ಬ್ರೇಕಿಂಗ್ ನ್ಯೂಸ್
12-12-22 06:28 pm Mangalore Correspondent ಕರಾವಳಿ
ಮಂಗಳೂರು, ಡಿ.12 : ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜೇಂದ್ರ ಪ್ರಸಾದ್ (39) ಹಠಾತ್ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ.
ಮೂಲತಃ ಸುಳ್ಯಪದವು ನಿವಾಸಿಯಾಗಿರುವ ರಾಜೇಂದ್ರ ಪ್ರಸಾದ್, ಕುಟುಂಬ ಸಹಿತ ಮಂಗಳೂರಿನ ಪಡೀಲಿನಲ್ಲಿ ವಾಸವಿದ್ದರು. ಸೋಮವಾರ ಬೆಳಗ್ಗೆ ರಾಜೇಂದ್ರ ಪ್ರಸಾದ್ ಅವರಿಗೆ ಮನೆಯಲ್ಲಿದ್ದಾಗಲೇ ಎದೆ ನೋವು ಕಾಣಿಸಿಕೊಂಡಿತ್ತು. ಈ ವೇಳೆ ತಮ್ಮ ಕಾರಿನಲ್ಲಿ ಡ್ರೈವ್ ಮಾಡಿಕೊಂಡು ಮಗಳನ್ನು ಶಾಲೆಗೆ ಬಿಟ್ಟು ಬಳಿಕ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಆದರೆ ಆಸ್ಪತ್ರೆಯಲ್ಲಿ ಇಸಿಜಿ ಟೆಸ್ಟ್ ನಡೆಸುತ್ತಿದ್ದಾಗಲೇ ಮತ್ತೆ ಆಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.
ರಾಜೇಂದ್ರ ಪ್ರಸಾದ್ ಮೂಡುಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮುಖ್ಯ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾಜೇಂದ್ರ ಪ್ರಸಾದ್ ಅವರ ಗರಡಿಯಲ್ಲಿ ನಾಲ್ಕು ಮಂದಿ ಅಂತರ್ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದರು. ಏಕಲವ್ಯ ಪ್ರಶಸ್ತಿ ಪುರಸ್ಕೃತ, ಇಂಗ್ಲೆಂಡಿನ ಬರ್ಮಿಂಗ್ ಹ್ಯಾಂನಲ್ಲಿ ನಡೆದಿರುವ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ (2018ರಲ್ಲಿ ಬೆಳ್ಳಿ ಪದಕ) ಪಡೆದಿರುವ ಗುರುರಾಜ್ ಪೂಜಾರಿಯವರು ರಾಜೇಂದ್ರ ಪ್ರಸಾದ್ ಅವರ ಶಿಷ್ಯರಾಗಿದ್ದರು.
Mangalore Alvas college weight lifting coach Rajendra Prasad dies of heart attack.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm