ಬ್ರೇಕಿಂಗ್ ನ್ಯೂಸ್
15-10-20 02:43 pm Mangaluru Correspondent ಕರಾವಳಿ
ಪುತ್ತೂರು, ಅಕ್ಟೋಬರ್ 15: ಅಧಿಕೃತ ಏಜೆನ್ಸಿ ಹೆಸರಲ್ಲಿ ನಕಲಿ ವಾಹನ ವಿಮೆ ಮಾಡಿ ವಂಚಿಸುತ್ತಿರುವ ಪ್ರಕರಣ ಪುತ್ತೂರಿನಲ್ಲಿ ಕಂಡುಬಂದಿದೆ.
ಪುತ್ತೂರು ಆರ್ಟಿಒ ನಲ್ಲಿ ರಿಜಿಸ್ಟರ್ ಆಗಿದ್ದ ವಾಹನ ವಿಮೆಯನ್ನು ತನ್ನ ಹೆಸರಿಗೆ ವರ್ಗಾಯಿಸಲು ವ್ಯಕ್ತಿಯೊಬ್ಬ ಪುತ್ತೂರಿನ ವಿಮಾ ಕಚೇರಿಗೆ ಬಂದಿದ್ದಾಗ ನಕಲಿ ವಿಮೆಯ ಪ್ರಕರಣ ಬೆಳಕಿಗೆ ಬಂದಿದೆ.
ಹಳೆ ಕಾರು ಖರೀದಿಸಿದ್ದ ವ್ಯಕ್ತಿಯೊಬ್ಬ ತನ್ನ ಹೆಸರಿಗೆ ವಾಹನ ವಿಮೆ ಮಾಡಿಸಿಕೊಳ್ಳಲು ಕಚೇರಿಗೆ ಬಂದಿದ್ದ. ಪುತ್ತೂರಿನ ವಾಹನ ವಿಮೆಯ ಅಧಿಕೃತ ಏಜೆಂಟ್ ಜಯಾನಂದ ಅವರ ಏಜೆನ್ಸಿ ಸಂಖ್ಯೆ ಹೊಂದಿತ್ತು. ಅವಧಿ ಮುಗಿಯದ ವಿಮೆಯ ಬಗ್ಗೆ ಮಾಹಿತಿ ಕೆದಕಿದಾಗ, ಅದು ನಕಲಿಯಾಗಿರುವುದು ಕಂಡು ಬಂತು. ಬಳಿಕ ಅದರಲ್ಲಿ ನಮೂದಾಗಿದ್ದ ಏಜೆಂಟ್ ಕೋಡ್, ಜಯಾನಂದ ಅವರನ್ನು ಸಂಪರ್ಕಿಸಿದರು. ವಿಮೆ ನೋಂದಣಿಯಾದ ದಿನಾಂಕ ಏಜೆನ್ಸಿ ವತಿಯಿಂದ ಸದ್ರಿ ವಾಹನಕ್ಕೆ ವಿಮೆ ಮಾಡಿಲ್ಲ ಎಂದು ಕಂಪೆನಿಗೆ ತಿಳಿಸಿದ್ದರು. ಈ ವೇಳೆ ಇದು ನಕಲಿ ವಿಮೆ ಎಂಬ ಅನುಮಾನ ಖಾತರಿ ಆಗಿದೆ. ಇದೇ ವೇಳೆ, ಅದೇ ನಂಬರಿನ ಏಜೆನ್ಸಿ ಕೋಡ್ನಲ್ಲಿ ಇನ್ನೊಬ್ಬ ವ್ಯಕ್ತಿಗೂ ನಕಲಿ ವಿಮೆ ನೀಡಿರುವ ಮಾಹಿತಿ ಬಯಲಾಗಿದೆ.

ಪೊಲೀಸರು ತಪಾಸಣೆ ವೇಳೆ ವಿಮೆಯ ಅವಧಿ ದಿನಾಂಕ, ಹೆಸರು ಮಾತ್ರ ಗಮನಿಸುವ ಕಾರಣ ವಿಮೆಯ ಅಸಲಿ, ನಕಲಿ ಅಂಶ ಬಯಲಿಗೆ ಬರುವುದಿಲ್ಲ. ಜತೆಗೆ ಗ್ರಾಹಕರಿಗೂ ಈ ಬಗ್ಗೆ ಯಾವ ಸುಳಿವು ದೊರೆಯುವುದಿಲ್ಲ. ನಿಯಮಾನುಸಾರ ಆಯಾ ವಾಹನಗಳಿಗೆ ನಿರ್ದಿಷ್ಟ ಶುಲ್ಕ ಪಾವತಿಸಬೇಕಿದ್ದರೂ ನಕಲಿ ವಿಮೆಯಲ್ಲಿ ಕಡಿಮೆ ಹಣ ಪಡೆದು ಪಾಲಿಸಿ ನೀಡಿರುವುದು ಕಂಡುಬಂದಿದೆ. ಇದರಿಂದ ನಿಯಮ ಅನುಸಾರ ವಿಮೆ ನೀಡುವ ಏಜೆನ್ಸಿಗಳ ಕೋಡ್ ದುರ್ಬಳಕೆ ಮಾಡಿಕೊಳ್ಳುವ ಕಾರಣ ಅವರಿಗೂ ತೊಂದರೆ ಉಂಟಾಗಿದೆ.
ಈಗಾಗಲೇ ನೂರಾರು ವಾಹನಗಳಿಗೆ ಇಂತಹ ನಕಲಿ ವಿಮೆ ನೀಡಿ ವಂಚಿಸಿರುವ ಸಾಧ್ಯತೆ ಮೇಲ್ನೋಟಕ್ಕೆ ಕಂಡು ಬಂದಿದೆ. ಸಂಚಾರ ಪೊಲೀಸರು ತಪಾಸಣೆ ವೇಳೆ ವಿಮೆ ಪಾಲಿಸಿಗಳನ್ನು ಸೂಕ್ಷವಾಗಿ ಪರಿಶೀಲಿಸಬೇಕಾಗಿದೆ. ನಕಲಿ ಕಂಡುಬಂದರೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ವಾಹನ ಮಾಲಕರು ಹಾಗೂ ಅಧಿಕೃತ ಏಜೆನ್ಸಿದಾರರು ಆಗ್ರಹಿಸಿದ್ದಾರೆ.
Puttur fake insurance copies being issued in the name of insurance companies have come to light after one of the persons vehicle insurance was claimed fake when he visited the Insurance office in Puttur.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm