ಬ್ರೇಕಿಂಗ್ ನ್ಯೂಸ್
21-12-22 11:42 am Mangalore Correspondent ಕರಾವಳಿ
ಉಳ್ಳಾಲ, ಡಿ.21: 13 ಅಂತಸ್ತಿನ ಅಪಾರ್ಟ್ ಮೆಂಟ್ ಒಂದರ ಫ್ಲ್ಯಾಟ್ ನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿನಿಯರು ಬಿಸಿ ಇಸ್ತ್ರಿ ಪೆಟ್ಟಿಗೆಯನ್ನ ಹಾಸಿಗೆ ಮೇಲಿಟ್ಟು ತೆರಳಿದ್ದರಿಂದ ಹಾಸಿಗೆಗೆ ಬೆಂಕಿ ಹರಡಿದ್ದು ಅಪಾರ್ಟ್ ಮೆಂಟ್ ಮ್ಯಾನೇಜರ್ ಸಮಯ ಪ್ರಜ್ಞೆಯಿಂದ ಅಗ್ನಿ ಅನಾಹುತ ತಪ್ಪಿದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.
ದೇರಳಕಟ್ಟೆಯ ಕ್ಷೇಮ ಆಸ್ಪತ್ರೆ ಬಳಿಯಿರುವ ಪ್ಲಾಮಾ ನೆಸ್ಟ್ ಅಪಾರ್ಟ್ ಮೆಂಟಿನ ಫ್ಲ್ಯಾಟ್ ಸಂಖ್ಯೆ 202 ರಲ್ಲಿ ಅಗ್ನಿ ಅನಾಹುತ ನಡೆದಿದೆ. ಫ್ಲ್ಯಾಟ್ ನಲ್ಲಿ ತಂಗಿದ್ದ ದಂತ ವೈದ್ಯಕೀಯ ಕಲಿಯುವ ಇಬ್ಬರು ವಿದ್ಯಾರ್ಥಿನಿಯರು ನಿನ್ನೆ ಬೆಳಗ್ಗೆ ಕಾಲೇಜಿನಲ್ಲಿ ಕಾರ್ಯಾಗಾರ ಇದೆಯೆಂದು ಎಂದಿಗಿಂತ ಬೇಗನೆ ತೆರಳಿದ್ದರು. ಕಾಲೇಜಿಗೆ ತೆರಳುವ ತರಾತುರಿಯಲ್ಲಿ ವಿದ್ಯಾರ್ಥಿನಿಯರು ಬಟ್ಟೆಗಳಿಗೆ ಇಸ್ತ್ರಿ ಹಾಕಿ ಸ್ವಿಚ್ ಆಫ್ ಮಾಡದೆ, ಬಿಸಿ ಇಸ್ತ್ರಿ ಪೆಟ್ಟಿಗೆಯನ್ನ ಹಾಸಿಗೆ ಮೇಲಿಟ್ಟು ತೆರಳಿದ್ದಾರೆ.
ಬೆಳಗ್ಗಿನಿಂದ ಅಪಾರ್ಟ್ ಮೆಂಟ್ ನಿಂದ ಹೊಗೆಯ ವಾಸನೆ ಬರುತ್ತಿರುವುದನ್ನ ಅಲ್ಲಿನ ಮ್ಯಾನೇಜರ್ ಆಗಿರುವ ಕುತ್ತಾರು ನಿವಾಸಿ ಮಹಮ್ಮದ್ ಶಾಹಿದ್ ಶಫೀಕ್ ಗ್ರಹಿಸಿ ಕಟ್ಟಡದಲ್ಲಿ ಶೋಧ ನಡೆಸಿದ್ದಾರೆ.
ಕೆಲ ಹೊತ್ತಿನ ನಂತರ 202 ಫ್ಲ್ಯಾಟ್ ಒಳಗಿಂದ ಹೊಗೆ ಬರುತ್ತಿರುವುದು ತಿಳಿದಿದೆ. ತಕ್ಷಣ ವಿದ್ಯಾರ್ಥಿನಿಯರನ್ನ ಸ್ಥಳಕ್ಕೆ ಕರೆಸಿ ಬೀಗ ತೆರೆದು ಒಳ ನುಗ್ಗಿದಾಗ ಹಾಸಿಗೆ ಹೊತ್ತಿ ಉರಿಯುತ್ತಿರುವುದನ್ನ ಕಂಡಿದ್ದಾರೆ. ಶಫೀಕ್ ಅವರು ವಾಚ್ಮೆನ್ ಲೋಕೇಶ್ ಸಹಕಾರದಿಂದ ಫ್ಲ್ಯಾಟ್ ಬಾಲ್ಕನಿಯಿಂದ ಬೆಂಕಿ ಆವರಿಸಿದ್ದ ಹಾಸಿಗೆಯನ್ನ ಕಟ್ಟಡದ ಕೆಳಕ್ಕೆ ಎಸೆದಿದ್ದಾರೆ. ಶಫೀಕ್ ಅವರ ಸಮಯ ಪ್ರಜ್ಞೆಯಿಂದ ಕಟ್ಟಡದಲ್ಲಿದ್ದ 100ಕ್ಕೂ ಹೆಚ್ಚು ನಿವಾಸಿಗಳು ಅಪಾಯದಿಂದ ಪಾರಾಗಿದ್ದಾರೆ.
Mangalore Apartment in Derlakatte catches fire after students leave the iron plugged on. A big incident has been averted after the timely presence of Flat Manager.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm