ಬ್ರೇಕಿಂಗ್ ನ್ಯೂಸ್
21-12-22 11:42 am Mangalore Correspondent ಕರಾವಳಿ
ಉಳ್ಳಾಲ, ಡಿ.21: 13 ಅಂತಸ್ತಿನ ಅಪಾರ್ಟ್ ಮೆಂಟ್ ಒಂದರ ಫ್ಲ್ಯಾಟ್ ನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿನಿಯರು ಬಿಸಿ ಇಸ್ತ್ರಿ ಪೆಟ್ಟಿಗೆಯನ್ನ ಹಾಸಿಗೆ ಮೇಲಿಟ್ಟು ತೆರಳಿದ್ದರಿಂದ ಹಾಸಿಗೆಗೆ ಬೆಂಕಿ ಹರಡಿದ್ದು ಅಪಾರ್ಟ್ ಮೆಂಟ್ ಮ್ಯಾನೇಜರ್ ಸಮಯ ಪ್ರಜ್ಞೆಯಿಂದ ಅಗ್ನಿ ಅನಾಹುತ ತಪ್ಪಿದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.
ದೇರಳಕಟ್ಟೆಯ ಕ್ಷೇಮ ಆಸ್ಪತ್ರೆ ಬಳಿಯಿರುವ ಪ್ಲಾಮಾ ನೆಸ್ಟ್ ಅಪಾರ್ಟ್ ಮೆಂಟಿನ ಫ್ಲ್ಯಾಟ್ ಸಂಖ್ಯೆ 202 ರಲ್ಲಿ ಅಗ್ನಿ ಅನಾಹುತ ನಡೆದಿದೆ. ಫ್ಲ್ಯಾಟ್ ನಲ್ಲಿ ತಂಗಿದ್ದ ದಂತ ವೈದ್ಯಕೀಯ ಕಲಿಯುವ ಇಬ್ಬರು ವಿದ್ಯಾರ್ಥಿನಿಯರು ನಿನ್ನೆ ಬೆಳಗ್ಗೆ ಕಾಲೇಜಿನಲ್ಲಿ ಕಾರ್ಯಾಗಾರ ಇದೆಯೆಂದು ಎಂದಿಗಿಂತ ಬೇಗನೆ ತೆರಳಿದ್ದರು. ಕಾಲೇಜಿಗೆ ತೆರಳುವ ತರಾತುರಿಯಲ್ಲಿ ವಿದ್ಯಾರ್ಥಿನಿಯರು ಬಟ್ಟೆಗಳಿಗೆ ಇಸ್ತ್ರಿ ಹಾಕಿ ಸ್ವಿಚ್ ಆಫ್ ಮಾಡದೆ, ಬಿಸಿ ಇಸ್ತ್ರಿ ಪೆಟ್ಟಿಗೆಯನ್ನ ಹಾಸಿಗೆ ಮೇಲಿಟ್ಟು ತೆರಳಿದ್ದಾರೆ.
ಬೆಳಗ್ಗಿನಿಂದ ಅಪಾರ್ಟ್ ಮೆಂಟ್ ನಿಂದ ಹೊಗೆಯ ವಾಸನೆ ಬರುತ್ತಿರುವುದನ್ನ ಅಲ್ಲಿನ ಮ್ಯಾನೇಜರ್ ಆಗಿರುವ ಕುತ್ತಾರು ನಿವಾಸಿ ಮಹಮ್ಮದ್ ಶಾಹಿದ್ ಶಫೀಕ್ ಗ್ರಹಿಸಿ ಕಟ್ಟಡದಲ್ಲಿ ಶೋಧ ನಡೆಸಿದ್ದಾರೆ.


ಕೆಲ ಹೊತ್ತಿನ ನಂತರ 202 ಫ್ಲ್ಯಾಟ್ ಒಳಗಿಂದ ಹೊಗೆ ಬರುತ್ತಿರುವುದು ತಿಳಿದಿದೆ. ತಕ್ಷಣ ವಿದ್ಯಾರ್ಥಿನಿಯರನ್ನ ಸ್ಥಳಕ್ಕೆ ಕರೆಸಿ ಬೀಗ ತೆರೆದು ಒಳ ನುಗ್ಗಿದಾಗ ಹಾಸಿಗೆ ಹೊತ್ತಿ ಉರಿಯುತ್ತಿರುವುದನ್ನ ಕಂಡಿದ್ದಾರೆ. ಶಫೀಕ್ ಅವರು ವಾಚ್ಮೆನ್ ಲೋಕೇಶ್ ಸಹಕಾರದಿಂದ ಫ್ಲ್ಯಾಟ್ ಬಾಲ್ಕನಿಯಿಂದ ಬೆಂಕಿ ಆವರಿಸಿದ್ದ ಹಾಸಿಗೆಯನ್ನ ಕಟ್ಟಡದ ಕೆಳಕ್ಕೆ ಎಸೆದಿದ್ದಾರೆ. ಶಫೀಕ್ ಅವರ ಸಮಯ ಪ್ರಜ್ಞೆಯಿಂದ ಕಟ್ಟಡದಲ್ಲಿದ್ದ 100ಕ್ಕೂ ಹೆಚ್ಚು ನಿವಾಸಿಗಳು ಅಪಾಯದಿಂದ ಪಾರಾಗಿದ್ದಾರೆ.
Mangalore Apartment in Derlakatte catches fire after students leave the iron plugged on. A big incident has been averted after the timely presence of Flat Manager.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 05:39 pm
HK News Staffer
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm