ಬ್ರೇಕಿಂಗ್ ನ್ಯೂಸ್
16-12-22 11:48 am Mangalore Correspondent ಕರಾವಳಿ
ಬಂಟ್ವಾಳ, ಡಿ.16 :ಹಿಂದು ಹುಡುಗಿಯ ಜೊತೆ ಮುಸ್ಲಿಂ ಯುವಕ ಬೆಂಗಳೂರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಹಿಂದು ಸಂಘಟನೆ ಯುವಕರು ಬಸ್ ತಡೆದು ದಬಾಯಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಕಾನೂನು ಪದವಿ ಮುಗಿಸಿರುವ ಭಟ್ಕಳ ಮೂಲದ ಮುಸ್ಲಿಂ ಯುವಕ ಮತ್ತು ಆತನ ಜೊತೆಗೆ ಕಾಲೇಜು ಓದಿದ್ದಳು ಎನ್ನಲಾದ ಬಂಟ ಸಮುದಾಯದ ಮಂಗಳೂರಿನ ಹುಡುಗಿ ಬೆಂಗಳೂರು ತೆರಳುತ್ತಿದ್ದ ದುರ್ಗಾಂಬಾ ಬಸ್ಸಿನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದು ಹಿಂದು ಸಂಘಟನೆ ಕಾರ್ಯಕರ್ತರು ಬಸ್ ತಡೆದಿದ್ದಾರೆ. ಬಸ್ಸನ್ನು ಬಂಟ್ವಾಳದ ದಾಸಕೋಡಿ ಎಂಬಲ್ಲಿ ತಡೆದು ನಿಲ್ಲಿಸಿದ್ದು ಒಳಗಿದ್ದ ಯುವಕ - ಯುವತಿಯನ್ನು ಕೆಳಗೆ ಇಳಿಯಲು ಹೇಳಿ ಜೋರು ಮಾಡಿದ್ದಾರೆ. ಆದರೆ ಹುಡುಗಿ, ನೀವ್ಯಾರು ಕೇಳೋರು ಅಂತ ಮರು ಪ್ರಶ್ನೆ ಹಾಕಿದ್ದಾಳೆ. ಬಳಿಕ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಬಂದು ಹುಡುಗ- ಹುಡುಗಿಯನ್ನು ಠಾಣೆಗೆ ಕರೆದೊಯ್ದಿದ್ದಾರೆ.

ಠಾಣೆಯಲ್ಲಿ ದೂರು ನೀಡಲು ಸೂಚಿಸಿದಾಗ, ಯುವಕ- ಯುವತಿ ದೂರು ಬೇಡವೆಂದು ಹೇಳಿ ಹೋಗಿದ್ದಾರೆ. ಸಂಘಟನೆ ಕಾರ್ಯಕರ್ತರು ಬಸ್ ನಿಲ್ಲಿಸಿ, ಮಾತಿನ ಚಕಮಕಿ ನಡೆಸಿರುವ ವಿಡಿಯೋ ತುಣುಕು ವೈರಲ್ ಆಗಿದೆ. ಘಟನೆ ಬಗ್ಗೆ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಮಾಹಿತಿ ಪ್ರಕಾರ, ಯುವಕ- ಯುವತಿ ಹಿಂದೆ ಒಂದೇ ಕಾಲೇಜಿನಲ್ಲಿ ಓದಿದವರು ಎನ್ನಲಾಗುತ್ತಿದ್ದು ಬೆಂಗಳೂರಿಗೆ ಯಾವುದೋ ಸರ್ಟಿಫಿಕೇಟ್ ಪಡೆಯುವ ಸಲುವಾಗಿ ಜೊತೆಗೆ ಪ್ರಯಾಣಿಸುತ್ತಿದ್ದರು. ಆದರೆ ಸ್ಲೀಪರ್ ಕೋಚ್ ಬಸ್ಸಿನಲ್ಲಿ ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಜೊತೆಗಿದ್ದ ಬಗ್ಗೆ ಮಾಹಿತಿ ಪಡೆದ ಸಂಘಟನೆ ಯುವಕರು ಬಸ್ ತಡೆದು ಹೈಡ್ರಾಮಾ ನಡೆಸಿದ್ದಾರೆ. ಆದರೆ ಯುವಕರು ಯಾವುದೇ ಹಲ್ಲೆ ನಡೆಸಿಲ್ಲ ಎನ್ನುವ ಮಾಹಿತಿಯನ್ನು ಬಂಟ್ವಾಳ ಪೊಲೀಸರು ನೀಡಿದ್ದಾರೆ.
Mangalore Moral police in Private bus to bangalore, muslim youth caught with Hindu girl.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm