ಬ್ರೇಕಿಂಗ್ ನ್ಯೂಸ್
16-12-22 11:48 am Mangalore Correspondent ಕರಾವಳಿ
ಬಂಟ್ವಾಳ, ಡಿ.16 :ಹಿಂದು ಹುಡುಗಿಯ ಜೊತೆ ಮುಸ್ಲಿಂ ಯುವಕ ಬೆಂಗಳೂರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಹಿಂದು ಸಂಘಟನೆ ಯುವಕರು ಬಸ್ ತಡೆದು ದಬಾಯಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಕಾನೂನು ಪದವಿ ಮುಗಿಸಿರುವ ಭಟ್ಕಳ ಮೂಲದ ಮುಸ್ಲಿಂ ಯುವಕ ಮತ್ತು ಆತನ ಜೊತೆಗೆ ಕಾಲೇಜು ಓದಿದ್ದಳು ಎನ್ನಲಾದ ಬಂಟ ಸಮುದಾಯದ ಮಂಗಳೂರಿನ ಹುಡುಗಿ ಬೆಂಗಳೂರು ತೆರಳುತ್ತಿದ್ದ ದುರ್ಗಾಂಬಾ ಬಸ್ಸಿನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದು ಹಿಂದು ಸಂಘಟನೆ ಕಾರ್ಯಕರ್ತರು ಬಸ್ ತಡೆದಿದ್ದಾರೆ. ಬಸ್ಸನ್ನು ಬಂಟ್ವಾಳದ ದಾಸಕೋಡಿ ಎಂಬಲ್ಲಿ ತಡೆದು ನಿಲ್ಲಿಸಿದ್ದು ಒಳಗಿದ್ದ ಯುವಕ - ಯುವತಿಯನ್ನು ಕೆಳಗೆ ಇಳಿಯಲು ಹೇಳಿ ಜೋರು ಮಾಡಿದ್ದಾರೆ. ಆದರೆ ಹುಡುಗಿ, ನೀವ್ಯಾರು ಕೇಳೋರು ಅಂತ ಮರು ಪ್ರಶ್ನೆ ಹಾಕಿದ್ದಾಳೆ. ಬಳಿಕ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಬಂದು ಹುಡುಗ- ಹುಡುಗಿಯನ್ನು ಠಾಣೆಗೆ ಕರೆದೊಯ್ದಿದ್ದಾರೆ.

ಠಾಣೆಯಲ್ಲಿ ದೂರು ನೀಡಲು ಸೂಚಿಸಿದಾಗ, ಯುವಕ- ಯುವತಿ ದೂರು ಬೇಡವೆಂದು ಹೇಳಿ ಹೋಗಿದ್ದಾರೆ. ಸಂಘಟನೆ ಕಾರ್ಯಕರ್ತರು ಬಸ್ ನಿಲ್ಲಿಸಿ, ಮಾತಿನ ಚಕಮಕಿ ನಡೆಸಿರುವ ವಿಡಿಯೋ ತುಣುಕು ವೈರಲ್ ಆಗಿದೆ. ಘಟನೆ ಬಗ್ಗೆ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಮಾಹಿತಿ ಪ್ರಕಾರ, ಯುವಕ- ಯುವತಿ ಹಿಂದೆ ಒಂದೇ ಕಾಲೇಜಿನಲ್ಲಿ ಓದಿದವರು ಎನ್ನಲಾಗುತ್ತಿದ್ದು ಬೆಂಗಳೂರಿಗೆ ಯಾವುದೋ ಸರ್ಟಿಫಿಕೇಟ್ ಪಡೆಯುವ ಸಲುವಾಗಿ ಜೊತೆಗೆ ಪ್ರಯಾಣಿಸುತ್ತಿದ್ದರು. ಆದರೆ ಸ್ಲೀಪರ್ ಕೋಚ್ ಬಸ್ಸಿನಲ್ಲಿ ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಜೊತೆಗಿದ್ದ ಬಗ್ಗೆ ಮಾಹಿತಿ ಪಡೆದ ಸಂಘಟನೆ ಯುವಕರು ಬಸ್ ತಡೆದು ಹೈಡ್ರಾಮಾ ನಡೆಸಿದ್ದಾರೆ. ಆದರೆ ಯುವಕರು ಯಾವುದೇ ಹಲ್ಲೆ ನಡೆಸಿಲ್ಲ ಎನ್ನುವ ಮಾಹಿತಿಯನ್ನು ಬಂಟ್ವಾಳ ಪೊಲೀಸರು ನೀಡಿದ್ದಾರೆ.
Mangalore Moral police in Private bus to bangalore, muslim youth caught with Hindu girl.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm