ಬ್ರೇಕಿಂಗ್ ನ್ಯೂಸ್
30-07-20 02:47 pm Mangalore Reporter ಕರಾವಳಿ
ಮಂಗಳೂರು, ಜುಲೈ 30: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ಉಪಾಯ ಕಂಡುಕೊಳ್ಳಲಾಗಿದೆ. ಸಾವಯವ ಸ್ಯಾನಿಟೈಸರ್ ಬಳಸಿ, ಸಾಮೂಹಿಕವಾಗಿ ಜನರ ಮೇಲೆ ಸಿಂಪಡಣೆಗೆ ಯೋಜನೆ ರೂಪಿಸಲಾಗಿದೆ.
ಸಾಮೂಹಿಕವಾಗಿ ಜನ ಸೇರುವ ಪ್ರದೇಶದಲ್ಲಿ ಸೋಂಕು ತಡೆಗಟ್ಟುವ ವಿಧಾನದ ಬಗ್ಗೆ ಗಂಭೀರ ಚರ್ಚೆಗಳು ನಡೆದಿರುವಾಗಲೇ ಈ ಸಮಸ್ಯೆಗೆ ಪರಿಹಾರ ಎಂಬಂತೆ ಚೆನ್ನೈ ಮೂಲದ ಸಂಸ್ಥೆಯೊಂದು ಧರ್ಮಸ್ಥಳದಲ್ಲಿ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಿಸುವ ವಿಧಾನದ ಪ್ರಾತ್ಯಕ್ಷಿಕೆ ನೀಡಿದೆ.
ಚೆನ್ನೈ ಮೂಲದ ಸುಗಾರಾಧನಾ ಎನ್ನುವ ತಂಡ ಸಾವಯವ ಸ್ಯಾನಿಟೈಸರ್ ಅನ್ನು ಡ್ರೋನ್ ಮೂಲಕ ಪರಿಸರದಲ್ಲಿ ಸಿಂಪಡಿಸುವ ಪ್ರಾತ್ಯಕ್ಷಿಕೆ ನೀಡಿದೆ. ಪ್ರತಿದಿನ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ಸಾವಿರಾರು ಭಕ್ತರು ಬರುತ್ತಾರೆ. ಇಂಥ ಪ್ರದೇಶದಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಸುತ್ತಮುತ್ತ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಿಸಲು ಯೋಜನೆ ರೂಪಿಸಲಾಗಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆ ಸ್ಯಾನಿಟೈಸರ್ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಸಂಪೂರ್ಣ ಸಾವಯವ ವಸ್ತುಗಳನ್ನು ಬಳಸಿಕೊಂಡು ಈ ಸ್ಯಾನಿಟೈಸರ್ ತಯಾರಿಸಲಾಗಿದ್ದು, ಕೊರೊನಾ ಸೋಂಕು ತಡೆಯುವಲ್ಲಿ ಇದು ಅತ್ಯಂತ ಪರಿಣಾಮಕಾರಿ ಎಂದು ಹೇಳಲಾಗಿದೆ. ತಮಿಳುನಾಡಿನ ಕೊರೊನಾ ಪೀಡಿತ ಪ್ರದೇಶಗಳಲ್ಲಿ ಇದೇ ಮಾದರಿಯ ಡ್ರೋಣ್ ಮೂಲಕ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ. ಅಣ್ಣಾ ವಿಶ್ವವಿದ್ಯಾನಿಲಯದ ಎಂ.ಐ.ಟಿ ವಿದ್ಯಾರ್ಥಿಗಳು ಈ ಡ್ರೋನ್ ತಯಾರಿಸಿದ್ದಾರೆ. 16 ಲೀಟರ್ ಸ್ಯಾನಿಟೈಸರ್ ತುಂಬಿಸಿಕೊಂಡು ಹಾರಾಡುವ ಸಾಮರ್ಥ್ಯ ಈ ಡ್ರೋನ್ ಗಿದ್ದು, ದೊಡ್ಡ ಕಟ್ಟಡಗಳನ್ನು ಈ ಡ್ರೋನ್ ಮೂಲಕ ಸಂಪೂರ್ಣ ಸ್ಯಾನಿಟೈಸ್ ಮಾಡಬಹುದಾಗಿದೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm