ಬ್ರೇಕಿಂಗ್ ನ್ಯೂಸ್
03-01-23 02:15 pm Mangalore Correspondent ಕರಾವಳಿ
ಮಂಗಳೂರು, ಜ.3: ಭಾನುವಾರ ಸಂಜೆ ತಣ್ಣೀರುಬಾವಿಯಲ್ಲಿ ಆರನೇ ಕ್ಲಾಸ್ ವಿದ್ಯಾರ್ಥಿಗೆ ಪೊಲೀಸರು ಲಾಠಿಯೇಟು ಕೊಟ್ಟು ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಪೊಲೀಸ್ ಕಮಿಷನರ್ ಶಶಿಕುಮಾರ್ ಪಣಂಬೂರು ಠಾಣೆಯ ಸುನಿಲ್ ಎಂಬ ಪೇದೆಯನ್ನು ಸಸ್ಪೆಂಡ್ ಮಾಡಿದ್ದಾರೆ.
ಭಾನುವಾರ ಸಂಜೆ ತಣ್ಣೀರುಬಾವಿಯಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಇದ್ದುದರಿಂದ ರಸ್ತೆ ಪೂರ್ತಿ ಬ್ಲಾಕ್ ಆಗಿತ್ತು. ಕರ್ತವ್ಯದಲ್ಲಿದ್ದ ಪಣಂಬೂರು ಪೊಲೀಸರು ರಸ್ತೆಯ ಟ್ರಾಫಿಕ್ ಕ್ಲಿಯರ್ ಮಾಡುವುದರಲ್ಲಿ ನಿರತರಾಗಿದ್ದರು. ಈ ವೇಳೆ, ಕ್ರಿಕೆಟ್ ಆಡಿ ಬೈಕಿನಲ್ಲಿ ಮರಳುತ್ತಿದ್ದ ಹುಡುಗರ ಮೇಲೆ ಪೊಲೀಸರು ದರ್ಪ ತೋರಿದ್ದಾರೆ.
ಐದಾರು ಮಂದಿ ಯುವಕರ ಮೇಲೆ ಲಾಠಿ ಚಾರ್ಜ್ ಮಾಡಿದ್ದರು. ಈ ಪೈಕಿ ಆರನೇ ಕ್ಲಾಸ್ ವಿದ್ಯಾರ್ಥಿ ಮತ್ತು ಪಿಯುಸಿ ವಿದ್ಯಾರ್ಥಿಯೂ ಸೇರಿದ್ದರು. ಸಣ್ಣ ಹುಡುಗನಿಗೆ ಲಾಠಿಯಿಂದ ಕೈ, ಬೆನ್ನು, ಕಾಲಿಗೆ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಹುಡುಗನನ್ನು ಸ್ಥಳೀಯರು ಎತ್ತಿಕೊಂಡು ಆಸ್ಪತ್ರೆಗೆ ಸಾಗಿಸಿದ್ದರು. ಇದೇ ವೇಳೆ, ಸ್ಥಳದಲ್ಲಿ ಜಮಾಯಿಸಿದ್ದ ಯುವಕರು ಪೊಲೀಸರನ್ನು ತರಾಟೆಗೆತ್ತಿಕೊಂಡು ದಬಾಯಿಸಿದ್ದಾರೆ. ನೀವು ಲಾಠಿ ಚಾರ್ಜ್ ಮಾಡಿದ್ದು ಯಾಕೆ, ನೀವು ಭಾರೀ ಲಾಠಿ ಬೀಸುತ್ತೀರಾ ಎಂದು ಪೊಲೀಸರನ್ನು ಪ್ರಶ್ನೆ ಮಾಡಿದ್ದರು.
ಘಟನೆ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಗಮನಕ್ಕೆ ತಂದು ಪೊಲೀಸ್ ಕಮಿಷನರಿಗೆ ದೂರು ನೀಡುವಂತೆ ಮಾಡಿದ್ದರು. ಶಾಸಕರ ಸೂಚನೆಯಂತೆ, ಇಲಾಖಾ ತನಿಖೆ ನಡೆದು ಲಾಠಿ ಬೀಸಿದ್ದ ಪೇದೆ ಸುನೀಲ್ ಎಂಬವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಪಣಂಬೂರು ಎಸ್ಐ ಸ್ಥಳದಲ್ಲಿ ಇದ್ದಾಗಲೇ ಲಾಠಿಯಲ್ಲಿ ದೌರ್ಜನ್ಯ ಎಸಗಲಾಗಿತ್ತು. ಎಸ್ಐ ಬಂದು ಯಾಕೆ ಲಾಠಿ ಚಾರ್ಜ್ ಮಾಡಿದ್ದು ಎಂದು ಪೊಲೀಸರನ್ನು ಪ್ರಶ್ನೆ ಮಾಡಿದ್ದರು. ಬಳಿಕ ಎಸ್ಐ ಸೇರಿ ಹಿರಿಯಧಿಕಾರಿಗಳು ಬಂದು ಸ್ಥಳೀಯರನ್ನು ಸಮಾಧಾನಪಡಿಸುವ ಕೆಲಸ ಮಾಡಿದ್ದರು.
Mangalore Police atrocity at Tannirbhavi beach, Constable Sunil Suspended. The police here allegedly lathi-charged youths at Tannirbhavi beach to clear the traffic block. A class 6 student and PU students also reportedly received blows during the atrocity from the police. Locals took the cops to task. A class 6 student was injured seriously and admitted to the hospital. Local public gheraoed the police and took three cops on spot to task.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm