ಬ್ರೇಕಿಂಗ್ ನ್ಯೂಸ್
26-12-22 01:32 pm Udupi Correspondent ಕರಾವಳಿ
ಉಡುಪಿ, ಡಿ.25: ಕಳೆದ ಮೇ ತಿಂಗಳಲ್ಲಿ ಉದ್ಘಾಟನೆಯಾದ ಎರಡೇ ದಿನದಲ್ಲಿ ತುಂಡಾಗಿ ಕೊಚ್ಚಿ ಹೋಗಿದ್ದ ಮಲ್ಪೆಯ ತೇಲುವ ಸೇತುವೆಯನ್ನು ಮತ್ತೆ ಯಥಾಸ್ಥಿತಿಗೆ ತರಲಾಗಿದೆ. ಕೇರಳ ಮತ್ತು ಮುಂಬೈನ ತಜ್ಞರು ಪರಿಶೀಲನೆ ನಡೆಸಿದ ಬಳಿಕ ತೇಲುವ ಸೇತುವೆಯನ್ನು ಸಾರ್ವಜನಿಕ ಉಪಯೋಗಕ್ಕಾಗಿ ಡಿ.25ರಂದು ಲೋಕಾರ್ಪಣೆ ಮಾಡಲಾಗಿದೆ.
ಉಡುಪಿ ಶಾಸಕ ರಘುಪತಿ ಭಟ್, ಎರಡನೇ ಬಾರಿಗೆ ಸೇತುವೆಯನ್ನು ಉದ್ಘಾಟನೆ ಮಾಡಿದ್ದು, ಪ್ರವಾಸಿಗರ ಬಳಕೆಗೆ ಚಾಲನೆ ನೀಡಿದ್ದಾರೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತು ಎಸ್ಪಿ ಅಕ್ಷಯ್ ಹಾಕೆ ಉಪಸ್ಥಿತರಿದ್ದರು. ಕರ್ನಾಟಕದ ಮೊಟ್ಟಮೊದಲ ತೇಲುವೆ ಸೇತುವೆ ಇದಾಗಿದ್ದು, ಇದಕ್ಕೂ ಮೊದಲು ಕೇರಳದಲ್ಲಿ ಇದೇ ಮಾದರಿಯ ತೇಲುವ ಸೇತುವೆಯನ್ನು ಮಾಡಲಾಗಿತ್ತು. ಅಲ್ಲಿನದ್ದೇ ಮಾದರಿಯಲ್ಲಿ ಮಲ್ಪೆ ಬೀಚ್ ನಲ್ಲಿ ಪ್ರಯೋಗ ಮಾಡಲಾಗಿತ್ತು. ಆದರೆ ಇಲ್ಲಿನ ಸಮುದ್ರದ ಭೋರ್ಗರೆತದ ನಡುವೆ ಸೇತುವೆ ಕೊಚ್ಚಿ ಹೋಗಿತ್ತು.
ಇದೀಗ ಮುಂಬೈನ ಎಚ್ಎನ್ ಮೆರೈನ್ ಕಂಪನಿಯ ತಜ್ಞರು ಬಂದು ಸರ್ಟಿಫೈ ಮಾಡಿದ್ದಾರೆ. ಅಲ್ಲದೆ, ಸೇತುವೆಯ ಸಾಮರ್ಥ್ಯ ಮತ್ತು ಶಕ್ತಿಯ ಬಗ್ಗೆ ಪ್ರಯೋಗವನ್ನೂ ಮಾಡಿದ್ದಾರೆ. ಇತ್ತೀಚೆಗೆ ಬಂದಿದ್ದ ಮಾಂಡೋಸ್ ಚಂಡಮಾರುತದ ಸಂದರ್ಭದಲ್ಲಿ ಅಬ್ಬರದ ಅಲೆಗಳಿಗೆ ಸೇತುವೆಯನ್ನು ನೀರಿನಲ್ಲಿ ಬಿಟ್ಟು ಸಮಸ್ಯೆ ಎದುರಾಗುತ್ತಾ ಎಂದು ಪರೀಕ್ಷೆಗೆ ಒಡ್ಡಲಾಗಿತ್ತು. ಪ್ರಾಯೋಗಿಕ ಪರೀಕ್ಷೆಯ ಬಳಿಕ ಉಡುಪಿ ಜಿಲ್ಲಾಡಳಿತ ಪ್ರವಾಸಿಗರ ಬಳಕೆಗೆ ಅನುಮತಿ ನೀಡಿದೆ.
ತೇಲುವ ಸೇತುವೆಯು 120 ಮೀಟರ್ ಉದ್ದವಿದ್ದು, 3.5 ಮೀಟರ್ ಅಗಲ ಹೊಂದಿದೆ. ಏಕಕಾಲದಲ್ಲಿ ನೂರಕ್ಕೂ ಹೆಚ್ಚು ಮಂದಿ ನಿಲ್ಲುವಷ್ಟು ಸಾಮರ್ಥ್ಯವನ್ನೂ ಹೊಂದಿದೆ. ಸೇತುವೆಯ ಎರಡೂ ಬದಿಯಲ್ಲಿ ಸ್ಟೀಲ್ ರಾಡ್ ಇಡಲಾಗಿದ್ದು, ಪ್ರವಾಸಿಗರು ಅದನ್ನು ಹಿಡಿದು ನಡೆದು ಹೋಗುವಂತೆ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಸೇತುವೆಯ ಉದ್ದಕ್ಕೂ 15 ಮಂದಿ ಲೈಫ್ ಗಾರ್ಡ್, 50 ಮಂದಿ ಲೈಫ್ ಬಾಯ್ಸ್ ಮತ್ತು ಮುಂಜಾಗ್ರತೆಗಾಗಿ ಬೋಟ್ ಇರುತ್ತದೆ. ಸೇತುವೆಯ ಮೇಲೆ ಹೋಗುವ ಮಂದಿ ಪ್ರತಿಯೊಬ್ಬರೂ ಲೈಫ್ ಜಾಕೆಟ್ ಹಾಕ್ಕೊಂಡು ಹೋಗಬೇಕಾಗುತ್ತದೆ. ಶೇಖರ್ ಪುತ್ರನ್, ಧನಂಜಯ ಕಾಂಚನ್ ಮತ್ತು ಸುದೇಶ್ ಶೆಟ್ಟಿ ಪಾಲುದಾರಿಕೆಯಲ್ಲಿ ತೇಲುವ ಸೇತುವೆಯನ್ನು ವ್ಯವಸ್ಥೆ ಮಾಡಲಾಗಿದೆ.
MLA Raghupati Bhat inaugurated floating bridge at Malpe beach on Sunday December 25. Bhat said that except Kerala, Malpe beach is the only one that has floating bridge which will increase the joy of tourists. Former minister Pramod Madhwaraj and SP Akshay Hake were the chief guests. A similar bridge was inaugurated in May but it got broken in just two days due to technical fault.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm