ಬ್ರೇಕಿಂಗ್ ನ್ಯೂಸ್
02-01-23 05:34 pm Mangalore Correspondent ಕರಾವಳಿ
ಮಂಗಳೂರು, ಜ.2: ವಿಧಾನಸಭೆ ವಿಪಕ್ಷ ಉಪನಾಯಕ ಯುಟಿ ಖಾದರ್ ಅವರಿಗೆ ಯಾರೋ ಅಪರಿಚಿತರು ರಾಹುಲ್ ಗಾಂಧಿಯ ಪಿಎ ಎಂದು ಹೇಳಿಕೊಂಡು ಫೋನ್ ಮಾಡಿ ಯಾಮಾರಿಸಲು ಯತ್ನಿಸಿದ್ದಾನೆ. ಈ ಬಗ್ಗೆ ತಿಳಿಯುತ್ತಲೇ ಯುಟಿ ಖಾದರ್ ಮಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದು, ನಕಲಿ ವ್ಯಕ್ತಿಯ ಬಗ್ಗೆ ತನಿಖೆ ನಡೆಸಲು ಕೋರಿದ್ದಾರೆ. ಪೊಲೀಸರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇಂದು ಮಧ್ಯಾಹ್ನ ಯುಟಿ ಖಾದರ್ ಅವರ ಮೊಬೈಲ್ ಸಂಖ್ಯೆಗೆ 8146006626 ನಂಬರಿನಿಂದ ಕರೆ ಬಂದಿತ್ತು. ಎರಡು ಬಾರಿ ಫೋನ್ ಕರೆ ಬಂದಿದ್ದರಿಂದ ಸಭೆಯಲ್ಲಿ ಭಾಗವಹಿಸಿದ್ದರಿಂದ ಕರೆ ಸ್ವೀಕರಿಸಲು ಆಗಿರಲಿಲ್ಲ. ಸಭೆ ಮುಗಿಸಿ ಮೊಬೈಲ್ ನೋಡಿದಾಗ, ಅದೇ ನಂಬರಿನಿಂದ ಸಂದೇಶ ಬಂದಿತ್ತು. Good afternoon this side kaniskha singh pa to shri rahul Gandhi ji call me ಎಂದು ಸಂದೇಶ ಬರೆಯಲಾಗಿತ್ತು. ಆ ಮೊಬೈಲ್ ಸಂಖ್ಯೆಯನ್ನು ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೆಸರಲ್ಲಿ ಸೇವ್ ಮಾಡಿರುವುದು ಟ್ರೂ ಕಾಲರ್ ಮೂಲಕ ತಿಳಿದುಬಂದಿದೆ.
ಈ ಕುರಿತು ಮಾಹಿತಿ ಕಲೆಹಾಕಿದಾಗ ನಕಲಿ ಹೆಸರಿನಲ್ಲಿ ಬಂದಿರುವ ಕರೆಯೆಂದು ಮನವರಿಕೆಯಾಗಿದೆ. ಈ ಕುರಿತು ತನಿಖೆ ನಡೆಸಿ, ಕರೆ ಮಾಡಿದವರು ಯಾರು, ಯಾಕಾಗಿ ಕರೆ ಮಾಡಿದ್ದಾರೆಂದು ಪತ್ತೆ ಮಾಡಬೇಕು ಎಂದು ಯುಟಿ ಖಾದರ್, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಗೆ ದೂರು ನೀಡಿದ್ದಾರೆ. ಮೇಲ್ನೋಟಕ್ಕೆ ನಕಲಿ ಹೆಸರಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಡೆಯಿಂದ ಎಂದು ಹೇಳಿ ಕರೆ ಮಾಡಿ, ಶಾಸಕರನ್ನು ಯಾಮಾರಿಸಲು ಯತ್ನಿಸುವ ಕೃತ್ಯ ಎನ್ನಲಾಗುತ್ತಿದೆ. ಲೋನ್ ಕೊಡುತ್ತೇವೆ, ಆಧಾರ್ ಲಿಂಕ್ ಆಗಿಲ್ಲವೆಂದು ಸೈಬರ್ ವಂಚಕರು ಫೋನ್ ಮಾಡುವ ರೀತಿ, ರಾಹುಲ್ ಗಾಂಧಿಯ ಪಿಎ ಎಂದು ಹೇಳಿಕೊಂಡು ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿರುವ ಸಾಧ್ಯತೆಯಿದೆ.
Mangalore Man tries to dupe MLA UT Khader as Rahul Gandhi PA, files a complaint to Mangalore Police commissioner Shashi Kumar.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm