ಬ್ರೇಕಿಂಗ್ ನ್ಯೂಸ್
16-12-22 11:48 am Mangalore Correspondent ಕರಾವಳಿ
ಬಂಟ್ವಾಳ, ಡಿ.16 :ಹಿಂದು ಹುಡುಗಿಯ ಜೊತೆ ಮುಸ್ಲಿಂ ಯುವಕ ಬೆಂಗಳೂರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಹಿಂದು ಸಂಘಟನೆ ಯುವಕರು ಬಸ್ ತಡೆದು ದಬಾಯಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಕಾನೂನು ಪದವಿ ಮುಗಿಸಿರುವ ಭಟ್ಕಳ ಮೂಲದ ಮುಸ್ಲಿಂ ಯುವಕ ಮತ್ತು ಆತನ ಜೊತೆಗೆ ಕಾಲೇಜು ಓದಿದ್ದಳು ಎನ್ನಲಾದ ಬಂಟ ಸಮುದಾಯದ ಮಂಗಳೂರಿನ ಹುಡುಗಿ ಬೆಂಗಳೂರು ತೆರಳುತ್ತಿದ್ದ ದುರ್ಗಾಂಬಾ ಬಸ್ಸಿನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದು ಹಿಂದು ಸಂಘಟನೆ ಕಾರ್ಯಕರ್ತರು ಬಸ್ ತಡೆದಿದ್ದಾರೆ. ಬಸ್ಸನ್ನು ಬಂಟ್ವಾಳದ ದಾಸಕೋಡಿ ಎಂಬಲ್ಲಿ ತಡೆದು ನಿಲ್ಲಿಸಿದ್ದು ಒಳಗಿದ್ದ ಯುವಕ - ಯುವತಿಯನ್ನು ಕೆಳಗೆ ಇಳಿಯಲು ಹೇಳಿ ಜೋರು ಮಾಡಿದ್ದಾರೆ. ಆದರೆ ಹುಡುಗಿ, ನೀವ್ಯಾರು ಕೇಳೋರು ಅಂತ ಮರು ಪ್ರಶ್ನೆ ಹಾಕಿದ್ದಾಳೆ. ಬಳಿಕ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಬಂದು ಹುಡುಗ- ಹುಡುಗಿಯನ್ನು ಠಾಣೆಗೆ ಕರೆದೊಯ್ದಿದ್ದಾರೆ.

ಠಾಣೆಯಲ್ಲಿ ದೂರು ನೀಡಲು ಸೂಚಿಸಿದಾಗ, ಯುವಕ- ಯುವತಿ ದೂರು ಬೇಡವೆಂದು ಹೇಳಿ ಹೋಗಿದ್ದಾರೆ. ಸಂಘಟನೆ ಕಾರ್ಯಕರ್ತರು ಬಸ್ ನಿಲ್ಲಿಸಿ, ಮಾತಿನ ಚಕಮಕಿ ನಡೆಸಿರುವ ವಿಡಿಯೋ ತುಣುಕು ವೈರಲ್ ಆಗಿದೆ. ಘಟನೆ ಬಗ್ಗೆ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಮಾಹಿತಿ ಪ್ರಕಾರ, ಯುವಕ- ಯುವತಿ ಹಿಂದೆ ಒಂದೇ ಕಾಲೇಜಿನಲ್ಲಿ ಓದಿದವರು ಎನ್ನಲಾಗುತ್ತಿದ್ದು ಬೆಂಗಳೂರಿಗೆ ಯಾವುದೋ ಸರ್ಟಿಫಿಕೇಟ್ ಪಡೆಯುವ ಸಲುವಾಗಿ ಜೊತೆಗೆ ಪ್ರಯಾಣಿಸುತ್ತಿದ್ದರು. ಆದರೆ ಸ್ಲೀಪರ್ ಕೋಚ್ ಬಸ್ಸಿನಲ್ಲಿ ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಜೊತೆಗಿದ್ದ ಬಗ್ಗೆ ಮಾಹಿತಿ ಪಡೆದ ಸಂಘಟನೆ ಯುವಕರು ಬಸ್ ತಡೆದು ಹೈಡ್ರಾಮಾ ನಡೆಸಿದ್ದಾರೆ. ಆದರೆ ಯುವಕರು ಯಾವುದೇ ಹಲ್ಲೆ ನಡೆಸಿಲ್ಲ ಎನ್ನುವ ಮಾಹಿತಿಯನ್ನು ಬಂಟ್ವಾಳ ಪೊಲೀಸರು ನೀಡಿದ್ದಾರೆ.
Mangalore Moral police in Private bus to bangalore, muslim youth caught with Hindu girl.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm