ಬ್ರೇಕಿಂಗ್ ನ್ಯೂಸ್
30-07-20 02:47 pm Mangalore Reporter ಕರಾವಳಿ
ಮಂಗಳೂರು, ಜುಲೈ 30: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ಉಪಾಯ ಕಂಡುಕೊಳ್ಳಲಾಗಿದೆ. ಸಾವಯವ ಸ್ಯಾನಿಟೈಸರ್ ಬಳಸಿ, ಸಾಮೂಹಿಕವಾಗಿ ಜನರ ಮೇಲೆ ಸಿಂಪಡಣೆಗೆ ಯೋಜನೆ ರೂಪಿಸಲಾಗಿದೆ.
ಸಾಮೂಹಿಕವಾಗಿ ಜನ ಸೇರುವ ಪ್ರದೇಶದಲ್ಲಿ ಸೋಂಕು ತಡೆಗಟ್ಟುವ ವಿಧಾನದ ಬಗ್ಗೆ ಗಂಭೀರ ಚರ್ಚೆಗಳು ನಡೆದಿರುವಾಗಲೇ ಈ ಸಮಸ್ಯೆಗೆ ಪರಿಹಾರ ಎಂಬಂತೆ ಚೆನ್ನೈ ಮೂಲದ ಸಂಸ್ಥೆಯೊಂದು ಧರ್ಮಸ್ಥಳದಲ್ಲಿ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಿಸುವ ವಿಧಾನದ ಪ್ರಾತ್ಯಕ್ಷಿಕೆ ನೀಡಿದೆ.
ಚೆನ್ನೈ ಮೂಲದ ಸುಗಾರಾಧನಾ ಎನ್ನುವ ತಂಡ ಸಾವಯವ ಸ್ಯಾನಿಟೈಸರ್ ಅನ್ನು ಡ್ರೋನ್ ಮೂಲಕ ಪರಿಸರದಲ್ಲಿ ಸಿಂಪಡಿಸುವ ಪ್ರಾತ್ಯಕ್ಷಿಕೆ ನೀಡಿದೆ. ಪ್ರತಿದಿನ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ಸಾವಿರಾರು ಭಕ್ತರು ಬರುತ್ತಾರೆ. ಇಂಥ ಪ್ರದೇಶದಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಸುತ್ತಮುತ್ತ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಿಸಲು ಯೋಜನೆ ರೂಪಿಸಲಾಗಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆ ಸ್ಯಾನಿಟೈಸರ್ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಸಂಪೂರ್ಣ ಸಾವಯವ ವಸ್ತುಗಳನ್ನು ಬಳಸಿಕೊಂಡು ಈ ಸ್ಯಾನಿಟೈಸರ್ ತಯಾರಿಸಲಾಗಿದ್ದು, ಕೊರೊನಾ ಸೋಂಕು ತಡೆಯುವಲ್ಲಿ ಇದು ಅತ್ಯಂತ ಪರಿಣಾಮಕಾರಿ ಎಂದು ಹೇಳಲಾಗಿದೆ. ತಮಿಳುನಾಡಿನ ಕೊರೊನಾ ಪೀಡಿತ ಪ್ರದೇಶಗಳಲ್ಲಿ ಇದೇ ಮಾದರಿಯ ಡ್ರೋಣ್ ಮೂಲಕ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ. ಅಣ್ಣಾ ವಿಶ್ವವಿದ್ಯಾನಿಲಯದ ಎಂ.ಐ.ಟಿ ವಿದ್ಯಾರ್ಥಿಗಳು ಈ ಡ್ರೋನ್ ತಯಾರಿಸಿದ್ದಾರೆ. 16 ಲೀಟರ್ ಸ್ಯಾನಿಟೈಸರ್ ತುಂಬಿಸಿಕೊಂಡು ಹಾರಾಡುವ ಸಾಮರ್ಥ್ಯ ಈ ಡ್ರೋನ್ ಗಿದ್ದು, ದೊಡ್ಡ ಕಟ್ಟಡಗಳನ್ನು ಈ ಡ್ರೋನ್ ಮೂಲಕ ಸಂಪೂರ್ಣ ಸ್ಯಾನಿಟೈಸ್ ಮಾಡಬಹುದಾಗಿದೆ.
11-10-25 10:05 am
Bangalore Correspondent
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 11:11 am
Mangalore Correspondent
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm