ಬ್ರೇಕಿಂಗ್ ನ್ಯೂಸ್
12-12-22 10:58 pm Mangalore Correspondent ಕರಾವಳಿ
ಮಂಗಳೂರು, ಡಿ.12 : ರಾಜ್ಯದಲ್ಲಿ ಪಂಚರತ್ನ ರಥಯಾತ್ರೆಯ ಪೂರ್ವ ತಯಾರಿಯಾಗಿ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಜಾತ್ಯತೀತ ಜನತಾದಳದ ಪ್ರಚಾರ ಜಾಥಾಕ್ಕೆ ನಗರದ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಲಾಯಿತು. ಜೆಡಿಎಸ್ ಜಿಲ್ಲಾ ಅಧ್ಯಕ್ಷ ಜಾಕೆ ಮಾದವ ಗೌಡ ರಥಕ್ಕೆ ಚಾಲನೆ ನೀಡಿದರು.
ರಾಜ್ಯದಲ್ಲಿ 2023ರ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಆಗುವುದು ನಿಶ್ಚಿತ. ಅವರ ಜಲಧಾರೆ ಹಾಗೂ ಪಂಚರತ್ನ ಯೋಜನೆ ಈ ರಾಜ್ಯದ ನವನಿರ್ಮಾಣದ ಕಲ್ಪನೆ. ರಾಜ್ಯದ ಮೂಲೆ ಮೂಲೆಗಳಿಂದ ಬೆಂಬಲ ದೊರಕುತ್ತಿದ್ದು ವಿರೋಧ ಪಕ್ಷಗಳು ಇದರಿಂದ ಭೀತಿಗೊಳಗಾಗಿದ್ದಾರೆ ಎಂದು ಜಾಕೆ ಮಾಧವ ಗೌಡ ಹೇಳಿದರು.

ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷೆ ಮತ್ತು ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಸುಮತಿ ಹೆಗ್ಡೆ ಮಾತನಾಡಿ ಕುಮಾರಸ್ವಾಮಿಯವರ ಆದೇಶದ ಮೇರೆಗೆ ಈ ಕಾರ್ಯಕ್ರಮ ಆಯೋಜಿಸಿದ್ದು ವಿಧಾನಸಭಾ ಕ್ಷೇತ್ರದ 38 ವಾರ್ಡಗಳಲ್ಲಿ ಪ್ರಚಾರ ಜಾಥಾ ಸಂಚರಿಸಲಿದೆ ಎಂದು ಹೇಳಿದರು.

ಜಿಲ್ಲಾ ವಕ್ತಾರ ಸುಶೀಲ್ ನೊರೊನ್ಹಾ ಮಾತನಾಡಿ ಬಿಜೆಪಿ ಪಕ್ಷ ಜನರಲ್ಲಿ ಭೀತಿ, ದ್ವೇಷ ಹರಡುತ್ತಿದೆ. ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಬೆಲೆ ನಿಯಂತ್ರಣ ಮಾಡಲು ಸಂಪೂರ್ಣ ಸೋತಿದೆ. ಇನ್ನೊಂದೆಡೆ ಕಾಂಗ್ರೆಸ್ ಅಧಿಕಾರ ಪಡೆದ ಹಾಗೆ ತಿರುಕನ ಕನಸು ಕಂಡಿದ್ದು ಮುಖ್ಯಮಂತ್ರಿ ಪೈಪೋಟಿಯಲ್ಲಿ ತೊಡಗಿದೆ ಎಂದು ಹೇಳಿದರು. ರಾಜ್ಯ ಜೆಡಿಎಸ್ ನಾಯಕರಾದ ರತ್ನಾಕರ ಸುವರ್ಣ, ಜಮೀರ್ ಷಾ, ಇಕ್ಬಾಲ್ ಮುಲ್ಕಿ. ದಿನಕರ್ ಉಳ್ಳಾಲ್ ಕಡಬ ಕ್ಷೇತ್ರದ ಅಧ್ಯಕ್ಷ ಮೀರಾ ಸಾಹೇಬ್, ಯುವನಾಯಕ ಪೈಜಲ್, ಕನಕದಾಸ ಕುಳೂರ್, ಮುನೀರ್ ಮುಕ್ಕಚೇರಿ, ವಿನ್ಸೆಂಟ್ ಕೋಡಿಕಲ್, ಅಲ್ತಾಫ್ ತುಂಬೆ, ರವೀಂದ್ರ ಉಳ್ಳಾಲ, ವೀಣಾ ಶೆಟ್ಟಿ, ಭಾರತೀ ಪುಷ್ಪರಾಜನ್, ಪ್ರಿಯಾ ಸಾಲಿಯಾನ್, ಯುವ ಜನತಾದಳ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಿಲಾಲ್ ಮಹಮದ್ ಉಪಸ್ಥಿತರಿದ್ದರು.
HD Kumaraswamy will surely become next cm of Karnataka, Madava Gowda.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm