ಬ್ರೇಕಿಂಗ್ ನ್ಯೂಸ್
30-07-20 02:47 pm Mangalore Reporter ಕರಾವಳಿ
ಮಂಗಳೂರು, ಜುಲೈ 30: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ಉಪಾಯ ಕಂಡುಕೊಳ್ಳಲಾಗಿದೆ. ಸಾವಯವ ಸ್ಯಾನಿಟೈಸರ್ ಬಳಸಿ, ಸಾಮೂಹಿಕವಾಗಿ ಜನರ ಮೇಲೆ ಸಿಂಪಡಣೆಗೆ ಯೋಜನೆ ರೂಪಿಸಲಾಗಿದೆ.
ಸಾಮೂಹಿಕವಾಗಿ ಜನ ಸೇರುವ ಪ್ರದೇಶದಲ್ಲಿ ಸೋಂಕು ತಡೆಗಟ್ಟುವ ವಿಧಾನದ ಬಗ್ಗೆ ಗಂಭೀರ ಚರ್ಚೆಗಳು ನಡೆದಿರುವಾಗಲೇ ಈ ಸಮಸ್ಯೆಗೆ ಪರಿಹಾರ ಎಂಬಂತೆ ಚೆನ್ನೈ ಮೂಲದ ಸಂಸ್ಥೆಯೊಂದು ಧರ್ಮಸ್ಥಳದಲ್ಲಿ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಿಸುವ ವಿಧಾನದ ಪ್ರಾತ್ಯಕ್ಷಿಕೆ ನೀಡಿದೆ.
ಚೆನ್ನೈ ಮೂಲದ ಸುಗಾರಾಧನಾ ಎನ್ನುವ ತಂಡ ಸಾವಯವ ಸ್ಯಾನಿಟೈಸರ್ ಅನ್ನು ಡ್ರೋನ್ ಮೂಲಕ ಪರಿಸರದಲ್ಲಿ ಸಿಂಪಡಿಸುವ ಪ್ರಾತ್ಯಕ್ಷಿಕೆ ನೀಡಿದೆ. ಪ್ರತಿದಿನ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ಸಾವಿರಾರು ಭಕ್ತರು ಬರುತ್ತಾರೆ. ಇಂಥ ಪ್ರದೇಶದಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಸುತ್ತಮುತ್ತ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಿಸಲು ಯೋಜನೆ ರೂಪಿಸಲಾಗಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆ ಸ್ಯಾನಿಟೈಸರ್ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಸಂಪೂರ್ಣ ಸಾವಯವ ವಸ್ತುಗಳನ್ನು ಬಳಸಿಕೊಂಡು ಈ ಸ್ಯಾನಿಟೈಸರ್ ತಯಾರಿಸಲಾಗಿದ್ದು, ಕೊರೊನಾ ಸೋಂಕು ತಡೆಯುವಲ್ಲಿ ಇದು ಅತ್ಯಂತ ಪರಿಣಾಮಕಾರಿ ಎಂದು ಹೇಳಲಾಗಿದೆ. ತಮಿಳುನಾಡಿನ ಕೊರೊನಾ ಪೀಡಿತ ಪ್ರದೇಶಗಳಲ್ಲಿ ಇದೇ ಮಾದರಿಯ ಡ್ರೋಣ್ ಮೂಲಕ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ. ಅಣ್ಣಾ ವಿಶ್ವವಿದ್ಯಾನಿಲಯದ ಎಂ.ಐ.ಟಿ ವಿದ್ಯಾರ್ಥಿಗಳು ಈ ಡ್ರೋನ್ ತಯಾರಿಸಿದ್ದಾರೆ. 16 ಲೀಟರ್ ಸ್ಯಾನಿಟೈಸರ್ ತುಂಬಿಸಿಕೊಂಡು ಹಾರಾಡುವ ಸಾಮರ್ಥ್ಯ ಈ ಡ್ರೋನ್ ಗಿದ್ದು, ದೊಡ್ಡ ಕಟ್ಟಡಗಳನ್ನು ಈ ಡ್ರೋನ್ ಮೂಲಕ ಸಂಪೂರ್ಣ ಸ್ಯಾನಿಟೈಸ್ ಮಾಡಬಹುದಾಗಿದೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
10-09-26 10:27 am
HK News Staffer
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm