ಬ್ರೇಕಿಂಗ್ ನ್ಯೂಸ್
15-10-20 10:36 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 15: ಖ್ಯಾತ ತುಳು ರಂಗಭೂಮಿ ಕಲಾವಿದ, ನಿರ್ದೇಶಕ ಮಾಧವ ಜಪ್ಪುಪಟ್ನ (64) ಅಲ್ಪಕಾಲದ ಅಸೌಖ್ಯದ ಬಳಿಕ ನಿಧನರಾಗಿದ್ದಾರೆ.
ಆರೋಗ್ಯದಲ್ಲಿ ಸದೃಢರಾಗಿದ್ದ ಮಾಧವರಿಗೆ ಎರಡು ವಾರಗಳ ಹಿಂದೆ ಜ್ವರ ಬಂದಿತ್ತು. ಜ್ವರದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ಆಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ಅವರು ಇಬ್ಬರು ಪುತ್ರರು, ಪತ್ನಿ ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
40ಕ್ಕೂ ಹೆಚ್ಚು ನಾಟಕ ಕೃತಿಗಳನ್ನು ಬರೆದಿದ್ದ ಮಾಧವ ಜಪ್ಪುಪಟ್ನ ಅಭಿನಯದ ಜೊತೆಗೆ ನಿರ್ದೇಶನ, ಗಾಯನವನ್ನು ಮಾಡುತ್ತಿದ್ದರು. 90ರ ದಶಕದಲ್ಲಿ ಅಸಂಖ್ಯಾತ ಹೊಸ ಕಲಾವಿದರಿಗೆ ತಮ್ಮ ನಾಟಕದಲ್ಲಿ ಅವಕಾಶ ನೀಡಿ, ರಂಗಭೂಮಿಗೆ ಪರಿಚಯ ಮಾಡಿದ್ದರು. ಅವರು ಬರೆದು, ನಿರ್ದೇಶಿಸಿದ 'ಬಂಗಾರ್ ಕಂಡನಿ' ಎನ್ನುವ ನಾಟಕ 150ಕ್ಕೂ ಹೆಚ್ಚು ಪ್ರದರ್ಶನ ಕಂಡಿತ್ತು. 'ಈ ಬಲ್ಲ್ ಯಾವ' ಎನ್ನುವ ನಾಟಕ ಅವರಿಗೆ ಜನಪ್ರಿಯತೆ ತಂದುಕೊಟ್ಟಿತ್ತು. ನಾಟಕದಲ್ಲಿ ಹಾಸ್ಯ ಕಲಾವಿದರಾಗಿ ಜನಮನ್ನಣೆ ಗಳಿಸಿದ್ದರು. ಇತ್ತೀಚೆಗೆ ತುಳು ಸಿನಿಮಾದಲ್ಲೂ ಅಭಿನಯಿಸಿದ್ದ ಮಾಧವ ಅವರು, ಬಂಗಾರ್ ಪಟ್ಲೇರ್ ಚಿತ್ರದಲ್ಲೂ ಅಭಿನಯಿಸಿದ್ದರು.
ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಮೊಕ್ತೇಸರರಾಗಿದ್ದ ಮಾಧವ ಜೆಪ್ಪುಪಟ್ನ, ಶ್ರೀ ಭಗವತೀ ತೀಯಾ ಸೇವಾ ಸಂಘ, ನವನಿಧಿ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ರಾಜ್ಯ ಪ್ರಶಸ್ತಿ ಒಳಗೊಂಡಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದರು.
Mangalore Renowned Tulu artist Jeepu Patna passes away at 64 after being tested corona positive. Jeepu Patna was a singer, author and a great artist in the Tulu drama industry.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm