ಬ್ರೇಕಿಂಗ್ ನ್ಯೂಸ್
02-01-23 03:10 pm Mangalore Correspondent ಕರಾವಳಿ
ಮಂಗಳೂರು, ಜ.2 : ರಾತ್ರಿ ಹೊತ್ತಿನಲ್ಲಿ ಅಧಿಕಾರಿಗಳ ಹಾಗೂ ಪೊಲೀಸ್ ಇಲಾಖೆಯ ಕೃಪಾಕಟಾಕ್ಷದಿಂದಲೇ ಜಿಲ್ಲೆಯಾದ್ಯಂತ ಅಕ್ರಮ ಮರಳು ಸಾಗಾಟದ ದಂಧೆ ನಡೆಯುತ್ತಿದೆ. ಇದರಿಂದಾಗಿ ಕೋಟ್ಯಂತರ ರುಪಾಯಿ ತೆರಿಗೆ ಹಣ ಸರಕಾರಕ್ಕೆ ನಷ್ಟ ಆಗುತ್ತಿದೆ ಎಂದು ದಕ್ಷಿಣ ಕನ್ನಡ ಸಿವಿಲ್ ಗುತ್ತಿಗೆದಾರರ ಸಂಘ ಆರೋಪಿಸಿದೆ.
ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಉಪಾಧ್ಯಕ್ಷ ದಿನಾಕರ್ ಸುವರ್ಣ, ರಾತ್ರಿ ಹೊತ್ತಿನಲ್ಲಿ ಅಧಿಕಾರಿಗಳ ಹೊಂದಾಣಿಕೆಯಿಂದ ಮರಳು ಸಿಗುತ್ತದೆ. ಪೊಲೀಸ್ ಅಧಿಕಾರಿಗಳಿಗೆ ಯಾವ ಲಾರಿಗಳನ್ನು ವಶಕ್ಕೆ ಪಡೆಯಬಾರದೆಂದು ಸೂಚನೆ ಇದೆ. ಹಗಲು ಹೊತ್ತಿನಲ್ಲಿ ಮರಳು ಸಾಗಾಟ ಮಾಡಿದ್ರೆ, ಕೆಲವರು ಪ್ರಶ್ನೆ ಮಾಡುತ್ತಾರೆ. ಹಾಗಾಗಿ ರಾತ್ರಿ ಹೊತ್ತಿನಲ್ಲೇ ಅಕ್ರಮ ಮರಳು ಸಾಗಾಟ ಆಗುತ್ತದೆ. ಮೊದಲು ಇದು ವೃತ್ತಿಯಾಗಿತ್ತು, ಇದೀಗ ಕಳ್ಳದಂಧೆಯಾಗಿ ಮಾರ್ಪಟ್ಟಿದೆ. ಇದರಿಂದ ಗಣಿ ಇಲಾಖೆಗೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿದೆ ಎಂದು ಹೇಳಿದರು.
ಸಂಘದ ಅಧ್ಯಕ್ಷ ಮಹಾಬಲ ಕೊಟ್ಟಾರಿ ಮಾತನಾಡಿ, ಕಳೆದ ಎರಡು ವಾರಗಳಿಂದ ಕಟ್ಟಡ ನಿರ್ಮಾಣಕ್ಕೆ ಉಪಯೋಗಿಸುವ ಕ್ರಷರ್ ಜಲ್ಲಿಯ ಪೂರೈಕೆ ಸ್ಥಗಿತಗೊಂಡಿದೆ. ಜಲ್ಲಿಯ ಲಭ್ಯತೆಯಿಲ್ಲದ ಕಾರಣ ಗುತ್ತಿಗೆದಾರರು ಕಟ್ಟಡ ಕಾಮಗಾರಿಗಳನ್ನು ನಡೆಸಲಾಗದ ಸ್ಥಿತಿಯಲ್ಲಿದ್ದಾರೆ. ಇದರಿಂದ ಉತ್ತರ ಭಾರತದಿಂದ ಬಂದು ನೆಲೆ ಕಂಡುಕೊಂಡ ಕೂಲಿ ಕಾರ್ಮಿಕರಿಗೆ ಕೆಲಸ ನೀಡಲಾರದ ಪರಿಸ್ಥಿತಿ ತಲೆದೋರಿದೆ. ಇದಲ್ಲದೆ, ಅಕ್ರಮ ದಂಧೆಕೋರರಿಂದ ದುಪ್ಪಟ್ಟು ಹಣ ಕೊಟ್ಟು ಮರಳು ಪಡೆಯಬೇಕಾಗಿದೆ. ಇದರಿಂದ ಜನಸಾಮಾನ್ಯರಿಗೂ ನಷ್ಟ, ನಮಗೂ ನಷ್ಟವಾಗಿದೆ ಎಂದು ದೂರಿದರು.
ನಿರ್ಮಾಣ ಕಾಮಗಾರಿಗಳಿಗೆ ಕ್ರಷರ್ ಜಲ್ಲಿಯನ್ನು ಪೂರೈಸುವ ಪೂರೈಕೆದಾರರು, ಸರ್ಕಾರದ ನೀತಿ, ನಿಯಮಾವಳಿ ಮತ್ತು ಧೋರಣೆಯಿಂದ ಕ್ರಷರ್ ನಡೆಸಲು ತೊಂದರೆ ಎದುರಿಸುತ್ತಿದ್ದಾರೆ. ಜಿಲ್ಲೆಯಾದ್ಯಂತ ಅನೇಕ ಕಟ್ಟಡ ನಿರ್ಮಾಣ ಕಾಮಗಾರಿಗಳು ನಡೆಯುತ್ತಿದ್ದು, ರಾಜ್ಯದ ಮಾತ್ರವಲ್ಲದೆ, ಹೊರ ರಾಜ್ಯಗಳ ಲಕ್ಷಾಂತರ ಮಂದಿ ಕೂಲಿ ಕಾರ್ಮಿಕರು ದುಡಿಯುತ್ತಿದ್ದು, ತಮ್ಮ ಬದುಕನ್ನು ಕಟ್ಟಿಕೊಳ್ಳುತ್ತಿದ್ದಾರೆ. ಇದೀಗ ಎರಡು ವಾರಗಳಿಂದ ಜಲ್ಲಿಯ ಪೂರೈಕೆ ಸ್ಥಗಿತಗೊಂಡು ನಿರ್ಮಾಣ ಕಾಮಗಾರಿಗಳು ಅರ್ಧದಲ್ಲಿ ನಿಂತು ಹೋಗಿದೆ. ಹೀಗಾಗಿ ಸಾವಿರಾರು ಕುಟುಂಬಗಳು ಬೀದಿ ಪಾಲಾಗುವ ಸಂಭವವಿದೆ. ಈ ಸಮಸ್ಯೆಯನ್ನು ಶೀಘ್ರ ಪರಿಹಾರ ಕಾಣದಿದ್ದರೆ, ಕಾರ್ಮಿಕರನ್ನೊಗೊಂಡು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಸತೀಶ್ ಕುಮಾರ್ ಜೋಗಿ, ಕಾರ್ಯದರ್ಶಿ ದೇವಾನಂದ, ಟ್ರಸ್ಟಿ ಸುರೇಶ್ ಉಪಸ್ಥಿತರಿದ್ದರು.
Mangalore Illegal sand mining is still active, DK Civil contractors association slam police department.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm