ಬ್ರೇಕಿಂಗ್ ನ್ಯೂಸ್
16-12-22 11:48 am Mangalore Correspondent ಕರಾವಳಿ
ಬಂಟ್ವಾಳ, ಡಿ.16 :ಹಿಂದು ಹುಡುಗಿಯ ಜೊತೆ ಮುಸ್ಲಿಂ ಯುವಕ ಬೆಂಗಳೂರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಹಿಂದು ಸಂಘಟನೆ ಯುವಕರು ಬಸ್ ತಡೆದು ದಬಾಯಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಕಾನೂನು ಪದವಿ ಮುಗಿಸಿರುವ ಭಟ್ಕಳ ಮೂಲದ ಮುಸ್ಲಿಂ ಯುವಕ ಮತ್ತು ಆತನ ಜೊತೆಗೆ ಕಾಲೇಜು ಓದಿದ್ದಳು ಎನ್ನಲಾದ ಬಂಟ ಸಮುದಾಯದ ಮಂಗಳೂರಿನ ಹುಡುಗಿ ಬೆಂಗಳೂರು ತೆರಳುತ್ತಿದ್ದ ದುರ್ಗಾಂಬಾ ಬಸ್ಸಿನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದು ಹಿಂದು ಸಂಘಟನೆ ಕಾರ್ಯಕರ್ತರು ಬಸ್ ತಡೆದಿದ್ದಾರೆ. ಬಸ್ಸನ್ನು ಬಂಟ್ವಾಳದ ದಾಸಕೋಡಿ ಎಂಬಲ್ಲಿ ತಡೆದು ನಿಲ್ಲಿಸಿದ್ದು ಒಳಗಿದ್ದ ಯುವಕ - ಯುವತಿಯನ್ನು ಕೆಳಗೆ ಇಳಿಯಲು ಹೇಳಿ ಜೋರು ಮಾಡಿದ್ದಾರೆ. ಆದರೆ ಹುಡುಗಿ, ನೀವ್ಯಾರು ಕೇಳೋರು ಅಂತ ಮರು ಪ್ರಶ್ನೆ ಹಾಕಿದ್ದಾಳೆ. ಬಳಿಕ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಬಂದು ಹುಡುಗ- ಹುಡುಗಿಯನ್ನು ಠಾಣೆಗೆ ಕರೆದೊಯ್ದಿದ್ದಾರೆ.
ಠಾಣೆಯಲ್ಲಿ ದೂರು ನೀಡಲು ಸೂಚಿಸಿದಾಗ, ಯುವಕ- ಯುವತಿ ದೂರು ಬೇಡವೆಂದು ಹೇಳಿ ಹೋಗಿದ್ದಾರೆ. ಸಂಘಟನೆ ಕಾರ್ಯಕರ್ತರು ಬಸ್ ನಿಲ್ಲಿಸಿ, ಮಾತಿನ ಚಕಮಕಿ ನಡೆಸಿರುವ ವಿಡಿಯೋ ತುಣುಕು ವೈರಲ್ ಆಗಿದೆ. ಘಟನೆ ಬಗ್ಗೆ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಮಾಹಿತಿ ಪ್ರಕಾರ, ಯುವಕ- ಯುವತಿ ಹಿಂದೆ ಒಂದೇ ಕಾಲೇಜಿನಲ್ಲಿ ಓದಿದವರು ಎನ್ನಲಾಗುತ್ತಿದ್ದು ಬೆಂಗಳೂರಿಗೆ ಯಾವುದೋ ಸರ್ಟಿಫಿಕೇಟ್ ಪಡೆಯುವ ಸಲುವಾಗಿ ಜೊತೆಗೆ ಪ್ರಯಾಣಿಸುತ್ತಿದ್ದರು. ಆದರೆ ಸ್ಲೀಪರ್ ಕೋಚ್ ಬಸ್ಸಿನಲ್ಲಿ ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಜೊತೆಗಿದ್ದ ಬಗ್ಗೆ ಮಾಹಿತಿ ಪಡೆದ ಸಂಘಟನೆ ಯುವಕರು ಬಸ್ ತಡೆದು ಹೈಡ್ರಾಮಾ ನಡೆಸಿದ್ದಾರೆ. ಆದರೆ ಯುವಕರು ಯಾವುದೇ ಹಲ್ಲೆ ನಡೆಸಿಲ್ಲ ಎನ್ನುವ ಮಾಹಿತಿಯನ್ನು ಬಂಟ್ವಾಳ ಪೊಲೀಸರು ನೀಡಿದ್ದಾರೆ.
Mangalore Moral police in Private bus to bangalore, muslim youth caught with Hindu girl.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm