ಬ್ರೇಕಿಂಗ್ ನ್ಯೂಸ್
13-12-22 02:03 pm Mangalore Correspondent ಕರಾವಳಿ
ಮಂಗಳೂರು, ಡಿ.13: ಬೈಕಂಪಾಡಿಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ಮತ್ತು ಡಿವೈಎಸ್ಪಿ ಚೆಲುವರಾಜು ನೇತೃತ್ವದಲ್ಲಿ ದಾಳಿ ನಡೆದಿದ್ದು ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಫೈಲ್ ಗಳನ್ನು ಕ್ಲೀಯರ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಣ್ಣ ಪುಟ್ಟ ಕೈಗಾರಿಕೆಗಳ ಲೈಸನ್ಸ್ ನವೀಕರಣ ಮಾಡುವುದಕ್ಕೂ ಅಧಿಕಾರಿಗಳು ಡಿಮಾಂಡ್ ಇಟ್ಟಿರುವ ಬಗ್ಗೆ ದೂರು ಬಂದಿದ್ದರಿಂದ ಲೋಕಾಯುಕ್ತ ದಾಳಿ ನಡೆದಿದೆ.
ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೈಕಂಪಾಡಿಯಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸಿದ್ದಾರೆ. ಕೈಗಾರಿಕೆಗಳ ಸಂಬಂಧಪಟ್ಟ ಕಡತಗಳನ್ನು ವಿನಾಕಾರಣ ಬಾಕಿ ಇಡಲಾಗಿದೆಯೇ ಎಂದು ತಪಾಸಣೆ ನಡೆಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸದೆ, ಸಣ್ಣ ಪುಟ್ಟ ಕೈಗಾರಿಕೆಗಳಿಂದಲೂ ಹಣಕ್ಕಾಗಿ ಡಿಮ್ಯಾಂಡ್ ಮಾಡುವುದು, ಹಣ ಪಡೆದು ಮಾಲಿನ್ಯವನ್ನು ಸಾರ್ವಜನಿಕ ಪ್ರದೇಶಕ್ಕೆ ಹರಿಸಲು ಅವಕಾಶ ಕೊಡುವುದು ಇತ್ಯಾದಿ ಆರೋಪಗಳಿದ್ದವು. ಮುಕ್ಕ, ಕುಳಾಯಿ ಪ್ರದೇಶದಲ್ಲಿ ಸಮುದ್ರ ತೀರದಲ್ಲಿ ಬಹಳಷ್ಟು ಫಿಶ್ ಮಿಲ್ ಕಂಪನಿಗಳು ಮಾಲಿನ್ಯವನ್ನು ನೇರವಾಗಿ ಸಮುದ್ರಕ್ಕೆ ಬಿಡುತ್ತಿದ್ದರೂ, ಕಚೇರಿಯ ಅಧಿಕಾರಿಗಳು ಗಿಂಬಳ ಪಡೆದು ಮೌನವಾಗಿ ಇರುತ್ತಿದ್ದರು.
ಎಂಆರ್ ಪಿಎಲ್, ಬಿಎಸ್ಎಫ್ ರೀತಿಯ ದೊಡ್ಡ ಕೈಗಾರಿಕೆಗಳ ಮಾಲಿನ್ಯದ ಬಗ್ಗೆ ಜೋಕಟ್ಟೆಯ ನಾಗರಿಕರು ಬಹಳಷ್ಟು ಬಾರಿ ಪ್ರತಿಭಟನೆ ನಡೆಸಿದರೂ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಮಗೂ ಅದಕ್ಕೂ ಸಂಬಂಧವೇ ಇಲ್ಲ ಎನ್ನುವ ರೀತಿ ವರ್ತಿಸುತ್ತಿದ್ದರು. ಇದೀಗ ಮೊದಲ ಬಾರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
Lokayukta raids the Environmental department in Baikampady Mangalore. Checks Emilas after receiving too many complaints over clearance.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm