಯುವತಿ, ಅದೇ ಜುವೆಲ್ಲರಿಯಲ್ಲಿ ಸೇಲ್ಸ್ ಮನ್ ಆಗಿರುವ ಮುಸ್ಲಿಂ ಯುವಕನೊಂದಿಗೆ ತಿರುಗಾಡುತ್ತಿದ್ದಳು. ಈ ಬಗ್ಗೆ ಬಜರಂಗದಳ ಈ ಹಿಂದೆಯೂ ಎಚ್ಚರಿಕೆ ನೀಡಿತ್ತು ಎನ್ನಲಾಗಿದೆ. ಆದರೆ ಕಾರ್ಯಕರ್ತರ ಎಚ್ಚರಿಕೆ ಲೆಕ್ಕಿಸದೆ ಆಕೆ ತಿರುಗಾಟ ಮುಂದುವರಿಸಿದ್ದಳು.
ಯುವತಿ ತೀರ್ಥಹಳ್ಳಿ ಮೂಲದ ನಿವಾಸಿಯಾಗಿದ್ದು ಈ ಹಿಂದೆ ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕಿದ್ದಳು. ಆನಂತರ ಜುವೆಲ್ಲರಿಗೆ ಕೆಲಸ ಬದಲಾಯಿಸಿದ್ದಳು. ಈ ವೇಳೆ, ಅಲ್ಲಿದ್ದ ಯುವಕನ ಪರಿಚಯವಾಗಿ ತಿರುಗಾಟ ಆರಂಭಿಸಿದ್ದಳು. ಈ ಬಗ್ಗೆ ಬಜರಂಗದಳ ಕಾರ್ಯಕರ್ತರು ಯುವತಿಯ ಹೆತ್ತವರಿಗೂ ಮಾಹಿತಿ ನೀಡಿದ್ದರು.
ಮೊನ್ನೆ ಹೆತ್ತವರನ್ನು ಜುವೆಲ್ಲರಿಗೆ ಕರೆಸಿ, ಅವರಿಂದಲೇ ಯುವತಿಗೆ ಎರಡೇಟು ಬಿಗಿಯುವಂತೆ ಮಾಡಿದ್ದಾರೆ. ಅಲ್ಲದೆ, ಮುಸ್ಲಿಂ ಯುವಕನಿಗೂ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಘಟನೆ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರತ್ಯೇಕ ಮೂರು ದೂರು ದಾಖಲಾಗಿ ಎಫ್ಐಆರ್ ಆಗಿತ್ತು. ಹಲ್ಲೆಗೊಳಗಾದ ಯುವಕ ಹಲ್ಲೆ ಕೃತ್ಯದ ಬಗ್ಗೆ, ಸುಲ್ತಾನ್ ಗೋಲ್ಡ್ ಜುವೆಲ್ಲರಿಯವರು ಮಳಿಗೆ ಒಳಗೆ ಅಕ್ರಮವಾಗಿ ಪ್ರವೇಶಿಸಿ ದಾಂಧಲೆ ನಡೆಸಿರುವ ಬಗ್ಗೆ ದೂರು ನೀಡಿದ್ದರು. ಇದಲ್ಲದೆ, ಯುವತಿಯ ತಾಯಿಯೂ ದೂರು ನೀಡಿದ್ದರು. ಇದರಂತೆ, ಪ್ರತ್ಯೇಕ ಕೇಸು ದಾಖಲಾಗಿದ್ದು ತನಿಖೆ ಕೈಗೊಂಡಿದ್ದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
sulthan gold jewelry Moral police case four arrested bajrangdal activist in Mangalore.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm