ಬ್ರೇಕಿಂಗ್ ನ್ಯೂಸ್
30-07-20 02:47 pm Mangalore Reporter ಕರಾವಳಿ
ಮಂಗಳೂರು, ಜುಲೈ 30: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ಉಪಾಯ ಕಂಡುಕೊಳ್ಳಲಾಗಿದೆ. ಸಾವಯವ ಸ್ಯಾನಿಟೈಸರ್ ಬಳಸಿ, ಸಾಮೂಹಿಕವಾಗಿ ಜನರ ಮೇಲೆ ಸಿಂಪಡಣೆಗೆ ಯೋಜನೆ ರೂಪಿಸಲಾಗಿದೆ.
ಸಾಮೂಹಿಕವಾಗಿ ಜನ ಸೇರುವ ಪ್ರದೇಶದಲ್ಲಿ ಸೋಂಕು ತಡೆಗಟ್ಟುವ ವಿಧಾನದ ಬಗ್ಗೆ ಗಂಭೀರ ಚರ್ಚೆಗಳು ನಡೆದಿರುವಾಗಲೇ ಈ ಸಮಸ್ಯೆಗೆ ಪರಿಹಾರ ಎಂಬಂತೆ ಚೆನ್ನೈ ಮೂಲದ ಸಂಸ್ಥೆಯೊಂದು ಧರ್ಮಸ್ಥಳದಲ್ಲಿ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಿಸುವ ವಿಧಾನದ ಪ್ರಾತ್ಯಕ್ಷಿಕೆ ನೀಡಿದೆ.
ಚೆನ್ನೈ ಮೂಲದ ಸುಗಾರಾಧನಾ ಎನ್ನುವ ತಂಡ ಸಾವಯವ ಸ್ಯಾನಿಟೈಸರ್ ಅನ್ನು ಡ್ರೋನ್ ಮೂಲಕ ಪರಿಸರದಲ್ಲಿ ಸಿಂಪಡಿಸುವ ಪ್ರಾತ್ಯಕ್ಷಿಕೆ ನೀಡಿದೆ. ಪ್ರತಿದಿನ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ಸಾವಿರಾರು ಭಕ್ತರು ಬರುತ್ತಾರೆ. ಇಂಥ ಪ್ರದೇಶದಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಸುತ್ತಮುತ್ತ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಿಸಲು ಯೋಜನೆ ರೂಪಿಸಲಾಗಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆ ಸ್ಯಾನಿಟೈಸರ್ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಸಂಪೂರ್ಣ ಸಾವಯವ ವಸ್ತುಗಳನ್ನು ಬಳಸಿಕೊಂಡು ಈ ಸ್ಯಾನಿಟೈಸರ್ ತಯಾರಿಸಲಾಗಿದ್ದು, ಕೊರೊನಾ ಸೋಂಕು ತಡೆಯುವಲ್ಲಿ ಇದು ಅತ್ಯಂತ ಪರಿಣಾಮಕಾರಿ ಎಂದು ಹೇಳಲಾಗಿದೆ. ತಮಿಳುನಾಡಿನ ಕೊರೊನಾ ಪೀಡಿತ ಪ್ರದೇಶಗಳಲ್ಲಿ ಇದೇ ಮಾದರಿಯ ಡ್ರೋಣ್ ಮೂಲಕ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ. ಅಣ್ಣಾ ವಿಶ್ವವಿದ್ಯಾನಿಲಯದ ಎಂ.ಐ.ಟಿ ವಿದ್ಯಾರ್ಥಿಗಳು ಈ ಡ್ರೋನ್ ತಯಾರಿಸಿದ್ದಾರೆ. 16 ಲೀಟರ್ ಸ್ಯಾನಿಟೈಸರ್ ತುಂಬಿಸಿಕೊಂಡು ಹಾರಾಡುವ ಸಾಮರ್ಥ್ಯ ಈ ಡ್ರೋನ್ ಗಿದ್ದು, ದೊಡ್ಡ ಕಟ್ಟಡಗಳನ್ನು ಈ ಡ್ರೋನ್ ಮೂಲಕ ಸಂಪೂರ್ಣ ಸ್ಯಾನಿಟೈಸ್ ಮಾಡಬಹುದಾಗಿದೆ.
22-05-26 10:45 am
HK News Staffer
ಸಾಕಾನೆಗಳ ಕಾದಾಟದಲ್ಲಿ ಸಿಲುಕಿ ಮಹಿಳೆ ಸಾವು ; ದುಬಾರ...
19-05-26 11:34 pm
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
22-05-26 11:53 am
HK News Staffer
ಜಾಲತಾಣದಲ್ಲಿ ಜೆನ್- ಜಿ ಬಿರುಗಾಳಿ ; ಸಿಜೆಐ ವಿರುದ್ಧ...
21-05-26 02:49 pm
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
21-05-26 05:52 pm
HK News Staffer
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
21-05-26 08:28 pm
HK News Staffer
ಕುಂಟಿಕಾನ; ಆವರಣ ಗೋಡೆ ಕುಸಿದು ಮಣ್ಣಿನಡಿಗೆ ಬಿದ್ದ ಸ...
21-05-26 07:33 pm
ಧರ್ಮಸ್ಥಳದ ಬುರುಡೆ ರಹಸ್ಯ ಪ್ರಕರಣ ಮತ್ತೆ ಚುರುಕು ;...
21-05-26 04:34 pm
ಎನ್ಐಎಸ್ಎಂ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾ...
21-05-26 01:34 pm
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am