'ಸ್ಮಾರ್ಟ್ ಸಿಟಿ'ಯಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದ ಮಹಿಳೆ ; ಯಾರ ಬಲಿಗಾಗಿ ಇಟ್ಟಿದ್ದಾರೆ ಕೇಬಲ್ ಗುಂಡಿ ? 

19-12-22 10:55 pm       Mangalore Correspondent   ಕರಾವಳಿ

ನಗರದ ಜ್ಯೋತಿ ವೃತ್ತದ ಸೋಜಾ ಆರ್ಕೇಡ್ ಬಳಿ ರಸ್ತೆ ಬದಿಯಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಮಂಗಳೂರು, ಡಿ.19: ನಗರದ ಜ್ಯೋತಿ ವೃತ್ತದ ಸೋಜಾ ಆರ್ಕೇಡ್ ಬಳಿ ರಸ್ತೆ ಬದಿಯಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ಜ್ಯೋತಿ ಕೆಎಂಸಿ ಆಸ್ಪತ್ರೆ ಕಡೆಯಿಂದ ಮಿಲಾಗ್ರಿಸ್ ಕಡೆಗೆ ನಡೆದು ಹೋಗುತ್ತಿದ್ದ ಸುಮಾರು 55 ವರ್ಷದ ಕ್ರಿಸ್ತಿಯನ್ ಮಹಿಳೆಯೊಬ್ಬರು ರಸ್ತೆ ಬದಿಯಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದಿದ್ದಾರೆ. ಸುಮಾರು ಏಳು ಅಡಿ ಆಳದ ಗುಂಡಿಗೆ ಬಿದ್ದ ಮಹಿಳೆಯನ್ನು ಬಳಿಕ ಸ್ಥಳೀಯರು ಕಷ್ಟಪಟ್ಟು ಹೊರಗೆ ತೆಗೆದಿದ್ದಾರೆ.

ಕೇಬಲ್ ಕಾಮಗಾರಿ ನೆಪದಲ್ಲಿ ಸೋಜಾ ಆರ್ಕೇಡ್ ಎದುರಲ್ಲಿ ಒಂದು ತಿಂಗಳಿನಿಂದ ರಸ್ತೆ ಬದಿ ಗುಂಡಿ ತೆಗೆಯಲಾಗಿದೆ. ಅದನ್ನು ಮುಚ್ಚದೆ ಹಾಗೇ ಬಿಡಲಾಗಿದ್ದು, ಪಾದಚಾರಿಗಳು ನಡೆದು ಹೋಗುವುದಕ್ಕೆ ಕಷ್ಟ ಪಡುತ್ತಿದ್ದಾರೆ. ಮಹಿಳೆ ಕವುಚಿಕೊಂಡು ಬಿದ್ದಿದ್ದು, ತಲೆಯ ಭಾಗ ಗುಂಡಿಯ ಒಳಗೆ ಬಿದ್ದಿತ್ತು. ಬೆನ್ನು ಮತ್ತು ಕುತ್ತಿಗೆಯ ಭಾಗಕ್ಕೆ ಗಾಯಗೊಂಡಿದ್ದು, ಜೊತೆಗಿದ್ದ ಗಂಡ ಬಳಿಕ ಅವರನ್ನು ಎತ್ತಿಕೊಂಡು ಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಜ್ಯೋತಿ ವೃತ್ತದಿಂದ ಮಿಲಾಗ್ರಿಸ್ ಹೋಗುವಲ್ಲಿ ಎರಡೂ ಬದಿ ಅಗೆದು ಹಾಕಲಾಗಿದ್ದು, ಸ್ಮಾರ್ಟ್ ಸಿಟಿ ಕಾಮಗಾರಿ ಹೆಸರಲ್ಲಿ ಬ್ಲಂಡರ್ ಮಾಡಲಾಗಿದೆ. ಇದರಿಂದಾಗಿ ರಸ್ತೆ ಬದಿಯಿಂದ ನಡೆದು ಹೋಗುವುದಕ್ಕೂ ಸಾಧ್ಯವಾಗದ ಸ್ಥಿತಿಯಿದೆ ಎಂದು ಸ್ಥಳದಲ್ಲಿದ್ದ ತಾರನಾಥ್ ಎಂಬವರು ತಿಳಿಸಿದ್ದಾರೆ.

An elderly lady was injured after she fell into a gutter near Jyothi's Ambedkar Circle on Monday, December 19 morning.The locals gathered in huge numbers and rescued the elderly lady who also suffered injuries in the fall. The gutter was opened for cabling purposes more than a month ago near Jyothi Laxmidas Jewellery and the authorities have not bothered to close it. The local public helped the woman out of the gutter.