ಬ್ರೇಕಿಂಗ್ ನ್ಯೂಸ್
30-07-20 02:47 pm Mangalore Reporter ಕರಾವಳಿ
ಮಂಗಳೂರು, ಜುಲೈ 30: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ಉಪಾಯ ಕಂಡುಕೊಳ್ಳಲಾಗಿದೆ. ಸಾವಯವ ಸ್ಯಾನಿಟೈಸರ್ ಬಳಸಿ, ಸಾಮೂಹಿಕವಾಗಿ ಜನರ ಮೇಲೆ ಸಿಂಪಡಣೆಗೆ ಯೋಜನೆ ರೂಪಿಸಲಾಗಿದೆ.
ಸಾಮೂಹಿಕವಾಗಿ ಜನ ಸೇರುವ ಪ್ರದೇಶದಲ್ಲಿ ಸೋಂಕು ತಡೆಗಟ್ಟುವ ವಿಧಾನದ ಬಗ್ಗೆ ಗಂಭೀರ ಚರ್ಚೆಗಳು ನಡೆದಿರುವಾಗಲೇ ಈ ಸಮಸ್ಯೆಗೆ ಪರಿಹಾರ ಎಂಬಂತೆ ಚೆನ್ನೈ ಮೂಲದ ಸಂಸ್ಥೆಯೊಂದು ಧರ್ಮಸ್ಥಳದಲ್ಲಿ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಿಸುವ ವಿಧಾನದ ಪ್ರಾತ್ಯಕ್ಷಿಕೆ ನೀಡಿದೆ.
ಚೆನ್ನೈ ಮೂಲದ ಸುಗಾರಾಧನಾ ಎನ್ನುವ ತಂಡ ಸಾವಯವ ಸ್ಯಾನಿಟೈಸರ್ ಅನ್ನು ಡ್ರೋನ್ ಮೂಲಕ ಪರಿಸರದಲ್ಲಿ ಸಿಂಪಡಿಸುವ ಪ್ರಾತ್ಯಕ್ಷಿಕೆ ನೀಡಿದೆ. ಪ್ರತಿದಿನ ರಾಜ್ಯದ ವಿವಿಧ ಭಾಗಗಳಿಂದ ಧರ್ಮಸ್ಥಳಕ್ಕೆ ಸಾವಿರಾರು ಭಕ್ತರು ಬರುತ್ತಾರೆ. ಇಂಥ ಪ್ರದೇಶದಲ್ಲಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಸುತ್ತಮುತ್ತ ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಿಸಲು ಯೋಜನೆ ರೂಪಿಸಲಾಗಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆ ಸ್ಯಾನಿಟೈಸರ್ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ಸಂಪೂರ್ಣ ಸಾವಯವ ವಸ್ತುಗಳನ್ನು ಬಳಸಿಕೊಂಡು ಈ ಸ್ಯಾನಿಟೈಸರ್ ತಯಾರಿಸಲಾಗಿದ್ದು, ಕೊರೊನಾ ಸೋಂಕು ತಡೆಯುವಲ್ಲಿ ಇದು ಅತ್ಯಂತ ಪರಿಣಾಮಕಾರಿ ಎಂದು ಹೇಳಲಾಗಿದೆ. ತಮಿಳುನಾಡಿನ ಕೊರೊನಾ ಪೀಡಿತ ಪ್ರದೇಶಗಳಲ್ಲಿ ಇದೇ ಮಾದರಿಯ ಡ್ರೋಣ್ ಮೂಲಕ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ. ಅಣ್ಣಾ ವಿಶ್ವವಿದ್ಯಾನಿಲಯದ ಎಂ.ಐ.ಟಿ ವಿದ್ಯಾರ್ಥಿಗಳು ಈ ಡ್ರೋನ್ ತಯಾರಿಸಿದ್ದಾರೆ. 16 ಲೀಟರ್ ಸ್ಯಾನಿಟೈಸರ್ ತುಂಬಿಸಿಕೊಂಡು ಹಾರಾಡುವ ಸಾಮರ್ಥ್ಯ ಈ ಡ್ರೋನ್ ಗಿದ್ದು, ದೊಡ್ಡ ಕಟ್ಟಡಗಳನ್ನು ಈ ಡ್ರೋನ್ ಮೂಲಕ ಸಂಪೂರ್ಣ ಸ್ಯಾನಿಟೈಸ್ ಮಾಡಬಹುದಾಗಿದೆ.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm