ಬ್ರೇಕಿಂಗ್ ನ್ಯೂಸ್
13-12-22 02:03 pm Mangalore Correspondent ಕರಾವಳಿ
ಮಂಗಳೂರು, ಡಿ.13: ಬೈಕಂಪಾಡಿಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ಮತ್ತು ಡಿವೈಎಸ್ಪಿ ಚೆಲುವರಾಜು ನೇತೃತ್ವದಲ್ಲಿ ದಾಳಿ ನಡೆದಿದ್ದು ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಫೈಲ್ ಗಳನ್ನು ಕ್ಲೀಯರ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಣ್ಣ ಪುಟ್ಟ ಕೈಗಾರಿಕೆಗಳ ಲೈಸನ್ಸ್ ನವೀಕರಣ ಮಾಡುವುದಕ್ಕೂ ಅಧಿಕಾರಿಗಳು ಡಿಮಾಂಡ್ ಇಟ್ಟಿರುವ ಬಗ್ಗೆ ದೂರು ಬಂದಿದ್ದರಿಂದ ಲೋಕಾಯುಕ್ತ ದಾಳಿ ನಡೆದಿದೆ.
ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೈಕಂಪಾಡಿಯಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸಿದ್ದಾರೆ. ಕೈಗಾರಿಕೆಗಳ ಸಂಬಂಧಪಟ್ಟ ಕಡತಗಳನ್ನು ವಿನಾಕಾರಣ ಬಾಕಿ ಇಡಲಾಗಿದೆಯೇ ಎಂದು ತಪಾಸಣೆ ನಡೆಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸದೆ, ಸಣ್ಣ ಪುಟ್ಟ ಕೈಗಾರಿಕೆಗಳಿಂದಲೂ ಹಣಕ್ಕಾಗಿ ಡಿಮ್ಯಾಂಡ್ ಮಾಡುವುದು, ಹಣ ಪಡೆದು ಮಾಲಿನ್ಯವನ್ನು ಸಾರ್ವಜನಿಕ ಪ್ರದೇಶಕ್ಕೆ ಹರಿಸಲು ಅವಕಾಶ ಕೊಡುವುದು ಇತ್ಯಾದಿ ಆರೋಪಗಳಿದ್ದವು. ಮುಕ್ಕ, ಕುಳಾಯಿ ಪ್ರದೇಶದಲ್ಲಿ ಸಮುದ್ರ ತೀರದಲ್ಲಿ ಬಹಳಷ್ಟು ಫಿಶ್ ಮಿಲ್ ಕಂಪನಿಗಳು ಮಾಲಿನ್ಯವನ್ನು ನೇರವಾಗಿ ಸಮುದ್ರಕ್ಕೆ ಬಿಡುತ್ತಿದ್ದರೂ, ಕಚೇರಿಯ ಅಧಿಕಾರಿಗಳು ಗಿಂಬಳ ಪಡೆದು ಮೌನವಾಗಿ ಇರುತ್ತಿದ್ದರು.
ಎಂಆರ್ ಪಿಎಲ್, ಬಿಎಸ್ಎಫ್ ರೀತಿಯ ದೊಡ್ಡ ಕೈಗಾರಿಕೆಗಳ ಮಾಲಿನ್ಯದ ಬಗ್ಗೆ ಜೋಕಟ್ಟೆಯ ನಾಗರಿಕರು ಬಹಳಷ್ಟು ಬಾರಿ ಪ್ರತಿಭಟನೆ ನಡೆಸಿದರೂ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಮಗೂ ಅದಕ್ಕೂ ಸಂಬಂಧವೇ ಇಲ್ಲ ಎನ್ನುವ ರೀತಿ ವರ್ತಿಸುತ್ತಿದ್ದರು. ಇದೀಗ ಮೊದಲ ಬಾರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
Lokayukta raids the Environmental department in Baikampady Mangalore. Checks Emilas after receiving too many complaints over clearance.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm