ಬ್ರೇಕಿಂಗ್ ನ್ಯೂಸ್
17-12-22 11:08 pm Mangalore Correspondent ಕರಾವಳಿ
ಮಂಗಳೂರು, ಡಿ.17 : ವಿದ್ಯಾರ್ಥಿ ವೇತನ, ಪದವಿ ಫಲಿತಾಂಶ ಪ್ರಕಟ ಹಾಗೂ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ಎನ್.ಎಸ್. ಯು.ಐ. ರಾಜ್ಯ ಮಟ್ಟದಲ್ಲಿ ಕಾಲೇಜು ಬಂದ್ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ದ.ಕ. ಜಿಲ್ಲಾ ಎನ್.ಎಸ್.ಯು.ಐ. ಅಧ್ಯಕ್ಷ ಸವಾದ್ ಸುಳ್ಯ, ಪದವಿ ಪರೀಕ್ಷೆ ಮುಗಿದು ಆರೇಳು ತಿಂಗಳು ಕಳೆದರೂ ಮಂಗಳೂರು ವಿವಿಯಲ್ಲಿ ಫಲಿತಾಂಶ ಪ್ರಕಟವಾಗಿಲ್ಲ. ಇದರಿಂದಾಗಿ ಮುಂದಿನ ಸೆಮಿಸ್ಟರ್ ಕಲಿಕೆಗೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಸರಕಾರ ಘೋಷಿಸಿರುವ ಉಚಿತ ಬಸ್ ಪಾಸ್ ಇನ್ನೂ ಜಾರಿಯಾಗಿಲ್ಲ. ಈಗ ಅವೈಜ್ಞಾನಿಕವಾಗಿ ಎನ್ಇಪಿ ನೀತಿಯನ್ನು ಜಾರಿಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಮಂಗಳೂರು ವಿ.ವಿ. ಒಂದು ವರ್ಷದಿಂದ ಫಲಿತಾಂಶ ಪ್ರಕಟಿಸಿಲ್ಲ. ಉನ್ನತ ವ್ಯಾಸಂಗಕ್ಕೆ ಹೋಗುವವರಿಗೆ ಇದರಿಂದ ಸಮಸ್ಯೆಯಾಗಿದೆ. ಗೊಂದಲ ಬಗೆಹರಿಯುವ ಮುನ್ನವೇ ಎನ್ಇಪಿ ಜಾರಿಯಾಗುತ್ತಿದೆ ಎಂದು ಹೇಳಿದರು.
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು. ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಬೇಕು. ಸಮರ್ಪಕ ವಾಗಿ “ಅರಿವು ಸಾಲ’ ಕಲ್ಪಿಸಬೇಕು. ಕೇಂದ್ರ ಸರಕಾರ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಿದೆ. ಹಲವು ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನವನ್ನೇ ನಂಬಿ ವಿದ್ಯಾರ್ಜನೆ ಮಾಡುತ್ತಾರೆ. ತತ್ಕ್ಷಣ ವಿದ್ಯಾರ್ಥಿ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿ, ಬಳಿಕ ಬಿಡುಗಡೆಗೊಳಿಸಿದರು. ಎನ್.ಎಸ್.ಯು.ಐ. ಮುಖಂಡರಾದ ಸುಹಾನ್ ಆಳ್ವ, ಶ್ವಾನ್ ಸಿರಿ, ಸಫಾನ್ ಕುದ್ರೋಳಿ, ಸಿರಾಜ್ ಗುದ್ರು, ಓಂಶ್ರೀ, ಸಾಹಿಲ್, ನಿಖೀಲ್ ಶೆಟ್ಟಿ, ಅಝೀಮ್, ಅಹಾ°ಫ್, ಪ್ರಜ್ವಲ್, ಆತೂಫ್ ಇದ್ದರು.
NSUI activist statewide protest against negligence of degree student result in Mangalore.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm