ಅಪ್ತಾಪ್ತ ಬಾಲಕಿಗೆ ಚುಡಾವಣೆ ; ಮುಲ್ಕಿಯಲ್ಲಿ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿತ, ಹಲ್ಲೆ 

18-12-22 11:00 am       Mangalore Correspondent   ಕರಾವಳಿ

ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಚುಡಾಯಿಸಿದ ಕಾರಣಕ್ಕೆ ಯುವಕನನ್ನು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಘಟನೆ ಮುಲ್ಕಿ ಬಳಿಯ ಕೆರೆಕಾಡಿನಲ್ಲಿ ನಡೆದಿದೆ. 

ಮಂಗಳೂರು, ಡಿ.18 : ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಚುಡಾಯಿಸಿದ ಕಾರಣಕ್ಕೆ ಯುವಕನನ್ನು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಘಟನೆ ಮುಲ್ಕಿ ಬಳಿಯ ಕೆರೆಕಾಡಿನಲ್ಲಿ ನಡೆದಿದೆ. 

ದಾವೂದ್ ಎಂಬ ಯುವಕ ಬಾಲಕಿಯನ್ನು ಬೈಕ್ ನಲ್ಲಿ ಹಿಂಬಾಲಿಸುತ್ತಾ ಬಂದು ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಡಿ.13ರಂದು ದುರ್ವರ್ತನೆ ತೋರಿದ್ದ ಬಗ್ಗೆ ಮಾಹಿತಿ ತಿಳಿದಿದ್ದ ಬಾಲಕಿಯ ತಂದೆ ಮತ್ತು ಅವರ ಸ್ನೇಹಿತರು ಡಿ.17ರಂದು ಗಮನಿಸಿದ್ದಾರೆ. ಮತ್ತೆ ಬೈಕಿನಲ್ಲಿ ಬಂದಿದ್ದ ಯುವಕನನ್ನು ಹಿಡಿದು ಥಳಿಸಿದ್ದಾರೆ. ‌ಬಳಿಕ ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ‌

ಈ ವೇಳೆ, ಯುವಕನ ಕಡೆಯವರಿಗೂ, ಬಾಲಕಿ ಹೆತ್ತವರ ಕಡೆಗೂ ಜಟಾಪಟಿ ಆಗಿದೆ. ಜನರು ಸೇರಿ ಹಲ್ಲೆ ನಡೆಸುವುದನ್ನು ತಡೆದಿದ್ದಾರೆ. ಬಳಿಕ ಮುಲ್ಕಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ, ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ದಾವೂದ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಹಲ್ಲೆ ನಡೆಸಿದ ಗುಂಪಿನ ವಿರುದ್ಧವೂ ಕೇಸು ದಾಖಲಾಗಿದೆ.

A man in his 30’s was tied up and thrashed by the public for stalking and misbehaving with a minor girl at Kerekadu village of Mulki, as per police reports. It is learnt that the young man had followed the girl on his motorbike on 13 December 13 and misbehaved with her- and when the girl’s father, along with two of his friends came to know about the behaviour of the man, they wanted to teach him a lesson.