ಬ್ರೇಕಿಂಗ್ ನ್ಯೂಸ್
25-12-22 08:00 pm Mangalore Correspondent ಕರಾವಳಿ
ಮಂಗಳೂರು, ಡಿ.25 : ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಪೊಲೀಸರು ಪ್ರತ್ಯಕ್ಷದರ್ಶಿಗಳ ಹೇಳಿಕೆ, ಮಾಹಿತಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆದಷ್ಟು ಬೇಗ ಆರೋಪಿಗಳ ಬಂಧನ ಆಗಲಿದೆ. ವಿಚಾರಣೆ ಬಳಿಕ ಕೃತ್ಯದ ಹಿನ್ನೆಲೆ, ಸತ್ಯಾಸತ್ಯತೆ ತಿಳಿದು ಬರಲಿದೆ ಎಂದಿದ್ದಾರೆ.
ಮೂಡುಬಿದ್ರೆಗೆ ತೆರಳುವ ಹಾದಿಯಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ, ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಹತ್ಯೆ ಘಟನೆ ಹಿನ್ನೆಲೆಯಲ್ಲಿ ಯಾರು ಕೂಡ ಊಹಾಪೋಹಕ್ಕೆ ಅವಕಾಶ ನೀಡಬೇಡಿ. ಜನರು ಶಾಂತಿ ಕಾಪಾಡಲು ಆದ್ಯತೆ ಕೊಡಬೇಕಿದೆ. ಪ್ರಕರಣದಲ್ಲಿ ತನಿಖೆಯ ಹೊಣೆಯನ್ನು ಪೊಲೀಸರಿಗೆ ಬಿಟ್ಟು ಬಿಡಿ, ಮುಕ್ತ ತನಿಖೆ ನಡೆಸಿ ಯಾರೇ ಆರೋಪಿಗಳಿದ್ದರೂ, ಅವರನ್ನು ಬಂಧಿಸುವ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಒಂದು ಘಟನೆಗೆ ಇನ್ನೇನೋ ಮಾಡಲು ಹೋಗಬೇಡಿ !
ನೈತಿಕ ಪೊಲೀಸ್ ವಿಚಾರದಲ್ಲಿ ಈ ಹಿಂದೆ ತಾವು ನೀಡಿದ್ದ ಕ್ರಿಯೆಗೆ ಪ್ರತಿಕ್ರಿಯೆ ಎಂಬ ಹೇಳಿಕೆಯೇ ಅಹಿತಕರ ಘಟನೆಗಳಿಗೆ ಕಾರಣ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ, ಯಾರೇ ಆಗಲಿ, ಹಿಂಸೆಗೆ ಆಸ್ಪದ ಕೊಟ್ಟಲ್ಲಿ ಅದನ್ನು ಹತ್ತಿಕ್ಕುವ ಕೆಲಸವನ್ನು ಸಮಾಜ, ಸರಕಾರ ಮಾಡುತ್ತದೆ. ಹಿಂಸೆಗೆ ದಾರಿ ಮಾಡಿಕೊಡುವಂಥ ಯಾವುದೇ ಪ್ರಕ್ರಿಯೆಯನ್ನು ಹತ್ತಿಕ್ಕುವುದು ಸಮಾಜ ಮತ್ತು ಸರ್ಕಾರದ ಕರ್ತವ್ಯ. ಅದನ್ನು ನಿರಾಕರಣೆ ಮಾಡಲಾಗದು. ಯಾವುದೇ ಒಂದು ಘಟನೆಯಾದರೆ ಅದಕ್ಕೆ ಪ್ರತಿಯಾಗಿ ಇನ್ನೇನೊ ಮಾಡಲು ಹೋದರೆ ಆ ಘಟನೆಯ ನೈಜ ಕಾರಣ ಏನೆನ್ನುವುದು ತಪ್ಪಿ ಹೋಗುತ್ತದೆ. ಯಾವುದೇ ಘಟನೆಯಾದ್ರೂ ತನಿಖೆಯ ಹೊಣೆಯನ್ನು ಪೊಲೀಸರಿಗೆ ಬಿಟ್ಟುಬಿಡಿ. ಮುಕ್ತ, ನಿಷ್ಪಕ್ಷಪಾತ ತನಿಖೆ ಮಾಡಿ, ಘಟನೆಯ ನೈಜ ಕಾರಣವನ್ನು ಹೊರಗೆ ತರುತ್ತಾರೆ ಎಂದು ಹೇಳಿದರು.
"It's unfortunate that Jaleel has been murdered. The police will take suitable action. The probe is in progress. As per eye witnesses two people have murdered Jaleel. We have faith that they will be caught and will be interrogated to find the motive behind the murder," said chief minister Basavaraj Bommai here on Sunday, December 25,
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm