ಬ್ರೇಕಿಂಗ್ ನ್ಯೂಸ್
15-10-20 10:36 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 15: ಖ್ಯಾತ ತುಳು ರಂಗಭೂಮಿ ಕಲಾವಿದ, ನಿರ್ದೇಶಕ ಮಾಧವ ಜಪ್ಪುಪಟ್ನ (64) ಅಲ್ಪಕಾಲದ ಅಸೌಖ್ಯದ ಬಳಿಕ ನಿಧನರಾಗಿದ್ದಾರೆ.
ಆರೋಗ್ಯದಲ್ಲಿ ಸದೃಢರಾಗಿದ್ದ ಮಾಧವರಿಗೆ ಎರಡು ವಾರಗಳ ಹಿಂದೆ ಜ್ವರ ಬಂದಿತ್ತು. ಜ್ವರದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ಆಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ಅವರು ಇಬ್ಬರು ಪುತ್ರರು, ಪತ್ನಿ ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
40ಕ್ಕೂ ಹೆಚ್ಚು ನಾಟಕ ಕೃತಿಗಳನ್ನು ಬರೆದಿದ್ದ ಮಾಧವ ಜಪ್ಪುಪಟ್ನ ಅಭಿನಯದ ಜೊತೆಗೆ ನಿರ್ದೇಶನ, ಗಾಯನವನ್ನು ಮಾಡುತ್ತಿದ್ದರು. 90ರ ದಶಕದಲ್ಲಿ ಅಸಂಖ್ಯಾತ ಹೊಸ ಕಲಾವಿದರಿಗೆ ತಮ್ಮ ನಾಟಕದಲ್ಲಿ ಅವಕಾಶ ನೀಡಿ, ರಂಗಭೂಮಿಗೆ ಪರಿಚಯ ಮಾಡಿದ್ದರು. ಅವರು ಬರೆದು, ನಿರ್ದೇಶಿಸಿದ 'ಬಂಗಾರ್ ಕಂಡನಿ' ಎನ್ನುವ ನಾಟಕ 150ಕ್ಕೂ ಹೆಚ್ಚು ಪ್ರದರ್ಶನ ಕಂಡಿತ್ತು. 'ಈ ಬಲ್ಲ್ ಯಾವ' ಎನ್ನುವ ನಾಟಕ ಅವರಿಗೆ ಜನಪ್ರಿಯತೆ ತಂದುಕೊಟ್ಟಿತ್ತು. ನಾಟಕದಲ್ಲಿ ಹಾಸ್ಯ ಕಲಾವಿದರಾಗಿ ಜನಮನ್ನಣೆ ಗಳಿಸಿದ್ದರು. ಇತ್ತೀಚೆಗೆ ತುಳು ಸಿನಿಮಾದಲ್ಲೂ ಅಭಿನಯಿಸಿದ್ದ ಮಾಧವ ಅವರು, ಬಂಗಾರ್ ಪಟ್ಲೇರ್ ಚಿತ್ರದಲ್ಲೂ ಅಭಿನಯಿಸಿದ್ದರು.
ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಮೊಕ್ತೇಸರರಾಗಿದ್ದ ಮಾಧವ ಜೆಪ್ಪುಪಟ್ನ, ಶ್ರೀ ಭಗವತೀ ತೀಯಾ ಸೇವಾ ಸಂಘ, ನವನಿಧಿ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ರಾಜ್ಯ ಪ್ರಶಸ್ತಿ ಒಳಗೊಂಡಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದರು.
Mangalore Renowned Tulu artist Jeepu Patna passes away at 64 after being tested corona positive. Jeepu Patna was a singer, author and a great artist in the Tulu drama industry.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm