ಬ್ರೇಕಿಂಗ್ ನ್ಯೂಸ್
12-12-22 10:58 pm Mangalore Correspondent ಕರಾವಳಿ
ಮಂಗಳೂರು, ಡಿ.12 : ರಾಜ್ಯದಲ್ಲಿ ಪಂಚರತ್ನ ರಥಯಾತ್ರೆಯ ಪೂರ್ವ ತಯಾರಿಯಾಗಿ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಜಾತ್ಯತೀತ ಜನತಾದಳದ ಪ್ರಚಾರ ಜಾಥಾಕ್ಕೆ ನಗರದ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಲಾಯಿತು. ಜೆಡಿಎಸ್ ಜಿಲ್ಲಾ ಅಧ್ಯಕ್ಷ ಜಾಕೆ ಮಾದವ ಗೌಡ ರಥಕ್ಕೆ ಚಾಲನೆ ನೀಡಿದರು.
ರಾಜ್ಯದಲ್ಲಿ 2023ರ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಆಗುವುದು ನಿಶ್ಚಿತ. ಅವರ ಜಲಧಾರೆ ಹಾಗೂ ಪಂಚರತ್ನ ಯೋಜನೆ ಈ ರಾಜ್ಯದ ನವನಿರ್ಮಾಣದ ಕಲ್ಪನೆ. ರಾಜ್ಯದ ಮೂಲೆ ಮೂಲೆಗಳಿಂದ ಬೆಂಬಲ ದೊರಕುತ್ತಿದ್ದು ವಿರೋಧ ಪಕ್ಷಗಳು ಇದರಿಂದ ಭೀತಿಗೊಳಗಾಗಿದ್ದಾರೆ ಎಂದು ಜಾಕೆ ಮಾಧವ ಗೌಡ ಹೇಳಿದರು.

ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷೆ ಮತ್ತು ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಸುಮತಿ ಹೆಗ್ಡೆ ಮಾತನಾಡಿ ಕುಮಾರಸ್ವಾಮಿಯವರ ಆದೇಶದ ಮೇರೆಗೆ ಈ ಕಾರ್ಯಕ್ರಮ ಆಯೋಜಿಸಿದ್ದು ವಿಧಾನಸಭಾ ಕ್ಷೇತ್ರದ 38 ವಾರ್ಡಗಳಲ್ಲಿ ಪ್ರಚಾರ ಜಾಥಾ ಸಂಚರಿಸಲಿದೆ ಎಂದು ಹೇಳಿದರು.

ಜಿಲ್ಲಾ ವಕ್ತಾರ ಸುಶೀಲ್ ನೊರೊನ್ಹಾ ಮಾತನಾಡಿ ಬಿಜೆಪಿ ಪಕ್ಷ ಜನರಲ್ಲಿ ಭೀತಿ, ದ್ವೇಷ ಹರಡುತ್ತಿದೆ. ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಬೆಲೆ ನಿಯಂತ್ರಣ ಮಾಡಲು ಸಂಪೂರ್ಣ ಸೋತಿದೆ. ಇನ್ನೊಂದೆಡೆ ಕಾಂಗ್ರೆಸ್ ಅಧಿಕಾರ ಪಡೆದ ಹಾಗೆ ತಿರುಕನ ಕನಸು ಕಂಡಿದ್ದು ಮುಖ್ಯಮಂತ್ರಿ ಪೈಪೋಟಿಯಲ್ಲಿ ತೊಡಗಿದೆ ಎಂದು ಹೇಳಿದರು. ರಾಜ್ಯ ಜೆಡಿಎಸ್ ನಾಯಕರಾದ ರತ್ನಾಕರ ಸುವರ್ಣ, ಜಮೀರ್ ಷಾ, ಇಕ್ಬಾಲ್ ಮುಲ್ಕಿ. ದಿನಕರ್ ಉಳ್ಳಾಲ್ ಕಡಬ ಕ್ಷೇತ್ರದ ಅಧ್ಯಕ್ಷ ಮೀರಾ ಸಾಹೇಬ್, ಯುವನಾಯಕ ಪೈಜಲ್, ಕನಕದಾಸ ಕುಳೂರ್, ಮುನೀರ್ ಮುಕ್ಕಚೇರಿ, ವಿನ್ಸೆಂಟ್ ಕೋಡಿಕಲ್, ಅಲ್ತಾಫ್ ತುಂಬೆ, ರವೀಂದ್ರ ಉಳ್ಳಾಲ, ವೀಣಾ ಶೆಟ್ಟಿ, ಭಾರತೀ ಪುಷ್ಪರಾಜನ್, ಪ್ರಿಯಾ ಸಾಲಿಯಾನ್, ಯುವ ಜನತಾದಳ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಿಲಾಲ್ ಮಹಮದ್ ಉಪಸ್ಥಿತರಿದ್ದರು.
HD Kumaraswamy will surely become next cm of Karnataka, Madava Gowda.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm