ಬ್ರೇಕಿಂಗ್ ನ್ಯೂಸ್
11-12-22 02:13 pm Mangalore Correspondent ಕರಾವಳಿ
ಮಂಗಳೂರು, ಡಿ.11 : ನಗರದ ಕಂಕನಾಡಿಯ ಸುಲ್ತಾನ್ ಗೋಲ್ಡ್ ಜುವೆಲ್ಲರಿಗೆ ನುಗ್ಗಿ ಯುವ ಜೋಡಿಗೆ ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣದಲ್ಲಿ ನಾಲ್ವರು ಬಜರಂಗದಳ ಕಾರ್ಯಕರ್ತರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಚೇತನ್, ಪ್ರಕಾಶ್, ಗಣೇಶ್ ಮತ್ತು ಸಿಬಿಲ್ ಎಂಬವರು ಬಂಧಿತರು. ವಾರದ ಹಿಂದೆ ಕಂಕನಾಡಿಯ ಸುಲ್ತಾನ್ ಗೋಲ್ಡ್ ಜುವೆಲ್ಲರಿಗೆ ದಾಳಿ ನಡೆಸಿದ್ದ ಬಜರಂಗದಳ ಕಾರ್ಯಕರ್ತರು ಅಲ್ಲಿದ್ದ ಯುವ ಜೋಡಿಗೆ ಹಲ್ಲೆ ನಡೆಸಿದ್ದರು. ಅಲ್ಲಿ ಕೆಲಸಕ್ಕಿದ್ದ ಹಿಂದು ಯುವತಿ, ಅದೇ ಜುವೆಲ್ಲರಿಯಲ್ಲಿ ಸೇಲ್ಸ್ ಮನ್ ಆಗಿರುವ ಮುಸ್ಲಿಂ ಯುವಕನೊಂದಿಗೆ ತಿರುಗಾಡುತ್ತಿದ್ದಳು. ಈ ಬಗ್ಗೆ ಬಜರಂಗದಳ ಈ ಹಿಂದೆಯೂ ಎಚ್ಚರಿಕೆ ನೀಡಿತ್ತು ಎನ್ನಲಾಗಿದೆ. ಆದರೆ ಕಾರ್ಯಕರ್ತರ ಎಚ್ಚರಿಕೆ ಲೆಕ್ಕಿಸದೆ ಆಕೆ ತಿರುಗಾಟ ಮುಂದುವರಿಸಿದ್ದಳು.
ಯುವತಿ ತೀರ್ಥಹಳ್ಳಿ ಮೂಲದ ನಿವಾಸಿಯಾಗಿದ್ದು ಈ ಹಿಂದೆ ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕಿದ್ದಳು. ಆನಂತರ ಜುವೆಲ್ಲರಿಗೆ ಕೆಲಸ ಬದಲಾಯಿಸಿದ್ದಳು. ಈ ವೇಳೆ, ಅಲ್ಲಿದ್ದ ಯುವಕನ ಪರಿಚಯವಾಗಿ ತಿರುಗಾಟ ಆರಂಭಿಸಿದ್ದಳು. ಈ ಬಗ್ಗೆ ಬಜರಂಗದಳ ಕಾರ್ಯಕರ್ತರು ಯುವತಿಯ ಹೆತ್ತವರಿಗೂ ಮಾಹಿತಿ ನೀಡಿದ್ದರು.
ಮೊನ್ನೆ ಹೆತ್ತವರನ್ನು ಜುವೆಲ್ಲರಿಗೆ ಕರೆಸಿ, ಅವರಿಂದಲೇ ಯುವತಿಗೆ ಎರಡೇಟು ಬಿಗಿಯುವಂತೆ ಮಾಡಿದ್ದಾರೆ. ಅಲ್ಲದೆ, ಮುಸ್ಲಿಂ ಯುವಕನಿಗೂ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಘಟನೆ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರತ್ಯೇಕ ಮೂರು ದೂರು ದಾಖಲಾಗಿ ಎಫ್ಐಆರ್ ಆಗಿತ್ತು. ಹಲ್ಲೆಗೊಳಗಾದ ಯುವಕ ಹಲ್ಲೆ ಕೃತ್ಯದ ಬಗ್ಗೆ, ಸುಲ್ತಾನ್ ಗೋಲ್ಡ್ ಜುವೆಲ್ಲರಿಯವರು ಮಳಿಗೆ ಒಳಗೆ ಅಕ್ರಮವಾಗಿ ಪ್ರವೇಶಿಸಿ ದಾಂಧಲೆ ನಡೆಸಿರುವ ಬಗ್ಗೆ ದೂರು ನೀಡಿದ್ದರು. ಇದಲ್ಲದೆ, ಯುವತಿಯ ತಾಯಿಯೂ ದೂರು ನೀಡಿದ್ದರು. ಇದರಂತೆ, ಪ್ರತ್ಯೇಕ ಕೇಸು ದಾಖಲಾಗಿದ್ದು ತನಿಖೆ ಕೈಗೊಂಡಿದ್ದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
sulthan gold jewelry Moral police case four arrested bajrangdal activist in Mangalore.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am