ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಗೆ ಲೋಕಾಯುಕ್ತ ದಾಳಿ ; ಅರ್ಜಿ ವಿಲೇವಾರಿಗೆ ವಿಳಂಬ, ಅಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಕ್ರಮ 

14-12-22 11:16 pm       Mangalore Correspondent   ಕರಾವಳಿ

ಬೈಕಂಪಾಡಿಯ ಪ್ರಾದೇಶಿಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಅಧಿಕಾರಿಗಳ ವಿರುದ್ಧ ಫೋನ್ ಇನ್ ಕಾರ್ಯಕ್ರಮದಲ್ಲಿ ಬಂದ ದೂರಿನ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಕಚೇರಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು ಕೆಲವು ನ್ಯೂನ್ಯತೆಗಳು ಕಂಡುಬಂದಿವೆ ಎಂದು ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ತಿಳಿಸಿದ್ದಾರೆ. 

ಮಂಗಳೂರು, ಡಿ.14 : ಬೈಕಂಪಾಡಿಯ ಪ್ರಾದೇಶಿಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಅಧಿಕಾರಿಗಳ ವಿರುದ್ಧ ಫೋನ್ ಇನ್ ಕಾರ್ಯಕ್ರಮದಲ್ಲಿ ಬಂದ ದೂರಿನ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಕಚೇರಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು ಕೆಲವು ನ್ಯೂನ್ಯತೆಗಳು ಕಂಡುಬಂದಿವೆ ಎಂದು ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ತಿಳಿಸಿದ್ದಾರೆ. 

ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಮಂಗಳೂರು ಎಸ್ಪಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧಿಕಾರಿಗಳು ಡಿ.13 ಮತ್ತು 14ರಂದು ಬೈಕಂಪಾಡಿಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ, ಹಲವಾರು ನ್ಯೂನತೆಗಳು ಕಂಡುಬಂದಿವೆ. ಮುಖ್ಯವಾಗಿ ನೋಂದಣಿಗೆ ಬಂದ ಅರ್ಜಿ, ನವೀಕರಣಕ್ಕೆ ಬಂದ ಅರ್ಜಿಗಳನ್ನು ಮತ್ತು ಸಕಾಲದ ವ್ಯಾಪ್ತಿಯಲ್ಲಿ ಬರುವ ಅರ್ಜಿಗಳನ್ನು ಇತ್ಯರ್ಥಗೊಳಿಸದೆ ವಿಳಂಬಗೊಳಿಸಿರುವುದು ಕಂಡುಬಂದಿದೆ. 

ಕೆಲವೊಂದು ಕಾರ್ಖಾನೆಗಳು ನಿಯಮ ಮೀರಿ ಷರತ್ತು ಉಲ್ಲಂಘಿಸಿ ಕಾರ್ಯಾಚರಣೆ ಮಾಡುತ್ತಿದ್ದು, ಅಂತಹ ಕಾರ್ಖಾನೆಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಕಂಡುಬಂದಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಎಸ್ಪಿ ತಿಳಿಸಿದ್ದಾರೆ.

ಫೈಲ್ ಕ್ಲಿಯರೆನ್ಸ್ ಗೆ ಡಿಮ್ಯಾಂಡ್ ; ಬೈಕಂಪಾಡಿ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಗೆ ಲೋಕಾಯುಕ್ತ ದಾಳಿ 

The Mangaluru division of the Lokayukta police raided the Karnataka Pollution Control Board office premises in Baikampady. The raids were conducted after they had received complaints from the public that officials were accepting bribes for issuing licences and permits and following lapses in matters pertaining to pollution control measures and examinations.