ಬ್ರೇಕಿಂಗ್ ನ್ಯೂಸ್
13-12-22 08:47 pm Mangalore Correspondent ಕರಾವಳಿ
ಮಂಗಳೂರು, ಡಿ.13 : ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಪ್ರಾಯೋಜಿತ ಕೆನರಾ ಇಂಜಿನಿಯರಿಂಗ್ ಕಾಲೇಜು ಕ್ಯಾಂಪಸ್ ನಲ್ಲಿ ನಿರ್ಮಾಣವಾಗಲಿರುವ ಬಹುವಿಧ ಸೌಲಭ್ಯಗಳಿರುವ 5 ಕೋಟಿ ರೂ. ವೆಚ್ಚದ ಆಕ್ಟಿವಿಟಿ ಸೆಂಟರ್ ಗೆ ಕೆನರಾ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಯೂ ಆಗಿರುವ ಉದ್ಯಮಿ ಸೆಂಚುರಿ ಬಿಲ್ಡರ್ಸ್ ಆಡಳಿತ ನಿರ್ದೇಶಕ ಡಾ.ಪಿ.ದಯಾನಂದ ಪೈ ಮೊದಲ ಹಂತದಲ್ಲಿ ತಮ್ಮ ಎರಡು ಕೋಟಿ ರೂಪಾಯಿಗಳ ಕೊಡುಗೆಯನ್ನು ಘೋಷಿಸಿದ್ದಾರೆ.
ಕಾಲೇಜಿನ ಆವರಣದಲ್ಲಿ ನವೀಕೃತ ಅಕಾಡೆಮಿಕ್ ಬ್ಲಾಕ್ ಉದ್ಘಾಟಿಸುವ ಸಂದರ್ಭದಲ್ಲಿ ಅವರು ಈ ಕೊಡುಗೆಯನ್ನು ಘೋಷಿಸಿದರು. ಶತಮಾನದ ಇತಿಹಾಸವಿರುವ ಕೆನರಾ ಶಿಕ್ಷಣ ಸಂಸ್ಥೆಗಳ ಸಾಧನೆ ದೊಡ್ಡದು ಎಂದ ಅವರು ತನ್ನ ವೃತ್ತಿ ಜೀವನ ರೂಪಿಸುವಲ್ಲಿ ಕೆನರಾ ಶಿಕ್ಷಣ ಸಂಸ್ಥೆಗಳ ಋಣ ತೀರಿಸಲಾಗದ್ದು. ಈ ಭಾವನಾತ್ಮಕ ಬಾಂಧವ್ಯ ತನ್ನ ಕುಟುಂಬದ ಜತೆ ನಿರಂತರವಾಗಿರಬೇಕು ಎಂದವರು ಆಶಯ ವ್ಯಕ್ತಪಡಿಸಿದರು.
ಸುಮಾರು 5 ಕೋಟಿ ರೂ. ವೆಚ್ಚದಲ್ಲಿ 20 ಸಾವಿರ ಚದರ ಅಡಿ ವಿಸ್ತಾರದಲ್ಲಿ ನಿರ್ಮಾಣ ಗೊಳ್ಳಲಿರುವ ಸ್ಟೂಡೆಂಟ್ಸ್ ಆಕ್ಟಿವಿಟಿ ಸೆಂಟರ್ 2 ಸಾವಿರ ಆಸನ ಸಾಮರ್ಥ್ಯ, ಪ್ರಸಕ್ತ ಯುವ ಪೀಳಿಗೆಯ ಸರ್ವಾಂಗೀಣ ವಿಕಾಸಕ್ಕೆ ಪೂರಕ ಸೌಲಭ್ಯಗಳು, ಪಠ್ಯೇತರ ಪೂರಕ ಚಟುವಟಿಕೆಗಳಿಗೆ ಈ ಸೆಂಟರ್ ವೇದಿಕೆಯಾಗಲಿದೆ. ಮಿನಿ ಥಿಯೇಟರ್ ಸೇರಿದಂತೆ ವಿದ್ಯಾರ್ಥಿಗಳ ಅಗತ್ಯಗಳಿಗೆ ಪೂರಕವಾಗಿ ಎಲ್ಲ ವೈವಿಧ್ಯತೆಯ ಸೌಲಭ್ಯಗಳನ್ನು ಒದಗಿಸುವ ಯೋಜನೆ ಇದಾಗಿದೆ.
ಈ ಸಂದರ್ಭದಲ್ಲಿ ಶ್ರೀಮತಿ ಮೋಹಿನಿ ಡಿ.ಪೈ ಮಣಿಪಾಲ್ ಗ್ಲೋಬಲ್ ಎಜುಕೇಶನ್ ಚೇರ್ಮನ್ ಪದ್ಮಶ್ರೀ ಟಿ.ವಿ.ಮೋಹನದಾಸ್ ಪೈ, ಹಾಂಗ್ಯೋ ಐಸ್ ಕ್ರೀಮ್ ಲಿಮಿಟೆಡ್ ಮ್ಯಾನೇಜಿಂಗ್ ಡೈರೆಕ್ಟರ್ ಪ್ರದೀಪ್ ಜಿ. ಪೈ, ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ಡಿ.ವಾಸುದೇವ ಕಾಮತ್, ಉಪಾಧ್ಯಕ್ಷ ಎಂ. ಪದ್ಮನಾಭ ಪೈ, ಕಾರ್ಯದರ್ಶಿ ಎಂ. ರಂಗನಾಥ ಭಟ್, ಕೆನರಾ ಸಂಸ್ಥೆಗಳ ನಿರ್ದೇಶಕ ಡಾ. ರಾಧಾಕೃಷ್ಣ ಐತಾಳ್, ಆಡಳಿತ ಮಂಡಳಿಯ ಸದಸ್ಯರು ಹಾಗೂ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣೇಶ್ ಭಟ್ ಉಪಸ್ಥಿತರಿದ್ದರು.
Businessmen Dayananda Pai donates 2 crores to Mangalore Canara engineering college for the construction of the activity centre.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm