ಬ್ರೇಕಿಂಗ್ ನ್ಯೂಸ್
13-12-22 08:47 pm Mangalore Correspondent ಕರಾವಳಿ
ಮಂಗಳೂರು, ಡಿ.13 : ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಪ್ರಾಯೋಜಿತ ಕೆನರಾ ಇಂಜಿನಿಯರಿಂಗ್ ಕಾಲೇಜು ಕ್ಯಾಂಪಸ್ ನಲ್ಲಿ ನಿರ್ಮಾಣವಾಗಲಿರುವ ಬಹುವಿಧ ಸೌಲಭ್ಯಗಳಿರುವ 5 ಕೋಟಿ ರೂ. ವೆಚ್ಚದ ಆಕ್ಟಿವಿಟಿ ಸೆಂಟರ್ ಗೆ ಕೆನರಾ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಯೂ ಆಗಿರುವ ಉದ್ಯಮಿ ಸೆಂಚುರಿ ಬಿಲ್ಡರ್ಸ್ ಆಡಳಿತ ನಿರ್ದೇಶಕ ಡಾ.ಪಿ.ದಯಾನಂದ ಪೈ ಮೊದಲ ಹಂತದಲ್ಲಿ ತಮ್ಮ ಎರಡು ಕೋಟಿ ರೂಪಾಯಿಗಳ ಕೊಡುಗೆಯನ್ನು ಘೋಷಿಸಿದ್ದಾರೆ.
ಕಾಲೇಜಿನ ಆವರಣದಲ್ಲಿ ನವೀಕೃತ ಅಕಾಡೆಮಿಕ್ ಬ್ಲಾಕ್ ಉದ್ಘಾಟಿಸುವ ಸಂದರ್ಭದಲ್ಲಿ ಅವರು ಈ ಕೊಡುಗೆಯನ್ನು ಘೋಷಿಸಿದರು. ಶತಮಾನದ ಇತಿಹಾಸವಿರುವ ಕೆನರಾ ಶಿಕ್ಷಣ ಸಂಸ್ಥೆಗಳ ಸಾಧನೆ ದೊಡ್ಡದು ಎಂದ ಅವರು ತನ್ನ ವೃತ್ತಿ ಜೀವನ ರೂಪಿಸುವಲ್ಲಿ ಕೆನರಾ ಶಿಕ್ಷಣ ಸಂಸ್ಥೆಗಳ ಋಣ ತೀರಿಸಲಾಗದ್ದು. ಈ ಭಾವನಾತ್ಮಕ ಬಾಂಧವ್ಯ ತನ್ನ ಕುಟುಂಬದ ಜತೆ ನಿರಂತರವಾಗಿರಬೇಕು ಎಂದವರು ಆಶಯ ವ್ಯಕ್ತಪಡಿಸಿದರು.

ಸುಮಾರು 5 ಕೋಟಿ ರೂ. ವೆಚ್ಚದಲ್ಲಿ 20 ಸಾವಿರ ಚದರ ಅಡಿ ವಿಸ್ತಾರದಲ್ಲಿ ನಿರ್ಮಾಣ ಗೊಳ್ಳಲಿರುವ ಸ್ಟೂಡೆಂಟ್ಸ್ ಆಕ್ಟಿವಿಟಿ ಸೆಂಟರ್ 2 ಸಾವಿರ ಆಸನ ಸಾಮರ್ಥ್ಯ, ಪ್ರಸಕ್ತ ಯುವ ಪೀಳಿಗೆಯ ಸರ್ವಾಂಗೀಣ ವಿಕಾಸಕ್ಕೆ ಪೂರಕ ಸೌಲಭ್ಯಗಳು, ಪಠ್ಯೇತರ ಪೂರಕ ಚಟುವಟಿಕೆಗಳಿಗೆ ಈ ಸೆಂಟರ್ ವೇದಿಕೆಯಾಗಲಿದೆ. ಮಿನಿ ಥಿಯೇಟರ್ ಸೇರಿದಂತೆ ವಿದ್ಯಾರ್ಥಿಗಳ ಅಗತ್ಯಗಳಿಗೆ ಪೂರಕವಾಗಿ ಎಲ್ಲ ವೈವಿಧ್ಯತೆಯ ಸೌಲಭ್ಯಗಳನ್ನು ಒದಗಿಸುವ ಯೋಜನೆ ಇದಾಗಿದೆ.

ಈ ಸಂದರ್ಭದಲ್ಲಿ ಶ್ರೀಮತಿ ಮೋಹಿನಿ ಡಿ.ಪೈ ಮಣಿಪಾಲ್ ಗ್ಲೋಬಲ್ ಎಜುಕೇಶನ್ ಚೇರ್ಮನ್ ಪದ್ಮಶ್ರೀ ಟಿ.ವಿ.ಮೋಹನದಾಸ್ ಪೈ, ಹಾಂಗ್ಯೋ ಐಸ್ ಕ್ರೀಮ್ ಲಿಮಿಟೆಡ್ ಮ್ಯಾನೇಜಿಂಗ್ ಡೈರೆಕ್ಟರ್ ಪ್ರದೀಪ್ ಜಿ. ಪೈ, ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ಡಿ.ವಾಸುದೇವ ಕಾಮತ್, ಉಪಾಧ್ಯಕ್ಷ ಎಂ. ಪದ್ಮನಾಭ ಪೈ, ಕಾರ್ಯದರ್ಶಿ ಎಂ. ರಂಗನಾಥ ಭಟ್, ಕೆನರಾ ಸಂಸ್ಥೆಗಳ ನಿರ್ದೇಶಕ ಡಾ. ರಾಧಾಕೃಷ್ಣ ಐತಾಳ್, ಆಡಳಿತ ಮಂಡಳಿಯ ಸದಸ್ಯರು ಹಾಗೂ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣೇಶ್ ಭಟ್ ಉಪಸ್ಥಿತರಿದ್ದರು.
Businessmen Dayananda Pai donates 2 crores to Mangalore Canara engineering college for the construction of the activity centre.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm