ಗುಂಡ್ಯದಲ್ಲಿ ಒಂಟಿ ಸಲಗ ದಾಳಿ ; ಮೀನು ಹಿಡಿಯಲು ಬಂದಿದ್ದ ತಂದೆ ಸಾವು, ಮಗ ಗಂಭೀರ 

01-01-23 02:42 pm       Mangalore Correspondent   ಕರಾವಳಿ

ತಂದೆ ಮತ್ತು ಮಗ ಮೀನು ಹಿಡಿಯಲೆಂದು ಹೊಳೆಗೆ ತೆರಳಿದ ಸಂದರ್ಭ ಒಂಟಿ ಸಲಗ ದಾಳಿ ಮಾಡಿದ್ದು, ತಂದೆ ಸಾವನ್ನಪ್ಪಿ, ಮಗ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಗುಂಡ್ಯ ಹೊಳೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ. 

ಪುತ್ತೂರು, ಜ.1 : ತಂದೆ ಮತ್ತು ಮಗ ಮೀನು ಹಿಡಿಯಲೆಂದು ಹೊಳೆಗೆ ತೆರಳಿದ ಸಂದರ್ಭ ಒಂಟಿ ಸಲಗ ದಾಳಿ ಮಾಡಿದ್ದು, ತಂದೆ ಸಾವನ್ನಪ್ಪಿ, ಮಗ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಗುಂಡ್ಯ ಹೊಳೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ. 

ಮೃತರನ್ನು ಶಿರಾಡಿ ಗ್ರಾಮದ ಜನತಾ ಕಾಲನಿ ನಿವಾಸಿ ತಿಮ್ಮಪ್ಪ (45) ಎಂದು ಗುರುತಿಸಲಾಗಿದೆ. ಅವರ ಪುತ್ರ ಶರಣ್ ಗಂಭೀರ ಗಾಯಗೊಂಡು ನೆಲ್ಯಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಗ ಶರಣ್ ಮೀನು ಹಿಡಿಯಲು ಗುಂಡ್ಯ ಹೊಳೆ ಬದಿಗೆ ಹೋಗಿದ್ದ ವೇಳೆ, ಅಲ್ಲಿಗೆ ಬಂದಿದ್ದ ಒಂಟಿ ಸಲಗ ಶರಣ್ ಮೇಲೆ ದಾಳಿಗೆ ಮುಂದಾಗಿದೆ.

ಈ ವೇಳೆ ಮಗನ ರಕ್ಷಣೆಗೆ ಓಡಿ ಬಂದ ತಿಮ್ಮಪ್ಪ ಅವರನ್ನು ಆನೆ ಸೊಂಡಿಲಿನಿಂದ ಕೆಡವಿದ್ದು ಬಳಿಕ ತುಳಿದು ಹಾಕಿದೆ. ಗಂಭೀರ ಗಾಯಗೊಂಡ ತಿಮ್ಮಪ್ಪ ಅವರನ್ನು ನಿನ್ನೆ ರಾತ್ರಿಯೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿಯೇ ಸಾವನ್ನಪ್ಪಿದ್ದಾರೆ. ನೆಲ್ಯಾಡಿ ಹೊರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

The menace of elephants in Shiradi and Kombaru does not seem to stop. Forests continue to attack farmers from above. An elephant attacked a father and son who went fishing. The father died and the son sustained minor injuries.Around 6.30 pm on December 31, Thimmappa (45) and his son Sharan (18), a resident of Janata Colony in Shiradi village, went to the side of the stream in the Siribagilu reserve forest area below the Siribagilu bus stand to fish.