ಬ್ರೇಕಿಂಗ್ ನ್ಯೂಸ್
16-10-20 01:29 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 16: ಮಂಗಳೂರು ಏರ್ಪೋರ್ಟ್ ಅದಾನಿ ಉದ್ಯಮ ಸಮೂಹದ ತೆಕ್ಕೆಗೆ ಬಿದ್ದಿದ್ದು ಹಸ್ತಾಂತರ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಈ ತಿಂಗಳ ಅಂತ್ಯದ ಒಳಗೆ ಏರ್ಪೋರ್ಟ್ ಹೊಣೆ ಪೂರ್ತಿ ಗೌತಮ್ ಅದಾನಿ ಒಡೆತನದ ಅದಾನಿ ಸಂಸ್ಥೆಗೆ ಬೀಳುವ ನಿರೀಕ್ಷೆಯಿದೆ. ಏರ್ಪೋರ್ಟ್ ಸ್ಥಾಪನೆಯಾದ 69 ವರ್ಷಗಳ ಬಳಿಕ ವಿಮಾನ ನಿಲ್ದಾಣ ಸರಕಾರದ ಬಳಿಯಿಂದ ಖಾಸಗಿ ತೆಕ್ಕೆಗೆ ಜಾರಲಿದೆ.
ಮಾಹಿತಿ ಪ್ರಕಾರ, ನವೆಂಬರ್ 1ರಿಂದ ಏರ್ಪೋರ್ಟ್ ನಿರ್ವಹಣೆಯ ಹೊಣೆಯನ್ನು ಅದಾನಿ ಸಂಸ್ಥೆಗೆ ಅಧಿಕೃತವಾಗಿ ಹಸ್ತಾಂತರ ಆಗಲಿದೆ ಎನ್ನಲಾಗುತ್ತಿದೆ. ಹಸ್ತಾಂತರ ಆದರೂ, ಸದ್ಯಕ್ಕೆ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಅದಾನಿ ಸಂಸ್ಥೆ ಸಮಾನಾಂತರ ಹೊಣೆ ಹೊಂದಿರಲಿವೆ. ಆದರೆ, ಈ ವೇಳೆ ವಾಣಿಜ್ಯ ಚಟುವಟಿಕೆ, ಲಾಭ-ನಷ್ಟ ವ್ಯವಹಾರವನ್ನೂ ಅದಾನಿ ಸಂಸ್ಥೆಯೇ ನೋಡಿಕೊಳ್ಳಲಿದೆ. ವಿಮಾನ ನಿಲ್ದಾಣ ಪ್ರಾಧಿಕಾರ, ಒಟ್ಟು ವ್ಯವಸ್ಥೆಯ ಬಗ್ಗೆ ಮಾರ್ಗದರ್ಶಕ ಸ್ಥಾನದಲ್ಲಿ ಮಾತ್ರ ಇರಲಿದೆ. ಸದ್ಯಕ್ಕೆ ಅಲ್ಲಿನ ಉದ್ಯೋಗಿಗಳು ಕೂಡ ಯಥಾಸ್ಥಿತಿ ಇರಲಿದ್ದಾರೆ. ವರ್ಷದ ಬಳಿಕ ಹೊಸ ನೇಮಕಾತಿಯನ್ನು ಅದಾನಿ ಸಂಸ್ಥೆ ನಡೆಸಲಿದೆ.


ಹಸ್ತಾಂತರ ಪ್ರಕ್ರಿಯೆ ಬಳಿಕವೂ ವಿಮಾನಗಳ ಆಗಮನ - ನಿರ್ಗಮನದ ಉಸ್ತುವಾರಿ ಹೊಣೆ ಪ್ರಾಧಿಕಾರದಲ್ಲೇ ಇರಲಿದೆ. ಹೀಗಾಗಿ ಏರ್ ಟ್ರಾಫಿಕ್ ಕಂಟ್ರೋಲ್ ಹಾಗೂ ಕಮ್ಯುನಿಕೇಶನ್ ಆ್ಯಂಡ್ ನೇವಿಗೇಷನ್ ಸೆಂಟರ್ನ ಉಸ್ತುವಾರಿ ಪ್ರಾಧಿಕಾರದಲ್ಲೆ ಇರಲಿದೆ. ಭದ್ರತೆ ಹೊರತುಪಡಿಸಿ ಟರ್ಮಿನಲ್ ಕಟ್ಟಡ, ರನ್ ವೇ, ಎಲೆಕ್ಟ್ರಿಕಲ್, ಸಿವಿಲ್ ಸೇರಿದಂತೆ ಎಲ್ಲ ವಿಚಾರಗಳನ್ನು ಅದಾನಿ ಸಂಸ್ಥೆ ನಿರ್ವಹಿಸಲಿದೆ.
ನಿಲ್ದಾಣದ ಒಟ್ಟು ಪ್ರಕ್ರಿಯೆ ಬಗ್ಗೆ ಅದಾನಿ ಸಂಸ್ಥೆಯ ಉನ್ನತ ಅಧಿಕಾರಿಗಳು ಅಧ್ಯಯನ ಮಾಡಿದ್ದಾರೆ. ಹಸ್ತಾಂತರ ಬಳಿಕ ನಿಲ್ದಾಣದ ನಿರ್ದೇಶಕ ಹುದ್ದೆ ಇರುವುದಿಲ್ಲ. ಬದಲಿಗೆ, ಅದಾನಿ ಸಂಸ್ಥೆಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಅದಾನಿ ಸಂಸ್ಥೆ ಪೂರ್ತಿಯಾಗಿ ಕೈಗೆ ತೆಗೆದುಕೊಂಡ ಬಳಿಕ ರನ್ವೇ ವಿಸ್ತರಣೆ, ಹೊಸದಿಲ್ಲಿ- ಮುಂಬಯಿ ಏರ್ಪೋರ್ಟ್ ಮಾದರಿಯಲ್ಲಿ ಮಂಗಳೂರಿನಲ್ಲೂ ಪ್ರತ್ಯೇಕ ಕಾಂಪ್ಲೆಕ್ಸ್, ಮಾಲ್ಗಳು ಬರಲಿದ್ದು ಅದಕ್ಕಾಗಿ ಕಂಪೆನಿ ದೊಡ್ಡ ಮಟ್ಟಿನ ಹೂಡಿಕೆ ಮಾಡಲಿದೆ.
2018ರ ಡಿಸೆಂಬರ್ನಲ್ಲಿ ಮಂಗಳೂರು ವಿಮಾನ ನಿಲ್ದಾಣದ ಖಾಸಗಿ ಸಹಭಾಗಿತ್ವದಡಿ ಅಭಿವೃದ್ಧಿ ಪಡಿಸಲು ಟೆಂಡರ್ ಆಹ್ವಾನಿಸಲಾಗಿತ್ತು. 2020ರ ಫೆಬ್ರವರಿಯಲ್ಲಿ ಅದಾನಿ ಸಂಸ್ಥೆಯ ಜತೆಗೆ ಕೇಂದ್ರ ಸರಕಾರ ಒಪ್ಪಂದ ಮಾಡಿದ್ದಲ್ಲದೆ, ಮುಂದಿನ 50 ವರ್ಷಗಳ ವರೆಗೆ ಗುತ್ತಿಗೆ ನೀಡಲಾಗಿತ್ತು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm