ಬ್ರೇಕಿಂಗ್ ನ್ಯೂಸ್
30-07-20 02:47 pm Mangalore Reporter ಕರಾವಳಿ
ಮಂಗಳೂರು, ಜುಲೈ 30: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ಉಪಾಯ ಕಂಡುಕೊಳ್ಳಲಾಗಿದೆ. ಸಾವಯವ ಸ್ಯಾನಿಟೈಸರ್ ಬಳಸಿ, ಸಾಮೂಹಿಕವಾಗಿ ಜನರ ಮೇಲೆ ಸಿಂಪಡಣೆಗೆ ಯೋಜನೆ ರೂಪಿಸಲಾಗಿದೆ.
ಸಾಮೂಹಿಕವಾಗಿ ಜನ ಸೇರುವ ಪ್ರದೇಶದಲ್ಲಿ ಸೋಂಕು ತಡೆಗಟ್ಟುವ ವಿಧಾನದ ಬಗ್ಗೆ ಗಂಭೀರ ಚರ್ಚೆಗಳು ನಡೆದಿರುವಾಗಲೇ ಈ ಸಮಸ್ಯೆಗೆ ಪರಿಹಾರ ಎಂಬಂತೆ ಚೆನ್ನೈ ಮೂಲದ ಸಂಸ್ಥೆಯೊಂದು ಧರ್ಮಸ್ಥಳದಲ್ಲಿ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಿಸುವ ವಿಧಾನದ ಪ್ರಾತ್ಯಕ್ಷಿಕೆ ನೀಡಿದೆ.
ಚೆನ್ನೈ ಮೂಲದ ಸುಗಾರಾಧನಾ ಎನ್ನುವ ತಂಡ ಸಾವಯವ ಸ್ಯಾನಿಟೈಸರ್ ಅನ್ನು ಡ್ರೋನ್ ಮೂಲಕ ಪರಿಸರದಲ್ಲಿ ಸಿಂಪಡಿಸುವ ಪ್ರಾತ್ಯಕ್ಷಿಕೆ ನೀಡಿದೆ. ಪ್ರತಿದಿನ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ಸಾವಿರಾರು ಭಕ್ತರು ಬರುತ್ತಾರೆ. ಇಂಥ ಪ್ರದೇಶದಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಸುತ್ತಮುತ್ತ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಿಸಲು ಯೋಜನೆ ರೂಪಿಸಲಾಗಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆ ಸ್ಯಾನಿಟೈಸರ್ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಸಂಪೂರ್ಣ ಸಾವಯವ ವಸ್ತುಗಳನ್ನು ಬಳಸಿಕೊಂಡು ಈ ಸ್ಯಾನಿಟೈಸರ್ ತಯಾರಿಸಲಾಗಿದ್ದು, ಕೊರೊನಾ ಸೋಂಕು ತಡೆಯುವಲ್ಲಿ ಇದು ಅತ್ಯಂತ ಪರಿಣಾಮಕಾರಿ ಎಂದು ಹೇಳಲಾಗಿದೆ. ತಮಿಳುನಾಡಿನ ಕೊರೊನಾ ಪೀಡಿತ ಪ್ರದೇಶಗಳಲ್ಲಿ ಇದೇ ಮಾದರಿಯ ಡ್ರೋಣ್ ಮೂಲಕ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ. ಅಣ್ಣಾ ವಿಶ್ವವಿದ್ಯಾನಿಲಯದ ಎಂ.ಐ.ಟಿ ವಿದ್ಯಾರ್ಥಿಗಳು ಈ ಡ್ರೋನ್ ತಯಾರಿಸಿದ್ದಾರೆ. 16 ಲೀಟರ್ ಸ್ಯಾನಿಟೈಸರ್ ತುಂಬಿಸಿಕೊಂಡು ಹಾರಾಡುವ ಸಾಮರ್ಥ್ಯ ಈ ಡ್ರೋನ್ ಗಿದ್ದು, ದೊಡ್ಡ ಕಟ್ಟಡಗಳನ್ನು ಈ ಡ್ರೋನ್ ಮೂಲಕ ಸಂಪೂರ್ಣ ಸ್ಯಾನಿಟೈಸ್ ಮಾಡಬಹುದಾಗಿದೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm