ಬ್ರೇಕಿಂಗ್ ನ್ಯೂಸ್
13-12-22 08:47 pm Mangalore Correspondent ಕರಾವಳಿ
ಮಂಗಳೂರು, ಡಿ.13 : ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಪ್ರಾಯೋಜಿತ ಕೆನರಾ ಇಂಜಿನಿಯರಿಂಗ್ ಕಾಲೇಜು ಕ್ಯಾಂಪಸ್ ನಲ್ಲಿ ನಿರ್ಮಾಣವಾಗಲಿರುವ ಬಹುವಿಧ ಸೌಲಭ್ಯಗಳಿರುವ 5 ಕೋಟಿ ರೂ. ವೆಚ್ಚದ ಆಕ್ಟಿವಿಟಿ ಸೆಂಟರ್ ಗೆ ಕೆನರಾ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಯೂ ಆಗಿರುವ ಉದ್ಯಮಿ ಸೆಂಚುರಿ ಬಿಲ್ಡರ್ಸ್ ಆಡಳಿತ ನಿರ್ದೇಶಕ ಡಾ.ಪಿ.ದಯಾನಂದ ಪೈ ಮೊದಲ ಹಂತದಲ್ಲಿ ತಮ್ಮ ಎರಡು ಕೋಟಿ ರೂಪಾಯಿಗಳ ಕೊಡುಗೆಯನ್ನು ಘೋಷಿಸಿದ್ದಾರೆ.
ಕಾಲೇಜಿನ ಆವರಣದಲ್ಲಿ ನವೀಕೃತ ಅಕಾಡೆಮಿಕ್ ಬ್ಲಾಕ್ ಉದ್ಘಾಟಿಸುವ ಸಂದರ್ಭದಲ್ಲಿ ಅವರು ಈ ಕೊಡುಗೆಯನ್ನು ಘೋಷಿಸಿದರು. ಶತಮಾನದ ಇತಿಹಾಸವಿರುವ ಕೆನರಾ ಶಿಕ್ಷಣ ಸಂಸ್ಥೆಗಳ ಸಾಧನೆ ದೊಡ್ಡದು ಎಂದ ಅವರು ತನ್ನ ವೃತ್ತಿ ಜೀವನ ರೂಪಿಸುವಲ್ಲಿ ಕೆನರಾ ಶಿಕ್ಷಣ ಸಂಸ್ಥೆಗಳ ಋಣ ತೀರಿಸಲಾಗದ್ದು. ಈ ಭಾವನಾತ್ಮಕ ಬಾಂಧವ್ಯ ತನ್ನ ಕುಟುಂಬದ ಜತೆ ನಿರಂತರವಾಗಿರಬೇಕು ಎಂದವರು ಆಶಯ ವ್ಯಕ್ತಪಡಿಸಿದರು.

ಸುಮಾರು 5 ಕೋಟಿ ರೂ. ವೆಚ್ಚದಲ್ಲಿ 20 ಸಾವಿರ ಚದರ ಅಡಿ ವಿಸ್ತಾರದಲ್ಲಿ ನಿರ್ಮಾಣ ಗೊಳ್ಳಲಿರುವ ಸ್ಟೂಡೆಂಟ್ಸ್ ಆಕ್ಟಿವಿಟಿ ಸೆಂಟರ್ 2 ಸಾವಿರ ಆಸನ ಸಾಮರ್ಥ್ಯ, ಪ್ರಸಕ್ತ ಯುವ ಪೀಳಿಗೆಯ ಸರ್ವಾಂಗೀಣ ವಿಕಾಸಕ್ಕೆ ಪೂರಕ ಸೌಲಭ್ಯಗಳು, ಪಠ್ಯೇತರ ಪೂರಕ ಚಟುವಟಿಕೆಗಳಿಗೆ ಈ ಸೆಂಟರ್ ವೇದಿಕೆಯಾಗಲಿದೆ. ಮಿನಿ ಥಿಯೇಟರ್ ಸೇರಿದಂತೆ ವಿದ್ಯಾರ್ಥಿಗಳ ಅಗತ್ಯಗಳಿಗೆ ಪೂರಕವಾಗಿ ಎಲ್ಲ ವೈವಿಧ್ಯತೆಯ ಸೌಲಭ್ಯಗಳನ್ನು ಒದಗಿಸುವ ಯೋಜನೆ ಇದಾಗಿದೆ.

ಈ ಸಂದರ್ಭದಲ್ಲಿ ಶ್ರೀಮತಿ ಮೋಹಿನಿ ಡಿ.ಪೈ ಮಣಿಪಾಲ್ ಗ್ಲೋಬಲ್ ಎಜುಕೇಶನ್ ಚೇರ್ಮನ್ ಪದ್ಮಶ್ರೀ ಟಿ.ವಿ.ಮೋಹನದಾಸ್ ಪೈ, ಹಾಂಗ್ಯೋ ಐಸ್ ಕ್ರೀಮ್ ಲಿಮಿಟೆಡ್ ಮ್ಯಾನೇಜಿಂಗ್ ಡೈರೆಕ್ಟರ್ ಪ್ರದೀಪ್ ಜಿ. ಪೈ, ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ಡಿ.ವಾಸುದೇವ ಕಾಮತ್, ಉಪಾಧ್ಯಕ್ಷ ಎಂ. ಪದ್ಮನಾಭ ಪೈ, ಕಾರ್ಯದರ್ಶಿ ಎಂ. ರಂಗನಾಥ ಭಟ್, ಕೆನರಾ ಸಂಸ್ಥೆಗಳ ನಿರ್ದೇಶಕ ಡಾ. ರಾಧಾಕೃಷ್ಣ ಐತಾಳ್, ಆಡಳಿತ ಮಂಡಳಿಯ ಸದಸ್ಯರು ಹಾಗೂ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣೇಶ್ ಭಟ್ ಉಪಸ್ಥಿತರಿದ್ದರು.
Businessmen Dayananda Pai donates 2 crores to Mangalore Canara engineering college for the construction of the activity centre.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm