ಬ್ರೇಕಿಂಗ್ ನ್ಯೂಸ್
16-12-22 11:48 am Mangalore Correspondent ಕರಾವಳಿ
ಬಂಟ್ವಾಳ, ಡಿ.16 :ಹಿಂದು ಹುಡುಗಿಯ ಜೊತೆ ಮುಸ್ಲಿಂ ಯುವಕ ಬೆಂಗಳೂರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಹಿಂದು ಸಂಘಟನೆ ಯುವಕರು ಬಸ್ ತಡೆದು ದಬಾಯಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಕಾನೂನು ಪದವಿ ಮುಗಿಸಿರುವ ಭಟ್ಕಳ ಮೂಲದ ಮುಸ್ಲಿಂ ಯುವಕ ಮತ್ತು ಆತನ ಜೊತೆಗೆ ಕಾಲೇಜು ಓದಿದ್ದಳು ಎನ್ನಲಾದ ಬಂಟ ಸಮುದಾಯದ ಮಂಗಳೂರಿನ ಹುಡುಗಿ ಬೆಂಗಳೂರು ತೆರಳುತ್ತಿದ್ದ ದುರ್ಗಾಂಬಾ ಬಸ್ಸಿನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದು ಹಿಂದು ಸಂಘಟನೆ ಕಾರ್ಯಕರ್ತರು ಬಸ್ ತಡೆದಿದ್ದಾರೆ. ಬಸ್ಸನ್ನು ಬಂಟ್ವಾಳದ ದಾಸಕೋಡಿ ಎಂಬಲ್ಲಿ ತಡೆದು ನಿಲ್ಲಿಸಿದ್ದು ಒಳಗಿದ್ದ ಯುವಕ - ಯುವತಿಯನ್ನು ಕೆಳಗೆ ಇಳಿಯಲು ಹೇಳಿ ಜೋರು ಮಾಡಿದ್ದಾರೆ. ಆದರೆ ಹುಡುಗಿ, ನೀವ್ಯಾರು ಕೇಳೋರು ಅಂತ ಮರು ಪ್ರಶ್ನೆ ಹಾಕಿದ್ದಾಳೆ. ಬಳಿಕ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಬಂದು ಹುಡುಗ- ಹುಡುಗಿಯನ್ನು ಠಾಣೆಗೆ ಕರೆದೊಯ್ದಿದ್ದಾರೆ.

ಠಾಣೆಯಲ್ಲಿ ದೂರು ನೀಡಲು ಸೂಚಿಸಿದಾಗ, ಯುವಕ- ಯುವತಿ ದೂರು ಬೇಡವೆಂದು ಹೇಳಿ ಹೋಗಿದ್ದಾರೆ. ಸಂಘಟನೆ ಕಾರ್ಯಕರ್ತರು ಬಸ್ ನಿಲ್ಲಿಸಿ, ಮಾತಿನ ಚಕಮಕಿ ನಡೆಸಿರುವ ವಿಡಿಯೋ ತುಣುಕು ವೈರಲ್ ಆಗಿದೆ. ಘಟನೆ ಬಗ್ಗೆ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಮಾಹಿತಿ ಪ್ರಕಾರ, ಯುವಕ- ಯುವತಿ ಹಿಂದೆ ಒಂದೇ ಕಾಲೇಜಿನಲ್ಲಿ ಓದಿದವರು ಎನ್ನಲಾಗುತ್ತಿದ್ದು ಬೆಂಗಳೂರಿಗೆ ಯಾವುದೋ ಸರ್ಟಿಫಿಕೇಟ್ ಪಡೆಯುವ ಸಲುವಾಗಿ ಜೊತೆಗೆ ಪ್ರಯಾಣಿಸುತ್ತಿದ್ದರು. ಆದರೆ ಸ್ಲೀಪರ್ ಕೋಚ್ ಬಸ್ಸಿನಲ್ಲಿ ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಜೊತೆಗಿದ್ದ ಬಗ್ಗೆ ಮಾಹಿತಿ ಪಡೆದ ಸಂಘಟನೆ ಯುವಕರು ಬಸ್ ತಡೆದು ಹೈಡ್ರಾಮಾ ನಡೆಸಿದ್ದಾರೆ. ಆದರೆ ಯುವಕರು ಯಾವುದೇ ಹಲ್ಲೆ ನಡೆಸಿಲ್ಲ ಎನ್ನುವ ಮಾಹಿತಿಯನ್ನು ಬಂಟ್ವಾಳ ಪೊಲೀಸರು ನೀಡಿದ್ದಾರೆ.
Mangalore Moral police in Private bus to bangalore, muslim youth caught with Hindu girl.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 05:39 pm
HK News Staffer
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm