ಬ್ರೇಕಿಂಗ್ ನ್ಯೂಸ್
13-12-22 02:03 pm Mangalore Correspondent ಕರಾವಳಿ
ಮಂಗಳೂರು, ಡಿ.13: ಬೈಕಂಪಾಡಿಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ಮತ್ತು ಡಿವೈಎಸ್ಪಿ ಚೆಲುವರಾಜು ನೇತೃತ್ವದಲ್ಲಿ ದಾಳಿ ನಡೆದಿದ್ದು ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಫೈಲ್ ಗಳನ್ನು ಕ್ಲೀಯರ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಣ್ಣ ಪುಟ್ಟ ಕೈಗಾರಿಕೆಗಳ ಲೈಸನ್ಸ್ ನವೀಕರಣ ಮಾಡುವುದಕ್ಕೂ ಅಧಿಕಾರಿಗಳು ಡಿಮಾಂಡ್ ಇಟ್ಟಿರುವ ಬಗ್ಗೆ ದೂರು ಬಂದಿದ್ದರಿಂದ ಲೋಕಾಯುಕ್ತ ದಾಳಿ ನಡೆದಿದೆ.
ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೈಕಂಪಾಡಿಯಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸಿದ್ದಾರೆ. ಕೈಗಾರಿಕೆಗಳ ಸಂಬಂಧಪಟ್ಟ ಕಡತಗಳನ್ನು ವಿನಾಕಾರಣ ಬಾಕಿ ಇಡಲಾಗಿದೆಯೇ ಎಂದು ತಪಾಸಣೆ ನಡೆಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸದೆ, ಸಣ್ಣ ಪುಟ್ಟ ಕೈಗಾರಿಕೆಗಳಿಂದಲೂ ಹಣಕ್ಕಾಗಿ ಡಿಮ್ಯಾಂಡ್ ಮಾಡುವುದು, ಹಣ ಪಡೆದು ಮಾಲಿನ್ಯವನ್ನು ಸಾರ್ವಜನಿಕ ಪ್ರದೇಶಕ್ಕೆ ಹರಿಸಲು ಅವಕಾಶ ಕೊಡುವುದು ಇತ್ಯಾದಿ ಆರೋಪಗಳಿದ್ದವು. ಮುಕ್ಕ, ಕುಳಾಯಿ ಪ್ರದೇಶದಲ್ಲಿ ಸಮುದ್ರ ತೀರದಲ್ಲಿ ಬಹಳಷ್ಟು ಫಿಶ್ ಮಿಲ್ ಕಂಪನಿಗಳು ಮಾಲಿನ್ಯವನ್ನು ನೇರವಾಗಿ ಸಮುದ್ರಕ್ಕೆ ಬಿಡುತ್ತಿದ್ದರೂ, ಕಚೇರಿಯ ಅಧಿಕಾರಿಗಳು ಗಿಂಬಳ ಪಡೆದು ಮೌನವಾಗಿ ಇರುತ್ತಿದ್ದರು.
ಎಂಆರ್ ಪಿಎಲ್, ಬಿಎಸ್ಎಫ್ ರೀತಿಯ ದೊಡ್ಡ ಕೈಗಾರಿಕೆಗಳ ಮಾಲಿನ್ಯದ ಬಗ್ಗೆ ಜೋಕಟ್ಟೆಯ ನಾಗರಿಕರು ಬಹಳಷ್ಟು ಬಾರಿ ಪ್ರತಿಭಟನೆ ನಡೆಸಿದರೂ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಮಗೂ ಅದಕ್ಕೂ ಸಂಬಂಧವೇ ಇಲ್ಲ ಎನ್ನುವ ರೀತಿ ವರ್ತಿಸುತ್ತಿದ್ದರು. ಇದೀಗ ಮೊದಲ ಬಾರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
Lokayukta raids the Environmental department in Baikampady Mangalore. Checks Emilas after receiving too many complaints over clearance.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm