ಬ್ರೇಕಿಂಗ್ ನ್ಯೂಸ್
21-12-22 11:42 am Mangalore Correspondent ಕರಾವಳಿ
ಉಳ್ಳಾಲ, ಡಿ.21: 13 ಅಂತಸ್ತಿನ ಅಪಾರ್ಟ್ ಮೆಂಟ್ ಒಂದರ ಫ್ಲ್ಯಾಟ್ ನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿನಿಯರು ಬಿಸಿ ಇಸ್ತ್ರಿ ಪೆಟ್ಟಿಗೆಯನ್ನ ಹಾಸಿಗೆ ಮೇಲಿಟ್ಟು ತೆರಳಿದ್ದರಿಂದ ಹಾಸಿಗೆಗೆ ಬೆಂಕಿ ಹರಡಿದ್ದು ಅಪಾರ್ಟ್ ಮೆಂಟ್ ಮ್ಯಾನೇಜರ್ ಸಮಯ ಪ್ರಜ್ಞೆಯಿಂದ ಅಗ್ನಿ ಅನಾಹುತ ತಪ್ಪಿದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.
ದೇರಳಕಟ್ಟೆಯ ಕ್ಷೇಮ ಆಸ್ಪತ್ರೆ ಬಳಿಯಿರುವ ಪ್ಲಾಮಾ ನೆಸ್ಟ್ ಅಪಾರ್ಟ್ ಮೆಂಟಿನ ಫ್ಲ್ಯಾಟ್ ಸಂಖ್ಯೆ 202 ರಲ್ಲಿ ಅಗ್ನಿ ಅನಾಹುತ ನಡೆದಿದೆ. ಫ್ಲ್ಯಾಟ್ ನಲ್ಲಿ ತಂಗಿದ್ದ ದಂತ ವೈದ್ಯಕೀಯ ಕಲಿಯುವ ಇಬ್ಬರು ವಿದ್ಯಾರ್ಥಿನಿಯರು ನಿನ್ನೆ ಬೆಳಗ್ಗೆ ಕಾಲೇಜಿನಲ್ಲಿ ಕಾರ್ಯಾಗಾರ ಇದೆಯೆಂದು ಎಂದಿಗಿಂತ ಬೇಗನೆ ತೆರಳಿದ್ದರು. ಕಾಲೇಜಿಗೆ ತೆರಳುವ ತರಾತುರಿಯಲ್ಲಿ ವಿದ್ಯಾರ್ಥಿನಿಯರು ಬಟ್ಟೆಗಳಿಗೆ ಇಸ್ತ್ರಿ ಹಾಕಿ ಸ್ವಿಚ್ ಆಫ್ ಮಾಡದೆ, ಬಿಸಿ ಇಸ್ತ್ರಿ ಪೆಟ್ಟಿಗೆಯನ್ನ ಹಾಸಿಗೆ ಮೇಲಿಟ್ಟು ತೆರಳಿದ್ದಾರೆ.
ಬೆಳಗ್ಗಿನಿಂದ ಅಪಾರ್ಟ್ ಮೆಂಟ್ ನಿಂದ ಹೊಗೆಯ ವಾಸನೆ ಬರುತ್ತಿರುವುದನ್ನ ಅಲ್ಲಿನ ಮ್ಯಾನೇಜರ್ ಆಗಿರುವ ಕುತ್ತಾರು ನಿವಾಸಿ ಮಹಮ್ಮದ್ ಶಾಹಿದ್ ಶಫೀಕ್ ಗ್ರಹಿಸಿ ಕಟ್ಟಡದಲ್ಲಿ ಶೋಧ ನಡೆಸಿದ್ದಾರೆ.


ಕೆಲ ಹೊತ್ತಿನ ನಂತರ 202 ಫ್ಲ್ಯಾಟ್ ಒಳಗಿಂದ ಹೊಗೆ ಬರುತ್ತಿರುವುದು ತಿಳಿದಿದೆ. ತಕ್ಷಣ ವಿದ್ಯಾರ್ಥಿನಿಯರನ್ನ ಸ್ಥಳಕ್ಕೆ ಕರೆಸಿ ಬೀಗ ತೆರೆದು ಒಳ ನುಗ್ಗಿದಾಗ ಹಾಸಿಗೆ ಹೊತ್ತಿ ಉರಿಯುತ್ತಿರುವುದನ್ನ ಕಂಡಿದ್ದಾರೆ. ಶಫೀಕ್ ಅವರು ವಾಚ್ಮೆನ್ ಲೋಕೇಶ್ ಸಹಕಾರದಿಂದ ಫ್ಲ್ಯಾಟ್ ಬಾಲ್ಕನಿಯಿಂದ ಬೆಂಕಿ ಆವರಿಸಿದ್ದ ಹಾಸಿಗೆಯನ್ನ ಕಟ್ಟಡದ ಕೆಳಕ್ಕೆ ಎಸೆದಿದ್ದಾರೆ. ಶಫೀಕ್ ಅವರ ಸಮಯ ಪ್ರಜ್ಞೆಯಿಂದ ಕಟ್ಟಡದಲ್ಲಿದ್ದ 100ಕ್ಕೂ ಹೆಚ್ಚು ನಿವಾಸಿಗಳು ಅಪಾಯದಿಂದ ಪಾರಾಗಿದ್ದಾರೆ.
Mangalore Apartment in Derlakatte catches fire after students leave the iron plugged on. A big incident has been averted after the timely presence of Flat Manager.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm