ಬ್ರೇಕಿಂಗ್ ನ್ಯೂಸ್
11-12-22 02:13 pm Mangalore Correspondent ಕರಾವಳಿ
ಮಂಗಳೂರು, ಡಿ.11 : ನಗರದ ಕಂಕನಾಡಿಯ ಸುಲ್ತಾನ್ ಗೋಲ್ಡ್ ಜುವೆಲ್ಲರಿಗೆ ನುಗ್ಗಿ ಯುವ ಜೋಡಿಗೆ ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣದಲ್ಲಿ ನಾಲ್ವರು ಬಜರಂಗದಳ ಕಾರ್ಯಕರ್ತರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಚೇತನ್, ಪ್ರಕಾಶ್, ಗಣೇಶ್ ಮತ್ತು ಸಿಬಿಲ್ ಎಂಬವರು ಬಂಧಿತರು. ವಾರದ ಹಿಂದೆ ಕಂಕನಾಡಿಯ ಸುಲ್ತಾನ್ ಗೋಲ್ಡ್ ಜುವೆಲ್ಲರಿಗೆ ದಾಳಿ ನಡೆಸಿದ್ದ ಬಜರಂಗದಳ ಕಾರ್ಯಕರ್ತರು ಅಲ್ಲಿದ್ದ ಯುವ ಜೋಡಿಗೆ ಹಲ್ಲೆ ನಡೆಸಿದ್ದರು. ಅಲ್ಲಿ ಕೆಲಸಕ್ಕಿದ್ದ ಹಿಂದು ಯುವತಿ, ಅದೇ ಜುವೆಲ್ಲರಿಯಲ್ಲಿ ಸೇಲ್ಸ್ ಮನ್ ಆಗಿರುವ ಮುಸ್ಲಿಂ ಯುವಕನೊಂದಿಗೆ ತಿರುಗಾಡುತ್ತಿದ್ದಳು. ಈ ಬಗ್ಗೆ ಬಜರಂಗದಳ ಈ ಹಿಂದೆಯೂ ಎಚ್ಚರಿಕೆ ನೀಡಿತ್ತು ಎನ್ನಲಾಗಿದೆ. ಆದರೆ ಕಾರ್ಯಕರ್ತರ ಎಚ್ಚರಿಕೆ ಲೆಕ್ಕಿಸದೆ ಆಕೆ ತಿರುಗಾಟ ಮುಂದುವರಿಸಿದ್ದಳು.
ಯುವತಿ ತೀರ್ಥಹಳ್ಳಿ ಮೂಲದ ನಿವಾಸಿಯಾಗಿದ್ದು ಈ ಹಿಂದೆ ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕಿದ್ದಳು. ಆನಂತರ ಜುವೆಲ್ಲರಿಗೆ ಕೆಲಸ ಬದಲಾಯಿಸಿದ್ದಳು. ಈ ವೇಳೆ, ಅಲ್ಲಿದ್ದ ಯುವಕನ ಪರಿಚಯವಾಗಿ ತಿರುಗಾಟ ಆರಂಭಿಸಿದ್ದಳು. ಈ ಬಗ್ಗೆ ಬಜರಂಗದಳ ಕಾರ್ಯಕರ್ತರು ಯುವತಿಯ ಹೆತ್ತವರಿಗೂ ಮಾಹಿತಿ ನೀಡಿದ್ದರು.
ಮೊನ್ನೆ ಹೆತ್ತವರನ್ನು ಜುವೆಲ್ಲರಿಗೆ ಕರೆಸಿ, ಅವರಿಂದಲೇ ಯುವತಿಗೆ ಎರಡೇಟು ಬಿಗಿಯುವಂತೆ ಮಾಡಿದ್ದಾರೆ. ಅಲ್ಲದೆ, ಮುಸ್ಲಿಂ ಯುವಕನಿಗೂ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಘಟನೆ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರತ್ಯೇಕ ಮೂರು ದೂರು ದಾಖಲಾಗಿ ಎಫ್ಐಆರ್ ಆಗಿತ್ತು. ಹಲ್ಲೆಗೊಳಗಾದ ಯುವಕ ಹಲ್ಲೆ ಕೃತ್ಯದ ಬಗ್ಗೆ, ಸುಲ್ತಾನ್ ಗೋಲ್ಡ್ ಜುವೆಲ್ಲರಿಯವರು ಮಳಿಗೆ ಒಳಗೆ ಅಕ್ರಮವಾಗಿ ಪ್ರವೇಶಿಸಿ ದಾಂಧಲೆ ನಡೆಸಿರುವ ಬಗ್ಗೆ ದೂರು ನೀಡಿದ್ದರು. ಇದಲ್ಲದೆ, ಯುವತಿಯ ತಾಯಿಯೂ ದೂರು ನೀಡಿದ್ದರು. ಇದರಂತೆ, ಪ್ರತ್ಯೇಕ ಕೇಸು ದಾಖಲಾಗಿದ್ದು ತನಿಖೆ ಕೈಗೊಂಡಿದ್ದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
sulthan gold jewelry Moral police case four arrested bajrangdal activist in Mangalore.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm