ಬ್ರೇಕಿಂಗ್ ನ್ಯೂಸ್
13-12-22 02:03 pm Mangalore Correspondent ಕರಾವಳಿ
ಮಂಗಳೂರು, ಡಿ.13: ಬೈಕಂಪಾಡಿಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ಮತ್ತು ಡಿವೈಎಸ್ಪಿ ಚೆಲುವರಾಜು ನೇತೃತ್ವದಲ್ಲಿ ದಾಳಿ ನಡೆದಿದ್ದು ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಫೈಲ್ ಗಳನ್ನು ಕ್ಲೀಯರ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಣ್ಣ ಪುಟ್ಟ ಕೈಗಾರಿಕೆಗಳ ಲೈಸನ್ಸ್ ನವೀಕರಣ ಮಾಡುವುದಕ್ಕೂ ಅಧಿಕಾರಿಗಳು ಡಿಮಾಂಡ್ ಇಟ್ಟಿರುವ ಬಗ್ಗೆ ದೂರು ಬಂದಿದ್ದರಿಂದ ಲೋಕಾಯುಕ್ತ ದಾಳಿ ನಡೆದಿದೆ.
ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೈಕಂಪಾಡಿಯಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸಿದ್ದಾರೆ. ಕೈಗಾರಿಕೆಗಳ ಸಂಬಂಧಪಟ್ಟ ಕಡತಗಳನ್ನು ವಿನಾಕಾರಣ ಬಾಕಿ ಇಡಲಾಗಿದೆಯೇ ಎಂದು ತಪಾಸಣೆ ನಡೆಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸದೆ, ಸಣ್ಣ ಪುಟ್ಟ ಕೈಗಾರಿಕೆಗಳಿಂದಲೂ ಹಣಕ್ಕಾಗಿ ಡಿಮ್ಯಾಂಡ್ ಮಾಡುವುದು, ಹಣ ಪಡೆದು ಮಾಲಿನ್ಯವನ್ನು ಸಾರ್ವಜನಿಕ ಪ್ರದೇಶಕ್ಕೆ ಹರಿಸಲು ಅವಕಾಶ ಕೊಡುವುದು ಇತ್ಯಾದಿ ಆರೋಪಗಳಿದ್ದವು. ಮುಕ್ಕ, ಕುಳಾಯಿ ಪ್ರದೇಶದಲ್ಲಿ ಸಮುದ್ರ ತೀರದಲ್ಲಿ ಬಹಳಷ್ಟು ಫಿಶ್ ಮಿಲ್ ಕಂಪನಿಗಳು ಮಾಲಿನ್ಯವನ್ನು ನೇರವಾಗಿ ಸಮುದ್ರಕ್ಕೆ ಬಿಡುತ್ತಿದ್ದರೂ, ಕಚೇರಿಯ ಅಧಿಕಾರಿಗಳು ಗಿಂಬಳ ಪಡೆದು ಮೌನವಾಗಿ ಇರುತ್ತಿದ್ದರು.
ಎಂಆರ್ ಪಿಎಲ್, ಬಿಎಸ್ಎಫ್ ರೀತಿಯ ದೊಡ್ಡ ಕೈಗಾರಿಕೆಗಳ ಮಾಲಿನ್ಯದ ಬಗ್ಗೆ ಜೋಕಟ್ಟೆಯ ನಾಗರಿಕರು ಬಹಳಷ್ಟು ಬಾರಿ ಪ್ರತಿಭಟನೆ ನಡೆಸಿದರೂ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಮಗೂ ಅದಕ್ಕೂ ಸಂಬಂಧವೇ ಇಲ್ಲ ಎನ್ನುವ ರೀತಿ ವರ್ತಿಸುತ್ತಿದ್ದರು. ಇದೀಗ ಮೊದಲ ಬಾರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
Lokayukta raids the Environmental department in Baikampady Mangalore. Checks Emilas after receiving too many complaints over clearance.
28-09-25 12:39 pm
Bangalore Correspondent
ದಾವಣಗೆರೆಗೆ ಕಾಲಿಟ್ಟ 'ಐ ಲವ್ ಮೊಹಮ್ಮದ್ʼ ಫ್ಲೆಕ್ಸ್...
27-09-25 02:40 pm
ಪಿಐಎಲ್ ಹಾಕಿದವರಿಗೆ ಸುಪ್ರೀಂ ಕೋರ್ಟ್ ಬೈದು ಕಳುಹಿಸಿ...
27-09-25 02:20 pm
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಭೈರಪ್ಪ ಪಂಚಭೂತಗಳಲ್ಲ...
26-09-25 07:39 pm
ಬಾನು ಮುಷ್ತಾಕ್ ಮನೆಯಲ್ಲಿ ಒಂದು ವಾರ ಉಳಿದುಕೊಂಡಿದ್ದ...
26-09-25 07:37 pm
28-09-25 10:02 pm
HK News Desk
ಮೋದಿ ಕಾರ್ಯಕ್ರಮದಲ್ಲಿ ಸಣ್ಣ ಎಡವಟ್ಟು ; ಹುದ್ದೆ ಕಳಕ...
28-09-25 08:33 pm
ತಮಿಳುನಾಡಿನಲ್ಲಿ ವಿಜಯ್ ರ್ಯಾಲಿ ವೇಳೆ ಘೋರ ದುರಂತ ;...
27-09-25 11:16 pm
HDFC Banks Dubai branch: ಎಚ್ ಡಿಎಫ್ ಸಿ ದುಬೈ ಶಾ...
27-09-25 05:53 pm
ಧರ್ಮಸ್ಥಳ ಪ್ರಕರಣ ; ಕನ್ನಡ ಸುದ್ದಿವಾಹಿನಿಗಳಿಂದ ಸುಪ...
25-09-25 10:38 pm
28-09-25 08:12 pm
Mangalore Correspondent
ಯುವಜನರಲ್ಲಿ ಹೃದಯದ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚುತ್...
27-09-25 07:35 pm
Puttur Baby News, DNA: ಸಹಪಾಠಿಗೆ ಮಗು ಕರುಣಿಸಿದ...
27-09-25 01:33 pm
Sandhya Shenoy: ಶ್ರೀನಿವಾಸ್ ಎಂಜಿನಿಯರಿಂಗ್ ಕಾಲೇಜ...
27-09-25 01:02 pm
ನಿಗಮ ಮಂಡಳಿಗೆ ನೇಮಕ ; ಮೆಸ್ಕಾಂ ಹರೀಶ್ ಕುಮಾರ್, ಕರಾ...
26-09-25 11:02 pm
28-09-25 11:08 pm
Mangalore Correspondent
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm
Robbery in Mangalore: ಒಂದೂವರೆ ಕೋಟಿ ಮೌಲ್ಯದ ಚಿನ...
28-09-25 12:25 pm
Malpe Onwer Murder, AKMS: ಮಲ್ಪೆಯಲ್ಲಿ ಹಾಡಹಗಲೇ...
27-09-25 02:16 pm