ಬ್ರೇಕಿಂಗ್ ನ್ಯೂಸ್
15-10-20 03:47 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 15: ಯೋಗಿ ಆದಿತ್ಯನಾಥ್ ವಿರುದ್ಧ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೀಡಿದ ಹೇಳಿಕೆ ವಿಚಾರ ಈಗ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗಿದೆ. ಮಿಥುನ್ ರೈ ಹೇಳಿಕೆಯಿಂದ ಜೋಗಿ ಸಮುದಾಯಕ್ಕೆ ಅವಮಾನ ಆಗಿದೆ ಎಂದು ಜೋಗಿ ಸುಧಾರಕ ಸಂಘದಿಂದ ಪತ್ರಿಕಾ ಹೇಳಿಕೆ ನೀಡಲಾಗಿತ್ತು. ಇದೀಗ ಜೋಗಿ ಸಮುದಾಯಕ್ಕೇ ಸೇರಿದ ಕಾಂಗ್ರೆಸ್ ಮುಖಂಡ ಮತ್ತು ಮನಪಾ ಮಾಜಿ ಮೇಯರ್ ಹರಿನಾಥ್, ಮಿಥುನ್ ರೈ ಹೇಳಿಕೆಯಿಂದ ಜೋಗಿ ಸಮುದಾಯಕ್ಕೆ ಯಾವುದೇ ಅವಮಾನ ಆಗಿಲ್ಲ ಎಂದಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹರಿನಾಥ್, ಹತ್ರಾಸ್ನಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಪ್ರಕರಣವನ್ನು ವಿರೋಧಿಸಿ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನೀಡಿದ ಹೇಳಿಕೆಗೆ ವ್ಯಾಪಕ ಟೀಕೆಗಳು ಬರುತ್ತಿವೆ. ನಮ್ಮ ಸಮಾಜಕ್ಕೆ ಮಿಥುನ್ ರೈ ಅವಮಾನ ಮಾಡಿಲ್ಲ. ಜೋಗಿ ಸುಧಾರಕ ಸಂಘದ ಕಿರಣ್ ಜೋಗಿ ಓರ್ವ ಸ್ವಯಂ ಘೋಷಿತ ಅಧ್ಯಕ್ಷನಷ್ಟೇ. ಯಾವುದೇ ಚುನಾವಣೆ ಎದುರಿಸಿ ಅಧ್ಯಕ್ಷರಾಗಿಲ್ಲ. ಜೋಗಿ ಸಮುದಾಯದ ಸಮಸ್ಯೆಯನ್ನು ಯಾರೂ ಕೂಡ ಆಲಿಸುವುದಿಲ್ಲ. ಈಗ ಮಿಥುನ್ ರೈ ಹೇಳಿಕೆಗೆ ವಿರೋಧ ವ್ಯಕ್ತಪಡಿಸುವುದು ಖಂಡನೀಯ. ಇದು ರಾಜಕೀಯ ಪ್ರೇರಿತ ಹೇಳಿಕೆ ಎಂದು ಹರಿನಾಥ್ ಹೇಳಿದರು.

ಈ ಸಂದರ್ಭ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಜೆ.ಆರ್. ಲೋಬೋ, ಶಶಿಧರ್ ಹೆಗ್ಡೆ, ಟೀಕೆ ಸುಧೀರ್ ಮತ್ತಿತರರು ಉಪಸ್ಥಿತರಿದ್ದರು.
Youth Congress leader Mithun Rai who spoke hurtful words about Up Cm Yogi hasn't hurt the Jogi community clarifies Mangalore former Mayor Harinath in the press meet held at the Press Club in Mangalore here on 15 Thursday, October 2020
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm