ಬ್ರೇಕಿಂಗ್ ನ್ಯೂಸ್
30-07-20 02:47 pm Mangalore Reporter ಕರಾವಳಿ
ಮಂಗಳೂರು, ಜುಲೈ 30: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ಉಪಾಯ ಕಂಡುಕೊಳ್ಳಲಾಗಿದೆ. ಸಾವಯವ ಸ್ಯಾನಿಟೈಸರ್ ಬಳಸಿ, ಸಾಮೂಹಿಕವಾಗಿ ಜನರ ಮೇಲೆ ಸಿಂಪಡಣೆಗೆ ಯೋಜನೆ ರೂಪಿಸಲಾಗಿದೆ.
ಸಾಮೂಹಿಕವಾಗಿ ಜನ ಸೇರುವ ಪ್ರದೇಶದಲ್ಲಿ ಸೋಂಕು ತಡೆಗಟ್ಟುವ ವಿಧಾನದ ಬಗ್ಗೆ ಗಂಭೀರ ಚರ್ಚೆಗಳು ನಡೆದಿರುವಾಗಲೇ ಈ ಸಮಸ್ಯೆಗೆ ಪರಿಹಾರ ಎಂಬಂತೆ ಚೆನ್ನೈ ಮೂಲದ ಸಂಸ್ಥೆಯೊಂದು ಧರ್ಮಸ್ಥಳದಲ್ಲಿ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಿಸುವ ವಿಧಾನದ ಪ್ರಾತ್ಯಕ್ಷಿಕೆ ನೀಡಿದೆ.
ಚೆನ್ನೈ ಮೂಲದ ಸುಗಾರಾಧನಾ ಎನ್ನುವ ತಂಡ ಸಾವಯವ ಸ್ಯಾನಿಟೈಸರ್ ಅನ್ನು ಡ್ರೋನ್ ಮೂಲಕ ಪರಿಸರದಲ್ಲಿ ಸಿಂಪಡಿಸುವ ಪ್ರಾತ್ಯಕ್ಷಿಕೆ ನೀಡಿದೆ. ಪ್ರತಿದಿನ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ಸಾವಿರಾರು ಭಕ್ತರು ಬರುತ್ತಾರೆ. ಇಂಥ ಪ್ರದೇಶದಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಸುತ್ತಮುತ್ತ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಿಸಲು ಯೋಜನೆ ರೂಪಿಸಲಾಗಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆ ಸ್ಯಾನಿಟೈಸರ್ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಸಂಪೂರ್ಣ ಸಾವಯವ ವಸ್ತುಗಳನ್ನು ಬಳಸಿಕೊಂಡು ಈ ಸ್ಯಾನಿಟೈಸರ್ ತಯಾರಿಸಲಾಗಿದ್ದು, ಕೊರೊನಾ ಸೋಂಕು ತಡೆಯುವಲ್ಲಿ ಇದು ಅತ್ಯಂತ ಪರಿಣಾಮಕಾರಿ ಎಂದು ಹೇಳಲಾಗಿದೆ. ತಮಿಳುನಾಡಿನ ಕೊರೊನಾ ಪೀಡಿತ ಪ್ರದೇಶಗಳಲ್ಲಿ ಇದೇ ಮಾದರಿಯ ಡ್ರೋಣ್ ಮೂಲಕ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ. ಅಣ್ಣಾ ವಿಶ್ವವಿದ್ಯಾನಿಲಯದ ಎಂ.ಐ.ಟಿ ವಿದ್ಯಾರ್ಥಿಗಳು ಈ ಡ್ರೋನ್ ತಯಾರಿಸಿದ್ದಾರೆ. 16 ಲೀಟರ್ ಸ್ಯಾನಿಟೈಸರ್ ತುಂಬಿಸಿಕೊಂಡು ಹಾರಾಡುವ ಸಾಮರ್ಥ್ಯ ಈ ಡ್ರೋನ್ ಗಿದ್ದು, ದೊಡ್ಡ ಕಟ್ಟಡಗಳನ್ನು ಈ ಡ್ರೋನ್ ಮೂಲಕ ಸಂಪೂರ್ಣ ಸ್ಯಾನಿಟೈಸ್ ಮಾಡಬಹುದಾಗಿದೆ.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm